ಚಿತ್ರದುರ್ಗ: ಯುವಕರು ದಿನಾಲು ರ್ಯಾಗಿಂಗ್ ಮಾಡುತ್ತಿದ್ದ ಹಿನ್ನೆಲೆ ಯುವತಿಯೊಬ್ಬಳು ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗ ತಾಲೂಕಿನ ಕೋಡಿಹಟ್ಟಿ ಗ್ರಾಮದಲ್ಲಿ ನಡೆದಿದೆ.
ಅಲಿಯಾಸ್ ಮುತ್ತಪ್ಪ (21), ಸುದೀಪ್ (19), ಕೋಟೆಶ್ (19), ಅಭಿಷೇಕ್ (22) ಬಂಧಿತ ಆರೋಪಿಗಳು. ಯುವತಿ ಕಾಲೇಜಿಗೆ ಹೋಗುವಾಗ ದಾರಿಯಲ್ಲಿ ನಿಂತು ಪ್ರತಿದಿನ ರೇಗಿಸುತ್ತಿದ್ದರು. ಇದರಿಂದ ಮನನೊಂದ ಯುವತಿಯು ಡಿ.19 ರಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಮದ್ಯ ಖರೀದಿಸಲು ಹಣ ನೀಡದ್ದಕ್ಕೆ ಗೆಳತಿಯ ಮೂಗನ್ನೇ ಕತ್ತರಿಸಿದ!
ಆಕೆಯ ಸಾವಿನ ಸುದ್ದಿಯನ್ನು ಕೇಳಿದ ಬಳಿಕ ಆರೋಪಿಗಳು ಸ್ಥಳದಿಂದ ನಾಪತ್ತೆಯಾಗಿದ್ದರು. ಕಳೆದ ಏಳು ದಿನಗಳಿಂದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದು ಇಂದು ಬೆಳಗ್ಗೆ ಕಿಡಿಗೇಡಿಗಳನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಜಿ.ರಾಧಿಕಾ ಮಾಹಿತಿ ನೀಡಿದ್ದಾರೆ.