ಸಾರಿಗೆ ಬಸ್‌ನಲ್ಲಿ ಕಳ್ಳತನಕ್ಕೆ ಯತ್ನ – ಖತರ್ನಾಕ್ ಕಳ್ಳಿಯರು ಅರೆಸ್ಟ್

Public TV
1 Min Read
mandya arrest 2

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಸಾರಿಗೆ ಬಸ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಮೂವರು ಖತರ್ನಾಕ್ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ನಲ್ಲಿ ಮೂವರು ಕಳ್ಳಿಯರು, ಪ್ರಯಾಣಿಕರ ಬಳಿ ಇದ್ದಂತಹ ಚಿನ್ನಾಭರಣವನ್ನು ಕಳ್ಳತನ ಮಾಡಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ತಕ್ಷಣ ಪೊಲೀಸರಿಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಕಲುಷಿತ ನೀರು ಕುಡಿದು 4 ಸಾವು ಪ್ರಕರಣ – ಜನರಲ್ಲಿ ಇನ್ನೂ ನಿಲ್ಲದ ವಾಂತಿ, ಭೇದಿ

mandya police jeep

ಮಾಹಿತಿ ಪಡೆದ ಪೊಲೀಸರು ಸಿನಿಮೀಯಾ ರೀತಿಯಲ್ಲಿ ಬಸ್ಸನ್ನು ಅಡ್ಡಗಟ್ಟಿ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿ ಬಳಿ ಆರೋಪಿಗಳನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ವೃದ್ಧ ದಂಪತಿಯನ್ನು ಕೋಣೆಯಲ್ಲಿ ಕೂಡಿ ಹಾಕಿ ದರೋಡೆ

 

Share This Article
Leave a Comment

Leave a Reply

Your email address will not be published. Required fields are marked *