ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ಉಪಕಾರಾಗೃಹ ಗೋಡೆ ಹಾರಿ ಪರಾರಿಯಾಗಿದ್ದ ವಿಚಾರಣಾಧೀನ ಕೈದಿಯನ್ನು (Under Trial Prisoner) ಪೊಲೀಸರು ಬಂಧಿಸಿದ್ದಾರೆ.
ಕೊಲೆಪ್ರಕರಣದ ಮೇಲೆ ಜೈಲು ಸೇರಿದ್ದ ಆರೋಪಿ ಅನ್ವರ್ ಬಾಷಾ ಸೆಪ್ಟೆಂಬರ್ 3 ರಂದು ಉಪ ಕಾರಾಗೃಹದಿಂದ ಪರಾರಿಯಾಗಿದ್ದ. ನ್ಯಾಯಾಲಯಕ್ಕೆ ಪ್ರಕರಣ ವಿಚಾರಣೆ ವೇಳೆ ಹಾಜರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ನ್ಯಾಯಾಲಯಕ್ಕೆ ಬರುವ ಸಾಧ್ಯತೆ ಹಿನ್ನೆಲೆ ಕಣ್ಣಿಟ್ಟಿದ್ದ ಪೊಲೀಸರು ನ್ಯಾಯಾಧೀಶರ ಅನುಮತಿ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಕೊಲೆಗೈದು ಅಪಘಾತವೆಂದು ಬಿಂಬಿಸಲು ಯತ್ನಿಸಿದ ಮೂವರ ಬಂಧನ
ಅನ್ವರ್ ಬಾಷಾ ದೇವದುರ್ಗದ ಮಸಿಹಾಳ ಗ್ರಾಮದ ಲಾಲಾ ಸಾಬ್ ಕೊಲೆ ಪ್ರಕರಣದ ಆರೋಪ ಎದುರಿಸುತ್ತಿದ್ದಾನೆ. ಗಬ್ಬೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿ ಈಗ ಪುನಃ ಜೈಲು ಸೇರಿದ್ದಾನೆ. ಇದನ್ನೂ ಓದಿ: ಬೈಕ್ಗೆ ಅಂಬುಲೆನ್ಸ್ ಡಿಕ್ಕಿ ಸವಾರ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ
Web Stories