Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಆರ್ಟಿಕಲ್ 370, 35ಎ ರದ್ದು- ಮತ್ತೆ 8 ಸಾವಿರ ಸೈನಿಕರು ಕಾಶ್ಮೀರಕ್ಕೆ ಸ್ಥಳಾಂತರ

Public TV
Last updated: August 5, 2019 4:07 pm
Public TV
Share
2 Min Read
indian army
SHARE

ನವದೆಹಲಿ: ಕೇಂದ್ರ ಸರ್ಕಾರ ಆರ್ಟಿಕಲ್ 370 ಹಾಗೂ 35ಎ ರದ್ದುಪಡಿಸಿದ ಬೆನ್ನಲ್ಲೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿಯಾಗಿ 8 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದೆ.

ದೇಶದ ವಿವಿಧ ಭಾಗಗಳಲ್ಲಿನ ಸುಮಾರು 8 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿದೆ. ಭಾರತೀಯ ವಾಯುಪಡೆಯ ಸಿ-17 ಸಾರಿಗೆ ವಿಮಾನಗಳ ಮೂಲಕ ಸೈನಿಕರನ್ನು ಶ್ರೀನಗರಕ್ಕೆ ಕರೆತರಲಾಗುತ್ತಿದೆ. ಕಳೆದ ವಾರದಲ್ಲಿ ಸುಮಾರು 35 ಸಾವಿರ ಸೈನಿಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಸ್ಥಳಾಂತರಿಸಲಾಗಿತ್ತು. ಇದೀಗ ಹೆಚ್ಚುವರಿಯಾಗಿ 8 ಸಾವಿರ ಸೈನಿಕರನ್ನು ಸ್ಥಳಾಂತರಿಸಲಾಗಿದೆ.

crpf 4

ಅಲ್ಲದೆ, ಸೈನಿಕರನ್ನು ಹಾಗೂ ವಾಯು ಪಡೆಯನ್ನು ಹೈ ಅಲರ್ಟ್ ನಲ್ಲಿ ಇಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿನ ವಿಶೇಷ ಸ್ಥಾನಮಾನ ತೆರವುಗೊಳಿಸಿರುವುದು ಭಾವನಾತ್ಮಕ ವಿಚಾರವಾಗಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಹೆಚ್ಚು ಸೈನಿಕರನ್ನು ಹಾಕಲಾಗಿದೆ ಎಂದು ಮೂಲಗಳು ತಿಳಿಸಿವೆ. ಕಳೆದ ವಾರ ಸರ್ಕಾರ ಅಮರನಾಥ ಯಾತ್ರೆಯನ್ನು ಹಠಾತ್ ರದ್ದುಗೊಳಿಸಿದ ನಂತರ ಸಾವಿರಾರು ಅಮರನಾಥ ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರನ್ನು ರಾಜ್ಯದಿಂದ ಹೊರ ಕಳುಹಿಸಿತ್ತು.

ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರಕ್ಕೆ ತನ್ನದೇ ಆದ ಸಂವಿಧಾನವಿತ್ತು. ಅಂದರೆ ರಕ್ಷಣೆ, ಸಂವಹನ ಮತ್ತು ವಿದೇಶಾಂಗ ವ್ಯವಹಾರಗಳನ್ನು ಹೊರತುಪಡಿಸಿದರೆ ಉಳಿದೆಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುವ ಹಕ್ಕು ಜಮ್ಮು ಮತ್ತು ಕಾಶ್ಮೀರ ಸರ್ಕಾರಕ್ಕೆ ಇತ್ತು. ಇದೀಗ ಸಂವಿಧಾನದ ಈ ಭಾಗವನ್ನು ತೆಗೆದು ಹಾಕಲಾಗಿದ್ದು, ಈ ಮೂಲಕ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ಅಂತ್ಯವಾಗಿದೆ. 1947ರಲ್ಲಿ ನೆಹರು ಸರ್ಕಾರ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿತ್ತು.

crpf 3

ಅಲ್ಲದೆ, ಸರ್ಕಾರ ಈ ಕುರಿತು ಸ್ಪಷ್ಟಪಡಿಸಿದ್ದು, ಜಮ್ಮು ಮತ್ತು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದ್ದು, ಈ ಮೂಲಕ ಜಮ್ಮು ಮತ್ತು ಕಾಶ್ಮೀರ ರಾಜ್ಯವು ಪರಿಣಾಮಕಾರಿಯಾಗಿ ಅರೆ-ರಾಜ್ಯಗಳಾಗಿವೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರವು ತನ್ನದೇ ಆದ ಶಾಸಕಾಂಗವನ್ನು ಹೊಂದಿದ ಕೇಂದ್ರಾಡಳಿತ ಪ್ರದೇಶವಾಗಿದ್ದು, ದಹಲಿ ಮತ್ತು ಲಡಾಕ್ ನಂತೆ ಕಾರ್ಯನಿರ್ವಹಿಸಲಿದೆ. ರಾಜ್ಯದಲ್ಲಿ ಭಯೋತ್ಪಾದಕ ದಾಳಿಯ ಬೆದರಿಕೆ ಹೆಚ್ಚಿದ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ಸ್ಥಳಾಂತರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

Indian Army a

ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು ದಾಳಿ ನಡೆಸಲು ಅನೇಕ ಬಾರಿ ಪ್ರಯತ್ನ ಮಾಡಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಜು.29 ರಿಂದ ಜು.31ರ ವೆರೆಗೆ ಗಡಿ ನಿಯಂತ್ರಣ ರೇಖೆಯನ್ನು ದಾಟಲು ಉಗ್ರರು ನಾಲ್ಕರಿಂದ ಐದು ಬಾರಿ ಯಶಸ್ವಿಯಾಗಿದ್ದಾರೆ. ಫೆಬ್ರವರಿಯಲ್ಲಿ ಪುಲ್ವಾಮಾದಲ್ಲಿ ನಡೆದ ದಾಳಿ ರೀತಿಯಲ್ಲೇ ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ ನಡೆಸಲು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದರಲ್ಲಿ ನಾಲ್ಕರಿಂದ ಐದು ಜನ ಭಾರತದೊಳಗೆ ನುಸುಳುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಅಮರನಾಥ ಯಾತ್ರಾರ್ಥಿಗಳಿಗೆ ಅವಕಾಶ ನೀಡಲಿಲ್ಲ ಎಂದು ಮೂಲಗಳು ತಿಳಿಸಿವೆ.

TAGGED:35A35ಎArticle 370Central GovernmentJammu and KashmirPublic TVterrorismಆರ್ಟಿಕಲ್ 370ಕೇಂದ್ರ ಸರ್ಕಾರಜಮ್ಮು ಮತ್ತು ಕಾಶ್ಮೀರಪಬ್ಲಿಕ್ ಟಿವಿಭಯೋತ್ಪಾದನೆ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
14 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
15 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
16 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
17 hours ago

You Might Also Like

2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
4 hours ago
1
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-2

Public TV
By Public TV
4 hours ago
3
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-3

Public TV
By Public TV
4 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
4 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
4 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?