-ವಿಶೇಷ ಅಧಿಕಾರ, ಸ್ಥಾನಮಾನ ರದ್ದು
-ಲಡಾಕ್ ಕೇಂದ್ರಾಡಳಿತ ಪ್ರದೇಶ
ನವದೆಹಲಿ: ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಜಮ್ಮು ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಡಲಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ಒಳಗೊಂಡಿದ್ದರೂ ಕೇಂದ್ರದ ಅಧೀನದಲ್ಲಿ ಬರಲಿದೆ. ಲಡಾಕ್ ಕೇಂದ್ರಾಡಳಿತ ಪ್ರದೇಶವಾಗಲಿದೆ. ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ಮತ್ತು ಅಧಿಕಾರವನ್ನು ರದ್ದುಗೊಳಿಸಲಾಗಿದೆ.
ರಾಜ್ಯಸಭೆಯಲ್ಲಿ ಕೇಂದ್ರಗೃಹ ಸಚಿವ ಅಮಿತ್ ಶಾ ಪರಿಚ್ಛೇಧ 370 ಮತ್ತು 35(ಎ) ರದ್ದುಗೊಳಿಸಲಾಗುವುದು ಎಂದು ಹೇಳುತ್ತಿದ್ದಂತೆ ವಿಪಕ್ಷ ನಾಯಕರು ವಿರೋಧ ವ್ಯಕ್ತಪಡಿಸಿ ಗಲಾಟೆ ಆರಂಭಿಸಿದರು. ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ, ಅಧಿಕಾರ ರದ್ದುಗೊಳಿಸಿದ ಆದೇಶಕ್ಕೆ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
Ghulam Nabi Azad,Congress in Rajya Sabha: Entire valley is under curfew, political leaders including three former chief ministers are under house arrest. There is a war like situation in the state, so this should be discussed on priority pic.twitter.com/pX2mbRKjV5
— ANI (@ANI) August 5, 2019
ಒಂದು ವೇಳೆ ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರವಾಗದಿದ್ದರೂ, ಸುಗ್ರೀವಾಜ್ಞೆ ಇರೋದ್ರಿಂದ ಜಮ್ಮು-ಕಾಶ್ಮೀರ ರಾಜ್ಯವಾಗಿರಲ್ಲ. ಮಸೂದೆಗೆ ರಾಷ್ಟ್ರಪತಿಗಳ ಅಂಕಿತವಾದ ಕ್ಷಣದಿಂದ ಪರಿಚ್ಛೇಧ 370(1) ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನಗಳು ಕೊನೆಗೊಳ್ಳಲಿವೆ. ಇಂದು ನಾನು ತೆಗೆದುಕೊಂಡು ಬಂದಿರುವ ನಾಲ್ಕು ಬಿಲ್ ಕಾಶ್ಮೀರಕ್ಕೆ ಸಂಬಂಧಿಸಿದೆ. ಪರಿಚ್ಛೇಧ 370 ಒಂದಲ್ಲ ಒಂದು ದಿನ ರದ್ದುಗೊಳಿಸಬೇಕಿತ್ತು. ಆದರೆ ಕೆಲವರ ರಾಜಕೀಯ ಹಿತಾಸಕ್ತಿಗಳಿಂದ ಸಾಧ್ಯವಾಗಿರಲಿಲ್ಲ. ಕೆಲವರು ವೋಟ್ ಬ್ಯಾಂಕ್ ಗಾಗಿ ರಾಜಕಾರಣ ಮಾಡುತ್ತಾರೆ. ನಮಗೆ ವೋಟ್ ಬ್ಯಾಂಕ್ ಬಗ್ಗೆ ಚಿಂತೆ ಇಲ್ಲ ಎಂದು ವಿಪಕ್ಷ ನಾಯಕರನ್ನು ಕುಟುಕಿದರು.
LoP RS Ghulam Nabi Azad speaks on the Kashmir issue in the Rajya Sabha. pic.twitter.com/19yFygMwyu
— Congress (@INCIndia) August 5, 2019
ಪರಿಚ್ಛೇಧ 370 ರದ್ದಾದ ಬಳಿಕ ಜಮ್ಮು-ಕಾಶ್ಮೀರ ವಿಧಾನ ಮಂಡಲವನ್ನು ಒಳಗೊಂಡಿದ್ದರೂ, ಕೇಂದ್ರದ ಅಧೀನದಲ್ಲಿಯೇ ಇರಲಿದೆ. ಲಡಾಕ್ ಮಂತ್ರಿ ಮಂಡಲ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಲಿದೆ ಎಂದು ಅಮಿತ್ ಶಾ ವಿವರಿಸಿದರು.
ಅಮಿತ್ ಶಾ ಮಾತು ಆರಂಭಿಸುತ್ತಿದ್ದಂತೆಯೇ ವಿಪಕ್ಷ ನಾಯಕ ಗುಲಾಂ ನಬಿ ಆಜಾದ್ ವಿರೋಧ ವ್ಯಕ್ತಪಡಿಸಿದರು. ಮಸೂದೆಗೂ ಮಂಡನೆಗೂ ಮುನ್ನ ಚರ್ಚೆ ನಡೆಯಬೇಕು. ಕಾಶ್ಮೀರದಲ್ಲಿ ಯುದ್ಧದ ಸನ್ನಿವೇಶ ನಿರ್ಮಾಣವಾಗಿದ್ದು, ಜನತೆ ಭಯಗೊಂಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳನ್ನು ಸೇರಿದಂತೆ ಸ್ಥಳೀಯ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
HM Amit Shah: This is not the first time, Congress in 1952 and 1962 amended article 370 through similar process. So instead of protesting please let me speak and have a discussion, all your doubts and misunderstandings will be cleared, I am ready to answer all your questions. pic.twitter.com/jUcoLvbNFN
— ANI (@ANI) August 5, 2019
ಮುಂಜಾಗ್ರತಾ ಕ್ರಮವಾಗಿ ಜಮ್ಮು-ಕಾಶ್ಮೀರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಸಾಮಾನ್ಯ ದಿನಕ್ಕಿಂತ ಕಾಶ್ಮೀರದಲ್ಲಿ ಹೆಚ್ಚಿನ ಸೈನಿಕರನ್ನು ನಿಯೋಜನೆ ಮಾಡಲಾಗಿತ್ತು. ಇಂದಿನ ಕಲಾಪಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಗೃಹಸಚಿವ ಅಮಿತ್ ಶಾ ಸುಮಾರು 40 ನಿಮಿಷಗಳ ಸಂಪುಟ ಸಭೆ ನಡೆಸಲಾಯ್ತು. ಜಮ್ಮು ಮತ್ತು ಕಾಶ್ಮೀರದ ಕುರಿತು ತೆಗೆದುಕೊಳ್ಳುತ್ತಿರುವ ನಿರ್ಣಯದ ಬಗ್ಗೆ ಮೋದಿಯವರು ತಮ್ಮ ಮಿತ್ರಪಕ್ಷಗಳ ನಾಯಕರೊಂದಿಗೆ ಚರ್ಚೆ ನಡೆಸಿದ್ದರು.
HM Amit Shah: This is not the first time, Congress in 1952 and 1962 amended article 370 through similar process. So instead of protesting please let me speak and have a discussion, all your doubts and misunderstandings will be cleared, I am ready to answer all your questions. pic.twitter.com/jUcoLvbNFN
— ANI (@ANI) August 5, 2019