-936 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ರಾಯಚೂರು: ಜಿಲ್ಲೆಯ ಯರಗೇರಾ ಗ್ರಾಮದಲ್ಲಿ ನಾಳೆ ಕಲಂ 371ಜೆ ದಶಮಾನೋತ್ಸವ, ಬುಡಕಟ್ಟು ಉತ್ಸವ ನಡೆಯಲಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಆಗಮಿಸಲಿದ್ದಾರೆ.
ನಾಳೆ ಕಲಂ 371ಜೆ ದಶಮಾನೋತ್ಸವ, ಬುಡಕಟ್ಟು ಉತ್ಸವ ಹಾಗೂ 936 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರವೇರಿಸಲಿದ್ದಾರೆ. ಜೊತೆಗೆ ರಾಯಚೂರು ವಿವಿಗೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಎಂದು ನಾಮಕರಣ, ಬುಡಕಟ್ಟು ಸಮುದಾಯವರ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ.ಇದನ್ನೂ ಓದಿ: ಮುಂದಿನ 3 ಗಂಟೆಗಳ ಕಾಲ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ
ನಾಳಿನ ಕಾರ್ಯಕ್ರಮಕ್ಕಾಗಿ ಸದ್ಯ ಮಳಿಗೆಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕಾರ್ಯಕ್ರಮದಲ್ಲಿ 100 ಫಲಾನುಭವಿಗಳಿಗೆ ಕಾರು, ಟ್ರಾö್ಯಕ್ಟರ್ ವಿತರಣೆ ಹಾಗೂ 60 ಜನ ಮಹಿಳೆಯರಿಗೆ ಹೊಲಿಗೆ ಯಂತ್ರಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಸಿಎಂ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹಲವಾರು ಸಚಿವರು, ಶಾಸಕರು ಸಾಥ್ ನೀಡಲಿದ್ದಾರೆ. ಸಿಎಂ ಕಾರ್ಯಕ್ರಮ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಎಂಎಲ್ಸಿ ವಸಂತಕುಮಾರ್, ಸಂಸದ ಜಿ.ಕುಮಾರ್ ನಾಯಕ್ ಕಾರ್ಯಕ್ರಮ ಸಿದ್ಧತೆಯನ್ನು ವೀಕ್ಷಣೆ ಮಾಡಿದರು.ಇದನ್ನೂ ಓದಿ: ಶೀಘ್ರದಲ್ಲೇ 8,000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ – ಜಿ.ಪರಮೇಶ್ವರ್