Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉರಿ ಬಿಸಿಲ ಕಡಲಲ್ಲಿ ಅಲೆಯಾಗಿ ಬಂದ ನಗು..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉರಿ ಬಿಸಿಲ ಕಡಲಲ್ಲಿ ಅಲೆಯಾಗಿ ಬಂದ ನಗು..!

Latest

ಉರಿ ಬಿಸಿಲ ಕಡಲಲ್ಲಿ ಅಲೆಯಾಗಿ ಬಂದ ನಗು..!

Public TV
Last updated: March 7, 2025 3:56 pm
Public TV
Share
3 Min Read
FLOWER 1
SHARE

ನಿನ್ನೆ ಉರಿ ಬಿಸಿಲಿನ ಹೊತ್ತಲ್ಲಿ ತಾಳಗುಪ್ಪದಿಂದ ಹೊನ್ನೆಮರಡಿನ (Honnemaradu) ದಾರಿಯಲ್ಲಿ ನಡೆದುಕೊಂಡು ಹೋಗ್ತಾ ಇದ್ದೆ.. ಉರಿ ಬಿಸಿಲು… ಝರಿ ಸದ್ದು…. ನಡುವೆ ಗಹಗಹಿಸಿ ನಗುವ ಸದ್ದು! ಯಾರು ಎಂದು ನೋಡಿದರೆ, ಸುತ್ತಮುತ್ತ ಯಾರೂ ಕಾಣ್ತಿಲ್ಲ..! ಸುಮ್ಮನೆ ಮತ್ತಷ್ಟು ದೂರ ನಡೆದಾಗ ಗೊತ್ತಾಗಿದ್ದು ಇದು ಭೂಮಿಯ (Earth) ನಗು..!

ಹೌದು ಭೂಮಿ ನಗುತ್ತದೆ…! ಸುಡುವ ಬಿಸಿಲಿನ ಪ್ರೇಮದಲ್ಲಿ..! ಹೇಗೆ ಚಿನ್ನ ಸುಟ್ಟು ಹೊಳಪು ಪಡೆಯುತ್ತದೆಯೋ ಹಾಗೆ ಭೂಮಿಯೂ ಸುಡುವ ಬಿಸಿಲಲ್ಲಿ ಬೆಂದು ತನ್ನ ನಗುವಿನ ಹೊಳಪನ್ನ ಪಡೆದುಕೊಳ್ಳುತ್ತದೆ. ಆಶ್ಚರ್ಯ ಆಯ್ತಾ? ಆದ್ರೂ ಇದು ಸತ್ಯ! ಭೂಮಿ ನಗುತ್ತದೆ. ಹೂಗಳ (Malnad Flowers) ರೂಪದಲ್ಲಿ! ಭೂಮಿ ತನ್ನೆಲ್ಲ ಗಂಧ, ಪ್ರೇಮವನ್ನು ಹೂಗಳಲ್ಲಿ ಸೇರಿಸಿ ಚಲುವಿನ ವನವನ್ನು ಸೃಷ್ಠಿಸಿ, ಉರಿ ಬಿಸಿಲಿಗೆ ಸವಾಲೆಸೆದು ನಗುತ್ತದೆ.

MANDARA FLOWER

ಕವಿ ಹಾಗೂ ತತ್ವಜ್ಞಾನಿ ರಾಲ್ಫ್ ವಾಲ್ಡೋ ಎಮರ್ಸನ್ ʻಭೂಮಿಯು ಹೂವುಗಳಲ್ಲಿ ನಗುತ್ತದೆʼ ಎಂದು ಒಂದು ಕಡೆ ಬರೆಯುತ್ತಾನೆ. ಹೌದಲ್ಲವೇ? ಭೂಮಿ ಹೀಗೆ ಅಲ್ವಾ ನಗೋದು..? ನಮಗೆ ನೋಡೋಕೆ ಕಣ್ಣು ಬೇಕು ಅಷ್ಟೇ! ಬೇಕಿದ್ರೆ ಇಂದೇ ಪರೀಕ್ಷೆ ಮಾಡ್ನೋಡಿ. ನಿಮ್ಮ ಮನೆಯ ಅಕ್ಕಪಕ್ಕದ ಗಿಡಗಳ ಬಳಿ ನಿಂತು ಆ ನಗುವನ್ನು ಆನಂದಿಸಿ, ಗಿಡಗಳ ಜೊತೆ ಕೆಲಕಾಲ ಮಾತಾಡಿ! ಆ ಅಂದ ಗಂಧವನ್ನು ಆಸ್ವಾದಿಸಿ!

ಇಂತಹ ಅನುಭವ ನಮಗೆ ಸಿಗುವುದು, ರಾಶಿ ರಾಶಿ ಹೂಗಳು ಬೆಟ್ಟದ ಮೇಲೆ, ರಸ್ತೆಯ ಬದಿಯ ಮೇ ಫ್ಲವರ್‌ ಅರಳಿ ನಿಂತಾಗ ಮಾತ್ರ ಏನಲ್ಲ. ಕೆಲವೊಮ್ಮೆ ಒಂದೇ ಹೂ ಸಹ ನಮ್ಮನ್ನು ಹೀಗೆ ಸೆಳೆಯಬಹುದು. ಉದಾಹರಣೆಗೆ ʻವರ್ಡ್ಸ್‌ ವರ್ತ್‌ ಡ್ಯಾಫೋಡಿಲ್ಸ್‌ ಪದ್ಯದಲ್ಲಿ Ten thousand saw I at a glance ಸಾಲು ಬರೆಯುವಾಗ… ಅವನು 10,000 ಡ್ಯಾಫೋಡಿಲ್ಸ್‌ ಹೂಗಳನ್ನು ನೋಡಿ ಲೆಕ್ಕ ಮಾಡಿರಲ್ಲ, ಅದೊಂದು ಮಾತಷ್ಟೇ! ಹಾಗೆ ಒಂದೇ ಒಂದು ಹೂವು ಸಹ ನಮಗೆ ಸಾವಿರಾರು ಹೂಗಳ ಅನುಭವ ಕೊಡಬಹುದು!

May Flower

ನಮ್ಮ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಎಪ್ರಿಲ್‌, ಮೇ ತಿಂಗಳ ಅವಧಿಯಲ್ಲಿ ಅದೆಷ್ಟು ರಾಶಿ ರಾಶಿ ಮೇ ಫ್ಲವರ್‌ ಅರಳಿ ನಿಂತಿರುತ್ತವೆ ಅಂದ್ರೆ, ಈ ಹೂಗಳ ಲೋಕದಲ್ಲಿ ಕಳೆದು ಹೋಗದವರಿಲ್ಲ. ಅಂತಹ ಒಂದು ಅನುಭವ ಅಲ್ಲಿ ಪಡೆದಿದ್ದೇನೆ. ಕೆಂಪು ಹಳದಿಯ ಆ ಹೂಗಳು ಕನ್ನಡದ ಭಾವುಟ ನೆಟ್ಟಂತೆ ವಿಶೇಷವಾದ ಅನುಭವಕ್ಕೆ ನಮ್ಮನ್ನು ತೆರೆದಿಡುತ್ತವೆ. ನಮ್ಮಲ್ಲಿಯ ಅನೇಕ ನೋವುಗಳಿಗೆ ಗಂಧವನ್ನು, ನಗುವನ್ನು ಲೇಪಿಸಿ, ಹೊಸಬರನ್ನಾಗಿ ಮಾಡಿ ಕಳಿಸುವ ಈ ಹೂಗಳಿಗೆ ನಾನಂತೂ ಥ್ಯಾಂಕ್ಸ್‌ ಹೇಳ್ತೇನೆ!

ನನ್ನ ಸ್ನೇಹಿತೆ ಒಬ್ಬಳು ಹೇಳ್ತಿದ್ರು, ಪ್ರವಾಸಿಗರ ಕಿರಿಕಿರಿ ಇಲ್ಲದೇ ಇದ್ದಾಗ 12 ವರ್ಷಕ್ಕೊಮ್ಮೆ ಚಿಕ್ಕಮಗಳೂರಲ್ಲಿ ಅರಳುವ ಕುರಂಜಿ (Neelakurinji) ಹೂ ನೋಡೋಕೆ ಹೋಗ್ಬೇಕು… ಅದೆಷ್ಟು ಮಜಾ ಕೊಡುತ್ತೆ ಗೊತ್ತಾ ಅಂತ! ಹೌದು ಇಂತಹ ಜಾಗಗಳಿಗೆ ಒಬ್ಬಂಟಿಯಾಗೇ ಹೋಗ್ಬೇಕು! ಆಗಷ್ಟೇ ಹೂವುಗಳು ನಮ್ಮ ಬಳಿ ಮಾತಾಡ್ತವೆ! ಇನ್ನೂ ಸಸ್ಯ ವಿಜ್ಞಾನದಲ್ಲಿ ಕುರುಂಜಿಗೆ ‘ಸ್ಟ್ರೋಬಿಲಾಂಥಿಸ್’ ಎಂಬ ಹೆಸರು ಇದ್ದು, 70ಕ್ಕೂ ಹೆಚ್ಚು ಪ್ರಬೇಧಗಳು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತವೆ.

Neelakurinji flower 1

ನೀವು ಈ ನಗುವನ್ನು ನೋಡಲು ವಿಶೇಷವಾದ ಶಕ್ತಿ ಬೇಕು..! ಆ ಶಕ್ತಿ ಕಣ್ಣಿಗೆ ಬರಬೇಕಾದರೆ ಅದಕ್ಕೊಂದು ಆಧ್ಯಾತ್ಮದ ಪ್ರೇಮವೇ ಘಟಿಸಬೇಕು! ಆಗಾಧವಾದ ಪ್ರೇಮದಿಂದ ಕಣ್ಣುಗಳನ್ನು ತೆರೆಯಬೇಕು, ಆಗಷ್ಟೇ ನಮಗೆ ನಮ್ಮಿಷ್ಟದ ವಿಶೇಷ ಸಂಗತಿಗಳು ಕಾಣ ಸಿಗುತ್ತವೆ. ಕೈಗೆ ಎಟುಕುತ್ತವೆ. ನಮ್ಮನ್ನು ಯಾವುದೋ ಆನಂದ ಬಿಂದುವಿನ ಮಧ್ಯದಲ್ಲಿ ತಂದು ನಿಲ್ಲಿಸುತ್ತದೆ. ಅಂತಹ ದಿವ್ಯವಾದ ಧ್ಯಾನದ ಕಣ್ಣನ್ನು ತೆರೆದುಕೊಳ್ಳುವ ಮಾರ್ಗವನ್ನು ಕಂಡುಕೊಳ್ಳುವ ಯತ್ನ ಮಾಡಬೇಕು. ಇನ್ನೂ ಕೆಲವರಿಗೆ ಅದು ದೈವ ಕೃಪೆ.

ಹಾಗೆಯೇ ಈ ಗಿಡಗಳು, ಹೂಗಳು, ಹರಿವ ನದಿಗಳು, ಎಲ್ಲೋ ಹಾಡುವ ಹಕ್ಕಿಗಳಲ್ಲಿ ಅಂತಹ ದೈವಿಕ ಅಂಶಗಳನ್ನು ಹೆಕ್ಕಲು ಸಾಧ್ಯವಾಗುತ್ತದೆ. ಅದನ್ನೇ ಬಹುಶಃ ರಾಲ್ಫ್ ವಾಲ್ಡೋ ಎಮರ್ಸನ್ ಅನುಭವಿಸಿದ್ದಾನೆ. ಅಂತಹ ಅನುಭವವನ್ನು ನಾನು ಪಡೆದಿದ್ದೇನೆ ಎಂಬ ಹೆಮ್ಮೆಯೊಂದು ನನ್ನ ಹೆಗಲ ಮೇಲೆ ಕೂತಿದೆ! ಹಾಗೆ ಮನೆಗೆ ನಡೆದುಕೊಂಡು ಹೋದವನಿಗೆ ಹೂಗಳ ನಗುವಿನ ನೆರಳಲ್ಲಿ ಬಿಸಿಲ ಝಳದ ಅರಿವೇ ಆಗಲಿಲ್ಲ.

ಹೂಗಳು ಮಾತಾಡುತ್ತವೆ, ನಗುತ್ತವೆ… ಭೂಮಿಯ ಗಂಧವನ್ನೆಲ್ಲ ಹೊದ್ದು, ನಮ್ಮ ಆತ್ಮಕ್ಕೆ ಸಂತೃಪ್ತಿಯನ್ನೀಯಲು?! ಆ ದಿವ್ಯ ಅನುಭವ ನಿಮಗೂ ಸಿಗಲಿ ಎಂಬುದೇ ನನ್ನ ಆಶಯ.                                                                                                                                – ಗೋಪಾಲಕೃಷ್ಣ

TAGGED:earthflowerHonnemaraduMalnad FlowersNeelakurinji
Share This Article
Facebook Whatsapp Whatsapp Telegram

Cinema news

Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood

You Might Also Like

tripura security forces demolish ganja plantations worth rs 27 crore in major anti narcotics crackdown
Crime

65 ಎಕರೆಯಲ್ಲಿ ಬೆಳೆದಿದ್ದ 1.80 ಲಕ್ಷ ಗಾಂಜಾ ಗಿಡಗಳನ್ನು ನಾಶಪಡಿಸಿದ ಭದ್ರತಾ ಪಡೆ

Public TV
By Public TV
14 seconds ago
Bengaluru police crack down on one way violations nearly 11498 cases booked in four days
Bengaluru City

ಬೆಂಗಳೂರಿನಲ್ಲಿ ಒನ್‌ ವೇ ಸಂಚಾರದ ವಿರುದ್ಧ ಆಪರೇಷನ್‌ – ಬರೋಬ್ಬರಿ 23 ಸಾವಿರ ಕೇಸ್ ದಾಖಲು

Public TV
By Public TV
45 minutes ago
PT Usha VSrinivasan
Latest

IOA ಅಧ್ಯಕ್ಷೆ ಪಿ.ಟಿ ಉಷಾ ಪತಿ ಶ್ರೀನಿವಾಸನ್ ನಿಧನ

Public TV
By Public TV
49 minutes ago
inspector govindaraj
Bengaluru City

ಚೀಟಿ ವ್ಯವಹಾರದಲ್ಲಿ ವಂಚನೆ; ಕೇಸ್‌ನಿಂದ ಕೈಬಿಡಲು 5 ಲಕ್ಷಕ್ಕೆ ಡೀಲ್ ಮಾಡಿದ್ದ ಇನ್‌ಸ್ಪೆಕ್ಟರ್ ‘ಲೋಕಾ’ ಬಲೆಗೆ

Public TV
By Public TV
1 hour ago
Mohandas Pai Ramalinga Reddy
Districts

ಬಸ್‌ ವ್ಯವಸ್ಥೆ ಸರಿಯಿಲ್ಲ.. ನಿಮ್ಮ ಜೊತೆ ಚರ್ಚಿಸಲು BMTC ಎಂಡಿ ಸಾಕು – ಮೋಹನ್‌ದಾಸ್‌ ಪೈ Vs ರಾಮಲಿಂಗಾರೆಡ್ಡಿ

Public TV
By Public TV
2 hours ago
Pakistan Zindabad Naseer Hussain
Bengaluru City

ಪಾಕಿಸ್ತಾನ ಜಿಂದಾಬಾದ್ ಕೂಗಿದವರಿಗೆ ಇಲ್ಲ ಶಿಕ್ಷೆ – 3 ವರ್ಷಗಳಲ್ಲಿ ಒಂದು ಕೇಸ್‌ಗೂ ಶಿಕ್ಷೆ ಕೊಡಿಸದ ಪೊಲೀಸ್ ಇಲಾಖೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?