ಬೆಂಗಳೂರು: ಭಾರತದ ರತ್ನ ಪ್ರಶಸ್ತಿ ಪುರಸ್ಕೃತೆ ಲತಾ ಮಂಗೇಶ್ಕರ್ ಅವರ ನಿಧನಾಗಿದ್ದಾರೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ಕಲಾವಿದರೊಬ್ಬರು ಲತಾ ಮಂಗೇಶ್ಕರ್ ಅವರಿಗೆ ವಿಶೇಷ ಗೌರವ ಸಲ್ಲಿಸಿದ್ದಾರೆ.
ಲತಾ ಮಂಗೇಶ್ಕರ್ ಅವರ ಚಿತ್ರವನ್ನು ಎಂ ಸ್ಯಾಂಡ್ ಮೇಲೆ ಬಿಡಿಸಿದ್ದಾರೆ. ಈ ಮೂಲಕವಾಗಿ ಕಲಾವಿದ ಬಾದಲ್ ನಂಜುಂಡಸ್ವಾಮಿ ವಿಶೇಷವಾಗಿ ಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಬಾದಲ್ ನಂಜುಂಡಸ್ವಾಮಿ ಅವರು ಈ ಹಿಂದೆ ಕೊರೊನಾ ಜಾಗೃತಿಯನ್ನು ತಮ್ಮ ಕಲೆಯ ಮೂಲಕವಾಗಿ ಮೂಡಿಸಿದ್ದರು. ಇದೀಗ ಅವರು ತಮ್ಮ ವಿಶೇಷವಾದ ಕಲೆಯ ಮೂಲಕವಾಗಿ ಮೃತರಾದ ಲತಾ ಮಂಗೇಶ್ಕರ್ ಅವರಿಗೆ ಅಂತಿಮ ನಮನವನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ
ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಅವರು ಕೊನೆಯುಸಿರೆಳದಿದ್ದಾರೆ. ಮುಂಬೈನ ಕ್ಯಾಂಡಿ ಆಸ್ಪತ್ರೆಯ ತ್ರೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನೆಲ್ಲ ಅಗಲಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?
ಸೋಂಕಿನ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜನವರಿ 11ರಂದು ಆಸ್ಪತ್ರೆಗೆ ದಾಖಲಾಗಿದ್ದ 92 ವರ್ಷದ ಭಾರತರತ್ನ ಪುರಸ್ಕೃತೆ ಲತಾ ಮಂಗೇಶ್ಕರ್ ಅವರು ಐಸಿಯು ಘಟಕದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ.
ಲತಾ ಮಂಗೇಶ್ಕರ್ (ಸೆಪ್ಟೆಂಬರ್ 28, 1929) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. 1967ರಲ್ಲಿ ಬಿಡುಗಡೆಯಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕನ್ನಡ ಚಲನಚಿತ್ರದಲ್ಲಿನ ಬೆಳ್ಳನೆ ಬೆಳಗಾಯಿತು ಮತ್ತು ಎಲ್ಲಾರೆ ಇರತೀರೋ ಎಂದಾರೆ ಬರತೀರೋ ಹಾಡುಗಳನ್ನು ಹಾಡಿದ್ದಾರೆ.