ಗೊಂಬೆಗಳ ಲವ್ (Gombegala Love) ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದ್ದ ಅರುಣ್ (Arun), ಆನಂತರ ಹಲವು ಸಿನಿಮಾಗಳಲ್ಲಿ ನಟಿಸಿದರು. ಈ ಹಿಂದೆಯಷ್ಟೇ ವಿಜಯ್ ಪ್ರಸಾದ್ ನಿರ್ದೇಶನದ ‘ಪೆಟ್ರೊಮ್ಯಾಕ್ಷ್’ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ಅವರು ನಿರ್ವಹಿಸಿದ್ದರು. ಇದೀಗ ನಟನೆಗೆ ಅಲ್ಪ ವಿರಾಮ ಹೇಳಿ ನಿರ್ದೇಶನದತ್ತ ಮುಖ ಮಾಡಿದ್ದಾರೆ.
ಅರುಣ್ ಸಿನಿಮಾ ರಂಗಕ್ಕೆ ಬಂದಿದ್ದೇ ನಿರ್ದೇಶಕನಾಗಲು. ಆದರೆ, ಅವರನ್ನು ನಟನನ್ನಾಗಿ ಚಿತ್ರೋದ್ಯಮ ಸ್ವೀಕರಿಸಿತು. ಗೊಂಬೆಗಳ ಲವ್ ಅವರ ವೃತ್ತಿ ಬದುಕಿಗೆ ಬ್ರೇಕ್ ನೀಡಿತು. ಆನಂತರ ಹಲವು ಸಿನಿಮಾಗಳಲ್ಲಿ ಅವರು ನಾಯಕರಾಗಿ ನಟಿಸಿದರೂ, ನಿರ್ದೇಶನ ಮಾಡಬೇಕು ಎನ್ನುವ ತುಡಿತ ಇದ್ದೇ ಇತ್ತು. ಈಗ ಅದು ಈಡೇರುತ್ತಿದೆ. ಇದನ್ನೂ ಓದಿ:ಮದುವೆ ನಂತರ ನೀರು ಬಿಸಿ ಮಾಡಿದ್ದು ಬಿಟ್ಟು ಬೇರೆ ಅಡುಗೆ ಮಾಡಿಲ್ವಂತೆ- ಕಿಯಾರಾ ಅಡ್ವಾಣಿ
ಅರುಣ್ ಕುಮಾರ್ ನಿರ್ದೇಶನದ ಮೊದಲ ಚಿತ್ರಕ್ಕೆ ಮರಿ ಟೈಗರ್ ವಿನೋದ್ ಪ್ರಭಾಕರ್ (Vinod Prabhakar) ನಾಯಕ. ನಾಳೆ ಬೆಳಗ್ಗೆ ಬೆಂಗಳೂರಿನ ಮುದ್ದೀನಪಾಳ್ಯದಲ್ಲಿ ಈ ಹೊಸ ಚಿತ್ರಕ್ಕೆ ಮುಹೂರ್ತ ನಿಗದಿಯಾಗಿದೆ. ಚಾಮರಾಜನಗರದ ಹಿನ್ನೆಲೆಯಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಗ್ಯಾಂಗ್ ಸ್ಟರ್ ಕಥೆಯನ್ನು ಹೇಳಲಿದ್ದಾರಂತೆ ಅರುಣ್.
ಅರುಣ್ ಪ್ರತಿಭಾವಂತ ನಟ, ನಿರ್ದೇಶನದ ವಿಭಾಗದಲ್ಲೂ ಕೆಲಸ ಮಾಡಿದ ಅನುಭವವಿದೆ. ಎಲ್ಲವನ್ನೂ ಹದವಾಗಿ ಬೆರೆಸಿಕೊಂಡು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಮೊದಲ ಚಿತ್ರದಲ್ಲೇ ಅವರು ಹೆಸರಾಂತ ನಟರಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಾಳೆ ಈ ಸಿನಿಮಾದ ಬಗ್ಗೆ ಇನ್ನೂ ಹೆಚ್ಚಿನ ವಿವರಗಳು ಸಿಗಲಿವೆ. ದೀಪ ಫಿಲ್ಮ್ಸ್ ಬ್ಯಾನರ್ ನಲ್ಲಿ ಬಿ.ಎಮ್ ಶ್ರೀರಾಮ್ ಅವರು ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.
Web Stories