Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

Crime

21 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಅರುಣಾಚಲ ಪ್ರದೇಶದ ಹಾಸ್ಟೆಲ್ ವಾರ್ಡನ್‌ಗೆ ಗಲ್ಲು ಶಿಕ್ಷೆ

Public TV
Last updated: September 26, 2024 6:53 pm
Public TV
Share
3 Min Read
COURT
SHARE

– ಪೋಕ್ಸೋ ಕಾಯ್ದೆ ಅಡಿ ಮರಣದಂಡನೆ ಸಿಕ್ಕಿರುವ ಮೊದಲ ಪ್ರಕರಣ ಎಂದ ಲಾಯರ್

ಗುವಾಹಟಿ: ಇಲ್ಲಿನ ಸರ್ಕಾರಿ ವಸತಿ ಶಾಲೆಯೊಂದರಲ್ಲಿ (Arunachal school hostel) 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್‌ ವಾರ್ಡನ್‌ (Hostel Warden) ಯುಮ್ಕೆನ್‌ ಬಾಗ್ರಾಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ ಗಲ್ಲು ಶಿಕ್ಷೆ ವಿಧಿಸಿದೆ.

Pocso

ಅಲ್ಲದೇ ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶರಾದ ಜಾವೆಪ್ಲು ಚೈ ತೀರ್ಪು ಪ್ರಕಟಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಮತ್ತು POCSO ಕಾಯ್ದೆ ಅಡಿಯಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿದ್ದಾರೆ. ವಿದ್ಯಾರ್ಥಿಗಳು ದೂರು ನೀಡಿದರೂ ಸಹ ಶಾಲೆಯ ಖ್ಯಾತಿಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಮೌನವಾಗಿರುವಂತೆ ಕೇಳಿಕೊಂಡಿದ್ದರು ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.

STOP RAPE

ಈ ಕುರಿತು ಮಾತನಾಡಿರುವ 21 ಮಕ್ಕಳ ಪರ ವಕೀಲ ಓಯಾಮ್‌ ಬಿಂಗೆಪ್‌, ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದು ಸಂತೋಷವಾಗಿದೆ. ಇದು ದೇಶದಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ನೀಡಲಾದ ಮೊದಲ ಮರಣದಂಡನೆ ಪ್ರಕರಣವಾಗಿದೆ. ಇದರಲ್ಲಿ ಸಂತ್ರಸ್ತರು ಸತ್ತಿಲ್ಲ, ದೌರ್ಜನ್ಯ ಎಸಗಿದವರು ಸಾಯುತ್ತಾರೆ ಎಂದು ಸಹ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮಹಿಳೆಯ ಭಯಾನಕ ಹತ್ಯೆ ಕೇಸ್ | ಮಹಾಲಕ್ಷ್ಮಿ ಮಗನನ್ನು ಟ್ರ್ಯಾಪ್ ಮಾಡಿದ್ದಳು: ಆರೋಪಿಯ ತಾಯಿ

ಇನ್ನಿಬ್ಬರು ಆರೋಪಿಗಳಾದ ಅದೇ ಶಾಲೆಯ ಇನ್ನೋರ್ವ ಶಿಕ್ಷಕ ತಾಜಂಗ್ ಯೋರ್ಪೆನ್ ಮತ್ತು ಹಾಸ್ಟೆಲ್ ವಾರ್ಡನ್ ಪರಿಚಯಸ್ತ ಡೇನಿಯಲ್ ಪರ್ಟಿನ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ. ಇದನ್ನೂ ಓದಿ: ನಿರುದ್ಯೋಗ ಸಮಸ್ಯೆ, ಯುಜನರ ವಲಸೆಗೆ ಬಿಜೆಪಿ ಆಡಳಿತವೇ ಕಾರಣ – ರಾಹುಲ್‌ ಗಾಂಧಿ ಕಿಡಿ

ಕೇಸ್‌ ಬೆಳಕಿಗೆ ಬಂದಿದ್ದು ಯಾವಾಗ?
2022ರ ನವೆಂಬರ್‌ನಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು. ವಸತಿ ಶಾಲೆಯಲ್ಲಿ 12 ವರ್ಷದ ಅವಳಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕಾಗಿ ಆರೋಪಿ ಬಾಗ್ರಾ ವಿರುದ್ಧ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದರು. ಬಳಿಕ ವಿಶೇಷ ತನಿಖಾ ತಂಡ ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತು. ಬಳಿಕ ಬ್ರಾಗ್ರಾ ಹಾಸ್ಟೆಲ್‌ ವಾರ್ಡನ್‌ ಆಗಿದ್ದ 2014-2022ರ ಅವಧಿಯಲ್ಲಿ 6 ರಿಂದ 14 ವರ್ಷ ವಯಸ್ಸಿನ 6 ಹುಡುಗರು ಸೇರಿದಂತೆ, 21 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದನ್ನು ಪತ್ತೆ ಮಾಡಿತು.

ಕಳೆದ ಜುಲೈನಲ್ಲಿ ಈ ಸಂಬಂಧ ಚಾರ್ಜ್‌ಶೀಟ್‌ ಸಹ ಸಲ್ಲಿಸಲಾಗಿತ್ತು. ಈ ಮಾಹಿತಿ ಅನುಸಾರ, ವಾರ್ಡನ್‌ ಮಾದಕ ದ್ರವ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿರುವ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ 6 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದನ್ನು ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಜಿತಿಯಾ ಪವಿತ್ರ ಸ್ನಾನದ ವೇಳೆ ಅವಘಡ – ಬಿಹಾರದಲ್ಲಿ 37 ಮಕ್ಕಳು ಸೇರಿ 46 ಮಂದಿ ನದಿಯಲ್ಲಿ ಮುಳುಗಿ ದುರ್ಮರಣ

ನಂತರ ಆರೋಪಿ ಬಾಗ್ರಾ ವಿರುದ್ಧ ಐಪಿಸಿಯ ಸೆಕ್ಷನ್ 328, 292 ಮತ್ತು 506 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6, 10 ಮತ್ತು 12ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಿತ್ತು. ಅಲ್ಲದೇ ಘಟನೆಯನ್ನು ವರದಿ ಮಾಡುವಲ್ಲಿ ವಿಫಲರಾದ ಮಹಿಳಾ ಶಿಕ್ಷಕಿ ನ್ಗೊಮ್ದಿರ್‌ಗೆ ಐಪಿಸಿ ಸೆಕ್ಷನ್ 506, ಪೋಕ್ಸೊ ಕಾಯ್ದೆಯ ಸೆಕ್ಷನ್ 17 ಮತ್ತು 21 (1)ರ ಅಡಿ ಶಿಕ್ಷೆ ವಿಧಿಸಲಾಗಿದೆ. ಇನ್ನೂ ಹಲ್ಲೆ ನಡೆಸಿದ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕನಾಗಿದ್ದ ಯೋರ್ಪೆನ್‌ಗೆ ಐಪಿಸಿ ಸೆಕ್ಷನ್ 17, 21 (2), ಶಿಕ್ಷೆ ವಿಧಿಸಲಾಗಿದೆ.

TAGGED:Arunachal PradeshArunachal school hostelHostel WardenPOCSOstudentsteacherಅರುಣಾಚಲ ಪ್ರದೇಶಚಾರ್ಜ್‍ಶೀಟ್ಪೋಕ್ಸೋ ಕಾಯ್ದೆವಸತಿ ಶಾಲೆವಿಶೇಷ ನ್ಯಾಯಾಲಯ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Om Birla
Latest

ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ – ರಾಹುಲ್ ಗಾಂಧಿಗೆ ಮಾತನಾಡಲು ಅವಕಾಶ ನೀಡದ್ದಕ್ಕೆ ಅಸಮಾಧಾನ

Public TV
By Public TV
7 minutes ago
Supreme Court 1
Court

ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Public TV
By Public TV
14 minutes ago
mekedatu 1
Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
31 minutes ago
Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
39 minutes ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
1 hour ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?