ಗಾಂಧೀನಗರ: ಗುಜರಾತ್ನ ಅಹಮದಾಬಾದ್ನಲ್ಲಿರುವ ಮಹಾತ್ಮ ಗಾಂಧಿ ಅವರ ಸಬರಮತಿ ಆಶ್ರಮಕ್ಕೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭೇಟಿ ನೀಡಿದರು.
ಮುಂಬರುವ ಗುಜರಾತ್ ಚುನಾವಣೆ ಮೇಲೆ ಹೆಚ್ಚು ಗಮನ ಹರಿಸಿರುವ ಈ ಇಬ್ಬರು ನಾಯಕರು ಇಂದು ಗಾಂಧೀಜಿ ಅವರ ಆಶ್ರಮದಲ್ಲಿ ಚರಕ ಹಿಡಿದು ನೂಲು ತೆಗೆದರು. ಅಹಮದಾಬಾದ್ ಪ್ರವಾಸ ಕೈಗೊಂಡಿರುವ ಇಬ್ಬರು ನಾಯಕರು ಈ ವರ್ಷದ ಡಿಸೆಂಬರ್ನಲ್ಲಿ ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಕಳೆದ ವರ್ಷ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ತಮ್ಮ ಪಕ್ಷವು ರಾಜ್ಯ ಚುನಾವಣೆಯಲ್ಲಿ ಎಲ್ಲಾ 182 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದರು.
ಇತ್ತೀಚೆಗೆ ನಡೆದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷವು ಭರ್ಜರಿ ಗೆಲುವನ್ನು ಸಾಧಿಸಿತ್ತು.