ನವದೆಹಲಿ: ದೇಶದಲ್ಲಿ ಸರಣಿ ಕೊಲೆಗಾರರಿದ್ದಾರೆ, ಅವರು ಸರ್ಕಾರಗಳನ್ನು ಕೊಲ್ಲುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿಯ ವಿಧಾನಸಭೆಯ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಬಿಜೆಪಿ ಈಗಾಗಲೇ ಹಲವಾರು ಸರ್ಕಾರಗಳನ್ನು ಕಿತ್ತೊಗೆದಿದೆ. ಇದೀಗ ಬಿಜೆಪಿ ದೆಹಲಿಯತ್ತ ಮುಖ ಮಾಡಿದೆ. ನಮ್ಮ ದೇಶದಲ್ಲಿ ಸರ್ಕಾರಗಳ ಸರಣಿ ಕೊಲೆಯಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: 5 ಕಾಂಗ್ರೆಸ್ ನಾಯಕರ ರಾಜೀನಾಮೆ – ಹೊಸ ಪಕ್ಷ ಸ್ಥಾಪನೆಗೆ ಆಜಾದ್ ಚಿಂತನೆ
ಇತ್ತೀಚಿನ ವರ್ಷಗಳಲ್ಲಿ ಬಿಜೆಪಿ 277 ಶಾಸಕರನ್ನು ಖರೀದಿಸಿದೆ. ನಮ್ಮ ಸರ್ಕಾರವನ್ನು ಉರುಳಿಸಲು ಬಿಜೆಪಿ 40 ಶಾಸಕರಿಗೆ ಲಂಚ ನೀಡಲು ಪ್ರಯತ್ನಿಸುತ್ತಿದೆ. ಶಾಸಕರನ್ನು ಬದಲಾಯಿಸಲು 20 ಕೋಟಿ ರೂ. ಆಫರ್ ನೀಡಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.
ಶಾಸಕರಿಗೆ ಲಂಚ ನೀಡಿ ಖರೀದಿ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿಗೆ ಇಷ್ಟೊಂದು ಹಣ ಎಲ್ಲಿಂದ ಬಂತು ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಚೈಲ್ಡೀಶ್, ಅಪ್ರಬುದ್ಧ ನಾಯಕ – ರಾಹುಲ್ ಗಾಂಧಿಯಿಂದಲೇ ಕಾಂಗ್ರೆಸ್ ಅವನತಿ