ನವದೆಹಲಿ: ಕೊರೊನಾ ವೈರಸ್ನ ರೂಪಾಂತರ ತಳಿ ಓಮಿಕ್ರಾನ್ ತಳಿ ಹರಡುವ ಭೀತಿಯಿದ್ದು, ಅದನ್ನು ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
- Advertisement 2
ಕೇಜ್ರಿವಾಲ್ ಅವರು ಸರ್ಕಾರದ ವಿವಿಧ ಇಲಾಖೆಗಳ ಜೊತೆ ಸಿದ್ಧತೆ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಆಮ್ಲಜನಕ ಸೌಲಭ್ಯವಿರುವ 30,000 ಬೆಡ್ಗಳು ಹಾಗೂ ಆಮ್ಲಜನಕ ಪೂರೈಕೆ ಹಾಗೂ ಸಂಗ್ರಹ ವ್ಯವಸ್ಥೆಯನ್ನು ಒಂದೆರಡು ವಾರಗಳಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗುವುದು. ಕೊರೊನಾ ರೂಪಾಂತರಿ ವೈರಸ್ ಆಗಿರುವ ಓಮಿಕ್ರಾನ್ ಎದುರಿಸಲು ಸರ್ಕಾರ ಸಜ್ಜಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ
- Advertisement 3
- Advertisement 4
30 ಸಾವಿರ ಹಾಸಿಗೆಗಳಲ್ಲಿ 10,000 ಐಸಿಯು ಹಾಸಿಗೆಗಳು ಸೇರಿವೆ. ಇನ್ನೂ 6,800 ಹಾಸಿಗೆಗಳು ಫೆಬ್ರುವರಿ ಹೊತ್ತಿಗೆ ಸಿದ್ಧವಾಗಲಿವೆ. ಪ್ರತೀ ವಾರ್ಡ್ನಲ್ಲಿ 100 ಆಮ್ಲಜನಕ ಸೌಲಭ್ಯವಿರುವ ಹಾಸಿಗೆಗಳನ್ನು ಎರಡು ವಾರದಲ್ಲಿ ಸಿದ್ಧಪಡಿಸಲು ಸಾಧ್ಯವಿದೆ. ಒಟ್ಟು 270 ವಾರ್ಡ್ಗಳಿಂದ 27,000 ಹಾಸಿಗೆಗಳು ಸಿದ್ಧವಾಗಲಿವೆ. ಸಿಬ್ಬಂದಿಯನ್ನು ಈ ಕುರಿತಾಗಿ ತರಬೇತುಗೊಳಿಸುತ್ತಿದ್ದು, 32 ರೀತಿಯ ಔಷಧಗಳ ಖರೀದಿ ಮಾಡಲಾಗುತ್ತಿದೆ. ಹೋಮ್ ಐಸೊಲೇಷನ್ಗೆ ಸಿದ್ಧತೆ ನಡೆಯುತ್ತಿದ್ದು, 121 ಟನ್ ಆಮ್ಲಜನಕ ಉತ್ಪಾದಿಸುವ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು