ನೋಟ್ ಬ್ಯಾನ್ ದೊಡ್ಡ ಹಗರಣ- ಅರವಿಂದ್ ಕೇಜ್ರಿವಾಲ್

Public TV
1 Min Read
Narendra Modi Arvind Kejriwal

ನವದೆಹಲಿ: ನೋಟು ಅಮಾನೀಕರಣ ವಿಚಾರವಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಗುಡುಗಿದ್ದಾರೆ.

ಸ್ವಾತಂತ್ರ್ಯನಂತರ ಹಿಂದೆಂದೂ ಕಾಣದಂತಹ ನಿರುದ್ಯೋಗ ಸಮಸ್ಯೆ ಈಗ ದೇಶದಲ್ಲಿ ಸೃಷ್ಟಿಯಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿಯನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಎಂದು ಅರವಿಂದ್ ಕೇಜ್ರಿವಾಲ್ ಗುಡುಗಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?:
ನೋಟ್ ಬ್ಯಾನ್ ದುರಂತವಲ್ಲ. ಅದೊಂದು ದೊಡ್ಡ ಹಗರಣ. ನೋಟ್ ಬ್ಯಾನ್ ದೇಶದ ಆರ್ಥಿಕತೆಯನ್ನೇ ಹಾಳು ಮಾಡಿದೆ. ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದೆ ಎಂಬ ಎನ್‍ಎಸ್‍ಎಸ್‍ಒ ಅಂಕಿ ಸಂಖ್ಯೆ ಮಾಹಿತಿಯನ್ನು ಮುಚ್ಚಿಹಾಕಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಯತ್ನಿಸುತ್ತಿದೆ. ದೇಶದಲ್ಲಿ 1947ರ ಬಳಿಕ ಕಾಣದಂತಹ ನಿರುದ್ಯೋಗ ಸಮಸ್ಯೆ ಈಗ ಹೆಚ್ಚಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕ ರಮೇಶ್ ಅವರು ನೀವು ನೋಟ್ ಬ್ಯಾನ್‍ಗೂ ಮುನ್ನ ಹೀಗೆ ಇದ್ದೀರಿ. ನೋಟು ಅಮಾನೀಕರಣಗೊಂಡ ಬಳಿಕ ಹೀಗೆ ಆಗಿದ್ದೀರಾ ಎಂದು ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾವು 2016ರ ನವೆಂಬರ್ ನಲ್ಲಿ 500ರೂ. ಹಾಗೂ 1,000 ರೂ. ಮುಖಬೆಲೆಯ ನೋಟು ನಿಷೇಧವನ್ನು ಮಾಡಿತ್ತು. ಬಳಿಕ 500 ರೂ. ಹೊಸ ನೋಟು ಹಾಗೂ 2,000 ರೂ. ಮುಖಬೆಲೆಯ ನೋಟನ್ನು ಜಾರಿಗೆ ತಂದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *