Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

Court

ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

Public TV
Last updated: March 28, 2024 8:17 pm
Public TV
Share
3 Min Read
Arvind Kejriwal 1
SHARE

– ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದ ಇಡಿ
– ಪ್ರಕರಣದಲ್ಲಿ ನನ್ನ ಸಿಲುಕಿಸುವುದೇ ಇಡಿಯ ಏಕೈಕ ಉದ್ದೇಶ ಎಂದ ಕೇಜ್ರಿವಾಲ್

ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದಲ್ಲಿ (Delhi Liquor Scam) ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಇಡಿ (ED) ಕಸ್ಟಡಿಯನ್ನು ನಾಲ್ಕು ದಿನಗಳಿಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ. ಕೇಜ್ರಿವಾಲ್ ವಿಚಾರಣೆಗೆ ಸಹಕರಿಸುತ್ತಿಲ್ಲ, ಪ್ರಕರಣದ ನಾಲ್ಕು ಮಂದಿ ಇತರೆ ಆರೋಪಿಗಳೊಂದಿಗೆ ಕೇಜ್ರಿವಾಲ್ ಅವರ ತನಿಖೆ ನಡೆಸಲು ಸಮಯ ಕೋರಿದ ಇಡಿ ವಾದವನ್ನು ಕೋರ್ಟ್ ಪುರಸ್ಕರಿಸಿದೆ.

ಇದಕ್ಕೂ ಮುನ್ನ ಕಸ್ಟಡಿ ಅಂತ್ಯವಾದ ಹಿನ್ನಲೆ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಲಯದ (Court) ಮುಂದೆ ಹಾಜರುಪಡಿಸಲಾಯಿತು. ಕೋರ್ಟ್ ಪ್ರವೇಶ ಮಾಡುವ ವೇಳೆ “ಉದ್ದೇಶಪೂರ್ವಕವಾಗಿ ಸಿಕ್ಕಿಹಾಕಿಸುವ ಪ್ರಯತ್ನ ಮಾಡಲಾಗುತ್ತಿದೆ ಜನರು ಇದಕ್ಕೆ ಉತ್ತರಿಸಲಿದ್ದಾರೆ” ಎಂದು ಅಲ್ಲಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

Enforcement Directorate

ವಿಚಾರಣೆ ಆರಂಭವಾಗುತ್ತಿದ್ದಂತೆ ತಮ್ಮ ಪರವಾಗಿ ತಾವೇ ವಾದ ಮಂಡಿಸಿದ ಅರವಿಂದ್ ಕೇಜ್ರಿವಾಲ್, ನನ್ನನ್ನು ಸಿಕ್ಕಿ ಹಾಕಿಸುವುದು ಇಡಿಯ ಏಕೈಕ ಉದ್ದೇಶವಾಗಿದೆ ಎಂದು ಆರೋಪಿಸಿದರು. ನಾನು ರಿಮಾಂಡ್ ಅನ್ನು ವಿರೋಧಿಸುತ್ತಿಲ್ಲ ಇಡಿ ಅವರು ಎಲ್ಲಿಯವರೆಗೆ ನನ್ನನ್ನು ಕಸ್ಟಡಿಯಲ್ಲಿ ಇರಿಸಬಹುದು? ಆದರೆ ಇಡಿ ತನಿಖೆಯ ಹೆಸರಿನಲ್ಲಿ ಸುಲಿಗೆ ದಂಧೆ ನಡೆಸುತ್ತಿರುವುದು ನಿಜವಾದ ಹಗರಣ ಎಂದು ವಾದಿಸಿದರು. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

ಕೆಲವು ಆರೋಪಿಗಳು ತಮ್ಮನ್ನು ಬಂಧಿಸಿದ ನಂತರ ಭಾರತೀಯ ಜನತಾ ಪಕ್ಷಕ್ಕೆ ಎಲೆಕ್ಟ್ರೋಲ್ ಬಾಂಡ್ ಮೂಲಕ ಹಣವನ್ನು ದೇಣಿಗೆ ನೀಡಿದ್ದಾರೆ. ನಂತರ ಅವರು ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಓರ್ವ ಆರೋಪಿ ಶರತ್ ಚಂದ್ರ ರೆಡ್ಡಿ ಬಿಜೆಪಿಗೆ 55 ಕೋಟಿ ದೇಣಿಗೆ ನೀಡಿದ್ದಾರೆ. ದಂಧೆ ನಡೆಯುತ್ತಿದೆ ಎಂಬುದಕ್ಕೆ ನನ್ನ ಬಳಿ ಸಾಕ್ಷ್ಯವಿದೆ. ಹಣದ ಜಾಡು ಪತ್ತೆಯಾಗಿದೆ. ಬಂಧನದ ನಂತರ ಬಿಜೆಪಿಗೆ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಸಿಎಂ ಕೋರ್ಟ್ ಗಮನ ಸೆಳೆದರು.

#WATCH | Excise Case: Delhi CM Arvind Kejriwal says "This is a political conspiracy, the public will give an answer to this."

Delhi Court extended ED remand of Arvind Kejriwal till April 1. pic.twitter.com/iWONJzELGZ

— ANI (@ANI) March 28, 2024

ಪ್ರಕರಣದಲ್ಲಿ ನಾಲ್ಕು ಬಾರಿ ಹೆಸರು ಕಾಣಿಸಿಕೊಂಡಿದೆ. ಸಾಕ್ಷಿಯೊಬ್ಬರು ಅಂದಿನ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ನನಗೆ ದಾಖಲೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಶಾಸಕರು ಪ್ರತಿದಿನ ನನ್ನ ಮನೆಗೆ ಬರುತ್ತಾರೆ. ನನ್ನನ್ನು ಆರೋಪಿಸಲು ಇಂತಹ ಹೇಳಿಕೆ ಸಾಕೇ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಏಳು ಸಾಕ್ಷಿಗಳ ಪೈಕಿ ಆರು ಸಾಕ್ಷಿಗಳು ನನ್ನ ಹೆಸರು ಉಲ್ಲೇಖಿಸಿಲ್ಲ, ಏಳನೇ ಸಾಕ್ಷಿ ನನ್ನ ಹೆಸರು ಉಲ್ಲೇಖಿಸಿದ ತಕ್ಷಣ ಬಾಕಿ ಆರು ಸಾಕ್ಷಿಗಳ ಹೇಳಿಕೆಯನ್ನು ಬದಿಗೆ ಸರಿಸಿದೆ. ಅಲ್ಲದೇ ನನ್ನ ಹೆಸರು ಉಲ್ಲೇಖಿಸಿದ ಸಾಕ್ಷಿಗೆ ಜಾಮೀನು ಮಂಜೂರಾಗಿದೆ ಎಂದು ಹೇಳಿದರು.

ಕೇಜ್ರಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಇನ್ನೂ ಕೆಲವು ವ್ಯಕ್ತಿಗಳ ಹೇಳಿಕೆಗಳೊಂದಿಗೆ ಸಂಸ್ಥೆಯು ಸಿಎಂ ಅವರನ್ನು ವಿಚಾರಣೆ ನಡೆಸಬೇಕಿದೆ. ಹೀಗಾಗಿ ಇನ್ನೂ ಏಳು ದಿನ ಹೆಚ್ಚುವರಿ ಕಸ್ಟಡಿಗೆ ನೀಡಬೇಕಾಗುತ್ತದೆ ಎಂದರು. ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಆದರೆ ಅವರು ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡಿದರು. ನಾವು ಅವರನ್ನು ಇತರ ಕೆಲವು ಜನರೊಂದಿಗೆ ಎದುರಿಸಬೇಕಾಗಿದೆ. ಎಎಪಿ ಗೋವಾ ಅಭ್ಯರ್ಥಿಗಳ ಇನ್ನೂ ನಾಲ್ಕು ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ನಾವು ಅವರೊಂದಿಗೆ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಎಎಸ್‌ಜಿ ವಾದಿಸಿದರು.

#WATCH | Excise Case: Delhi CM Arvind Kejriwal brought to ED office after hearing in Delhi's Rouse Avenue Court.

Delhi Court extended ED remand of Arvind Kejriwal till April 1. pic.twitter.com/cggQf4ZALI

— ANI (@ANI) March 28, 2024

ಕೇಜ್ರಿವಾಲ್ ತಮ್ಮ ಖಾತೆಗಳ ಪಾಸ್‌ವರ್ಡ್‌ಗಳನ್ನು ಏಜೆನ್ಸಿಯೊಂದಿಗೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ ಇದರಿಂದ ನಮಗೆ ಡಿಜಿಟಲ್ ಡೇಟಾಗೆ ಪ್ರವೇಶ ಸಿಕ್ಕಿಲ್ಲ, ಅವರು ಉದ್ದೇಶಪೂರ್ವಕವಾಗಿ ಸಹಕರಿಸುತ್ತಿಲ್ಲ ಮತ್ತು ನಮಗೆ ಐಟಿಆರ್‌ಗಳನ್ನು ನೀಡುತ್ತಿಲ್ಲ‌ ಎಂದರು. ಇನ್ನು ಕೇಜ್ರಿವಾಲ್ ಆರೋಪಗಳಿಗೆ ಪ್ರತಿಕ್ರಿಯಿಸಿ ರಿಮಾಂಡ್ ಹಂತದಲ್ಲಿ ಅವು ಪ್ರಸ್ತುತವಲ್ಲ, ಮಾಹಿತಿಯೂ ಉತ್ಪಾದನೆಯ ಹಂತದಲ್ಲಿದೆ, ಈ ಎಲ್ಲಾ ವಿಷಯಗಳು ಹೇಗೆ ಸಂಬಂಧಿತವಾಗಿವೆ? ಯಾರಾದರೂ ಹೇಳಿಕೆ ನೀಡಲು ಒತ್ತಾಯಿಸಲಾಗಿದೆಯೇ ಎಂಬುದು ವಿಚಾರಣೆಯ ವಿಷಯವಾಗಿದೆ ಎಂದರು.

ಗೋವಾ ಚುನಾವಣೆಯಲ್ಲಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಹವಾಲಾ ಮೂಲಕ ಹಣ ಬಂದಿದೆ ಇದನ್ನು ಗೋವಾ ಪ್ರಚಾರಕ್ಕೆ ಹಣವನ್ನು ಬಳಸಲಾಗಿದೆ ಎಂದು ತೋರಿಸಲು ನಮ್ಮ ಬಳಿ ಹೇಳಿಕೆಗಳು ಮತ್ತು ದಾಖಲೆಗಳಿವೆ. ಕೇಜ್ರಿವಾಲ್ 100 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂಬುದನ್ನು ತೋರಿಸಲು ಇಡಿ ಬಳಿಯೂ ಸಾಕ್ಷಿಗಳಿದೆ ಎಂದು ಎಎಸ್‌ಜಿ ವಾದಿಸಿದರು. ವಾದ ಪ್ರತಿ ವಾದ ಆಲಿಸಿದ ಬಳಿಕ ನಾಲ್ಕು ದಿನಗಳ‌ ಕಸ್ಟಡಿಯನ್ನು ಕೋರ್ಟ್ ವಿಸ್ತರಿಸಿತು‌.

TAGGED:aapArvind KejriwalEDjailಅರವಿಂದ ಕೇಜ್ರಿವಾಲ್ಆಪ್ಇಂಡಿಜೈಲು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
33 minutes ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
37 minutes ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
55 minutes ago
Big Bash League
Cricket

ಭಾರತದಲ್ಲಿ ಆಸ್ಟ್ರೇಲಿಯಾದ ಬಿಗ್ ಬ್ಯಾಷ್ ಲೀಗ್ – ಪಾಕ್‌ ಆಟಗಾರರ ಕಥೆ ಏನು?

Public TV
By Public TV
1 hour ago
Tarique Rahman 2
Latest

ಬಾಂಗ್ಲಾ ಪ್ರಧಾನಿಯಾಗಿ ತಾರೀಖ್ ರೆಹಮಾನ್ ಪ್ರಮಾಣವಚನ – ಹಿಂದೂ ಸಂಸದನಿಗೂ ಮಂತ್ರಿಸ್ಥಾನ

Public TV
By Public TV
1 hour ago
T20 World Cup Australia out Zimbabwe reach Super 8 stage after Pallekele washout
Cricket

ಟಿ-20 ವಿಶ್ವಕಪ್‌ನಿಂದ ಆಸ್ಟ್ರೇಲಿಯಾ ಔಟ್‌ – ಸೂಪರ್‌-8ಕ್ಕೆ ಜಿಂಬಾಬ್ವೆ ಜಿಗಿತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?