Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

Court

ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿ 4 ದಿನ ವಿಸ್ತರಣೆ

Public TV
Last updated: March 28, 2024 8:17 pm
Public TV
Share
3 Min Read
Arvind Kejriwal 1
SHARE

– ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದ ಇಡಿ
– ಪ್ರಕರಣದಲ್ಲಿ ನನ್ನ ಸಿಲುಕಿಸುವುದೇ ಇಡಿಯ ಏಕೈಕ ಉದ್ದೇಶ ಎಂದ ಕೇಜ್ರಿವಾಲ್

ನವದೆಹಲಿ: ಹೊಸ ಅಬಕಾರಿ ನೀತಿ ಹಗರಣದಲ್ಲಿ (Delhi Liquor Scam) ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಇಡಿ (ED) ಕಸ್ಟಡಿಯನ್ನು ನಾಲ್ಕು ದಿನಗಳಿಗೆ ವಿಸ್ತರಿಸಿ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ. ಕೇಜ್ರಿವಾಲ್ ವಿಚಾರಣೆಗೆ ಸಹಕರಿಸುತ್ತಿಲ್ಲ, ಪ್ರಕರಣದ ನಾಲ್ಕು ಮಂದಿ ಇತರೆ ಆರೋಪಿಗಳೊಂದಿಗೆ ಕೇಜ್ರಿವಾಲ್ ಅವರ ತನಿಖೆ ನಡೆಸಲು ಸಮಯ ಕೋರಿದ ಇಡಿ ವಾದವನ್ನು ಕೋರ್ಟ್ ಪುರಸ್ಕರಿಸಿದೆ.

ಇದಕ್ಕೂ ಮುನ್ನ ಕಸ್ಟಡಿ ಅಂತ್ಯವಾದ ಹಿನ್ನಲೆ ಅರವಿಂದ್ ಕೇಜ್ರಿವಾಲ್ ಅವರನ್ನು ನ್ಯಾಯಲಯದ (Court) ಮುಂದೆ ಹಾಜರುಪಡಿಸಲಾಯಿತು. ಕೋರ್ಟ್ ಪ್ರವೇಶ ಮಾಡುವ ವೇಳೆ “ಉದ್ದೇಶಪೂರ್ವಕವಾಗಿ ಸಿಕ್ಕಿಹಾಕಿಸುವ ಪ್ರಯತ್ನ ಮಾಡಲಾಗುತ್ತಿದೆ ಜನರು ಇದಕ್ಕೆ ಉತ್ತರಿಸಲಿದ್ದಾರೆ” ಎಂದು ಅಲ್ಲಿದ್ದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

Enforcement Directorate

ವಿಚಾರಣೆ ಆರಂಭವಾಗುತ್ತಿದ್ದಂತೆ ತಮ್ಮ ಪರವಾಗಿ ತಾವೇ ವಾದ ಮಂಡಿಸಿದ ಅರವಿಂದ್ ಕೇಜ್ರಿವಾಲ್, ನನ್ನನ್ನು ಸಿಕ್ಕಿ ಹಾಕಿಸುವುದು ಇಡಿಯ ಏಕೈಕ ಉದ್ದೇಶವಾಗಿದೆ ಎಂದು ಆರೋಪಿಸಿದರು. ನಾನು ರಿಮಾಂಡ್ ಅನ್ನು ವಿರೋಧಿಸುತ್ತಿಲ್ಲ ಇಡಿ ಅವರು ಎಲ್ಲಿಯವರೆಗೆ ನನ್ನನ್ನು ಕಸ್ಟಡಿಯಲ್ಲಿ ಇರಿಸಬಹುದು? ಆದರೆ ಇಡಿ ತನಿಖೆಯ ಹೆಸರಿನಲ್ಲಿ ಸುಲಿಗೆ ದಂಧೆ ನಡೆಸುತ್ತಿರುವುದು ನಿಜವಾದ ಹಗರಣ ಎಂದು ವಾದಿಸಿದರು. ಇದನ್ನೂ ಓದಿ: ಡಿಕೆ ಸುರೇಶ್‌ ಬರೋಬ್ಬರಿ 593 ಕೋಟಿ ರೂ. ಆಸ್ತಿಗೆ ಒಡೆಯ!

ಕೆಲವು ಆರೋಪಿಗಳು ತಮ್ಮನ್ನು ಬಂಧಿಸಿದ ನಂತರ ಭಾರತೀಯ ಜನತಾ ಪಕ್ಷಕ್ಕೆ ಎಲೆಕ್ಟ್ರೋಲ್ ಬಾಂಡ್ ಮೂಲಕ ಹಣವನ್ನು ದೇಣಿಗೆ ನೀಡಿದ್ದಾರೆ. ನಂತರ ಅವರು ಜಾಮೀನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಓರ್ವ ಆರೋಪಿ ಶರತ್ ಚಂದ್ರ ರೆಡ್ಡಿ ಬಿಜೆಪಿಗೆ 55 ಕೋಟಿ ದೇಣಿಗೆ ನೀಡಿದ್ದಾರೆ. ದಂಧೆ ನಡೆಯುತ್ತಿದೆ ಎಂಬುದಕ್ಕೆ ನನ್ನ ಬಳಿ ಸಾಕ್ಷ್ಯವಿದೆ. ಹಣದ ಜಾಡು ಪತ್ತೆಯಾಗಿದೆ. ಬಂಧನದ ನಂತರ ಬಿಜೆಪಿಗೆ 50 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಸಿಎಂ ಕೋರ್ಟ್ ಗಮನ ಸೆಳೆದರು.

#WATCH | Excise Case: Delhi CM Arvind Kejriwal says "This is a political conspiracy, the public will give an answer to this."

Delhi Court extended ED remand of Arvind Kejriwal till April 1. pic.twitter.com/iWONJzELGZ

— ANI (@ANI) March 28, 2024

ಪ್ರಕರಣದಲ್ಲಿ ನಾಲ್ಕು ಬಾರಿ ಹೆಸರು ಕಾಣಿಸಿಕೊಂಡಿದೆ. ಸಾಕ್ಷಿಯೊಬ್ಬರು ಅಂದಿನ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಸಮ್ಮುಖದಲ್ಲಿ ನನಗೆ ದಾಖಲೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಶಾಸಕರು ಪ್ರತಿದಿನ ನನ್ನ ಮನೆಗೆ ಬರುತ್ತಾರೆ. ನನ್ನನ್ನು ಆರೋಪಿಸಲು ಇಂತಹ ಹೇಳಿಕೆ ಸಾಕೇ? ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಏಳು ಸಾಕ್ಷಿಗಳ ಪೈಕಿ ಆರು ಸಾಕ್ಷಿಗಳು ನನ್ನ ಹೆಸರು ಉಲ್ಲೇಖಿಸಿಲ್ಲ, ಏಳನೇ ಸಾಕ್ಷಿ ನನ್ನ ಹೆಸರು ಉಲ್ಲೇಖಿಸಿದ ತಕ್ಷಣ ಬಾಕಿ ಆರು ಸಾಕ್ಷಿಗಳ ಹೇಳಿಕೆಯನ್ನು ಬದಿಗೆ ಸರಿಸಿದೆ. ಅಲ್ಲದೇ ನನ್ನ ಹೆಸರು ಉಲ್ಲೇಖಿಸಿದ ಸಾಕ್ಷಿಗೆ ಜಾಮೀನು ಮಂಜೂರಾಗಿದೆ ಎಂದು ಹೇಳಿದರು.

ಕೇಜ್ರಿ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಡಿ ಪರ ವಕೀಲ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ ರಾಜು ಇನ್ನೂ ಕೆಲವು ವ್ಯಕ್ತಿಗಳ ಹೇಳಿಕೆಗಳೊಂದಿಗೆ ಸಂಸ್ಥೆಯು ಸಿಎಂ ಅವರನ್ನು ವಿಚಾರಣೆ ನಡೆಸಬೇಕಿದೆ. ಹೀಗಾಗಿ ಇನ್ನೂ ಏಳು ದಿನ ಹೆಚ್ಚುವರಿ ಕಸ್ಟಡಿಗೆ ನೀಡಬೇಕಾಗುತ್ತದೆ ಎಂದರು. ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಆದರೆ ಅವರು ತಪ್ಪಿಸಿಕೊಳ್ಳುವ ಉತ್ತರಗಳನ್ನು ನೀಡಿದರು. ನಾವು ಅವರನ್ನು ಇತರ ಕೆಲವು ಜನರೊಂದಿಗೆ ಎದುರಿಸಬೇಕಾಗಿದೆ. ಎಎಪಿ ಗೋವಾ ಅಭ್ಯರ್ಥಿಗಳ ಇನ್ನೂ ನಾಲ್ಕು ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ. ನಾವು ಅವರೊಂದಿಗೆ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಎಎಸ್‌ಜಿ ವಾದಿಸಿದರು.

#WATCH | Excise Case: Delhi CM Arvind Kejriwal brought to ED office after hearing in Delhi's Rouse Avenue Court.

Delhi Court extended ED remand of Arvind Kejriwal till April 1. pic.twitter.com/cggQf4ZALI

— ANI (@ANI) March 28, 2024

ಕೇಜ್ರಿವಾಲ್ ತಮ್ಮ ಖಾತೆಗಳ ಪಾಸ್‌ವರ್ಡ್‌ಗಳನ್ನು ಏಜೆನ್ಸಿಯೊಂದಿಗೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ ಇದರಿಂದ ನಮಗೆ ಡಿಜಿಟಲ್ ಡೇಟಾಗೆ ಪ್ರವೇಶ ಸಿಕ್ಕಿಲ್ಲ, ಅವರು ಉದ್ದೇಶಪೂರ್ವಕವಾಗಿ ಸಹಕರಿಸುತ್ತಿಲ್ಲ ಮತ್ತು ನಮಗೆ ಐಟಿಆರ್‌ಗಳನ್ನು ನೀಡುತ್ತಿಲ್ಲ‌ ಎಂದರು. ಇನ್ನು ಕೇಜ್ರಿವಾಲ್ ಆರೋಪಗಳಿಗೆ ಪ್ರತಿಕ್ರಿಯಿಸಿ ರಿಮಾಂಡ್ ಹಂತದಲ್ಲಿ ಅವು ಪ್ರಸ್ತುತವಲ್ಲ, ಮಾಹಿತಿಯೂ ಉತ್ಪಾದನೆಯ ಹಂತದಲ್ಲಿದೆ, ಈ ಎಲ್ಲಾ ವಿಷಯಗಳು ಹೇಗೆ ಸಂಬಂಧಿತವಾಗಿವೆ? ಯಾರಾದರೂ ಹೇಳಿಕೆ ನೀಡಲು ಒತ್ತಾಯಿಸಲಾಗಿದೆಯೇ ಎಂಬುದು ವಿಚಾರಣೆಯ ವಿಷಯವಾಗಿದೆ ಎಂದರು.

ಗೋವಾ ಚುನಾವಣೆಯಲ್ಲಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಹವಾಲಾ ಮೂಲಕ ಹಣ ಬಂದಿದೆ ಇದನ್ನು ಗೋವಾ ಪ್ರಚಾರಕ್ಕೆ ಹಣವನ್ನು ಬಳಸಲಾಗಿದೆ ಎಂದು ತೋರಿಸಲು ನಮ್ಮ ಬಳಿ ಹೇಳಿಕೆಗಳು ಮತ್ತು ದಾಖಲೆಗಳಿವೆ. ಕೇಜ್ರಿವಾಲ್ 100 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎಂಬುದನ್ನು ತೋರಿಸಲು ಇಡಿ ಬಳಿಯೂ ಸಾಕ್ಷಿಗಳಿದೆ ಎಂದು ಎಎಸ್‌ಜಿ ವಾದಿಸಿದರು. ವಾದ ಪ್ರತಿ ವಾದ ಆಲಿಸಿದ ಬಳಿಕ ನಾಲ್ಕು ದಿನಗಳ‌ ಕಸ್ಟಡಿಯನ್ನು ಕೋರ್ಟ್ ವಿಸ್ತರಿಸಿತು‌.

TAGGED:aapArvind KejriwalEDjailಅರವಿಂದ ಕೇಜ್ರಿವಾಲ್ಆಪ್ಇಂಡಿಜೈಲು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
8 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
10 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?