ಚಿಕ್ಕೋಡಿ: ನಾಡೋಜ ಡಾ.ಮಹೇಶ್ ಜೋಶಿ ಅವರು ಕಸಾಪ ರಾಜ್ಯಾಧ್ಯಕ್ಷರಾಗಿರುವುದು ಹರ್ಷ ತಂದಿದೆ. ಅವರು ಕನ್ನಡದ ನಿಷ್ಠಾವಂತ ಸೇವಕ ಎಂದು ಆರ್ಎಸ್ಎಸ್ ಮುಖಂಡ ಹಾಗೂ ಶಿಕ್ಷಣ ಪ್ರೇಮಿ ಅರವಿಂದರಾವ್ ದೇಶಪಾಂಡೆ ಹೇಳಿದರು.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ದಿನಾಂಕ 21ರಂದು ನಡೆದ ಕಸಾಪ ಚುನಾವಣೆಯಲ್ಲಿ ಜೋಶಿ ಅವರು 69,431 ಮತಗಳನ್ನು ಪಡೆಯುವ ಮೂಲಕ ದಾಖಲೆಯ ಗೆಲುವು ಸಾಧಿಸಿದ್ದಾರೆ. ಕಸಾಪ ನೂತನ ಸಾರಥಿಯಾಗಿ ಜೋಶಿ ಅವರು ಕನ್ನಡಾಂಬೆಯ ಸೇವೆಯನ್ನು ವಿನೂತನ ಮಾದರಿಯಲ್ಲಿ ಮಾಡುತ್ತಾರೆ ಎಂಬ ವಿಶ್ವಾಸದಿಂದ ಕನ್ನಡಿಗರು ಮತ ನೀಡಿದ್ದಾರೆ ಎಂದು ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಿದ್ಧಾರೂಢ ಮಠದಲ್ಲಿ ಪೂಜೆಸಲ್ಲಿಸಲು ಹೋದ ಯುವಕ ಕೆರೆ ಪಾಲು
- Advertisement 2
ಈ ಸಂದರ್ಭದಲ್ಲಿ, ನನ್ನ ಗೆಲುವಿಗಾಗಿ ದುಡಿದು, ಚುನಾವಣೆಯ ಮಧ್ಯದಲ್ಲಿಯೇ ಮಡಿದ, ಧಾರವಾಡದ, “ಕರ್ನಾಟಕ ವಿದ್ಯಾವರ್ಧಕ ಸಂಘದ” ಕೋಶಾಧ್ಯಕ್ಷರಾಗಿ, ಸೇವೆ ಸಲ್ಲಿಸುತ್ತಿದ್ದ , ನನ್ನ ಅಣ್ಣ ಕೃಷ್ಣ ಜೋಶಿಯವರನ್ನು ಕಣ್ಣೀರಿನ ಮಧ್ಯೆ ಸ್ಮರಿಸಿಕೊಳ್ಳುತ್ತಿದ್ದೇನೆ. pic.twitter.com/GxyzLSpM3y
— Nadoja Dr. Mahesh Joshi – ನಾಡೋಜ ಡಾ. ಮಹೇಶ ಜೋಶಿ (@nadojamj) November 28, 2021
- Advertisement 3
ಅದೇ ರೀತಿ ಬೆಳಗಾವಿ ಜಿಲ್ಲೆಯ ಅಧ್ಯಕ್ಷರಾಗಿ ಮಂಗಲಾ ಮೆಟಗುಡ್ಡ ಅವರು ಮರು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಗಡಿಭಾಗದ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸವನ್ನು ಮಾಡಲಿ ಎಂದು ಶುಭ ಹಾರೈಸಿದ ಅವರು ಬಹುಮತ ನೀಡಿ ಆಯ್ಕೆ ಮಾಡಿದ ಮತದಾರರಿಗೆ ಅಭಿನಂದಿಸಿದರು.
- Advertisement 4
ಅಥಣಿ ತಾಲೂಕಿನ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಕನಶೆಟ್ಟಿ ಮಾತನಾಡಿದ್ದು, ನಾಡೋಜ ಡಾ.ಮಹೇಶ್ ಜೋಶಿ ಅವರು ತಮ್ಮ ಪ್ರತಿಸ್ಪರ್ಧಿ ಶೇಖರ್ಗೌಡ ಮಾಲಿ ಪಾಟೀಲ್ ಅವರ ವಿರುದ್ಧ 46,236 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ಹಿಂದಿನ ಅಧ್ಯಕ್ಷರಾದ ಮನು ಬಳಿಗಾರ್ ಅವರ 38 ಸಾವಿರ ಮತಗಳ ದಾಖಲೆಯನ್ನು ಮುರಿದು ಹಾಕಿದ್ದಾರೆ ಎಂದು ತಿಳಿಸಿದರು.
ಸಮಸ್ತ ಕನ್ನಡಿಗರಿಗೆ ಚಿರಪರಿಚಿತರಾಗಿರುವ ಜೋಶಿ ಅವರು ಚುನಾವಣೆಯ ಪೂರ್ವದಲ್ಲಿ ಅನೇಕ ಸುಧಾರಣೆಗಳು ಪ್ರಣಾಳಿಕೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ಕನ್ನಡಪರ ಕೆಲಸ ಮಾಡುವುದರ ಜೊತೆಗೆ ನಮ್ಮ ಗಡಿಭಾಗದಲ್ಲಿಯೂ ಕೂಡ ಕನ್ನಡ ಅಸ್ಮಿತೆಯನ್ನು ಕಾಪಾಡುವ ಕೆಲಸ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಯಾರೂ ತಿರುಕನ ಕನಸು ಕಾಣೋದು ಬೇಡ: ಆರ್. ಅಶೋಕ್
ತಮ್ಮ ಅಮೋಘಬೆಂಬಲದಿಂದ,ದಾಖಲೆಯನ್ನು ಸೃಷ್ಟಿಮಾಡಿ,ನನ್ನ ವಿರುದ್ಧಚುನಾವಣೆಯಲ್ಲಿ ಸ್ಪರ್ಧಿಸಿದ್ದ,೨೦ಅಭ್ಯರ್ಥಿಗಳ ಠೇವಣಿಕಳೆದು, ಕನ್ನಡಿಗರ ಏಕೈಕಪ್ರಾತಿನಿಧಿಕಸಂಸ್ಥೆಯಾದ “ಕನ್ನಡಸಾಹಿತ್ಯಪರಿಷತ್ತಿನ”ಅಧ್ಯಕ್ಷನಾಗಿ, ಗೌರವದಿಂದ,ಅಭಿಮಾನದಿಂದ,ಹೆಮ್ಮೆಯಿಂದ, “ತಮ್ಮೆಲ್ಲರನ್ನು ಪ್ರತಿನಿಧಿಸುವಂತಹ ಪ್ರತಿನಿಧಿಯಾಗಿ”,ಅಧಿಕಾರವನ್ನು ಸ್ವೀಕರಿಸಿದ್ದೇನೆ pic.twitter.com/ddRFQ8rvmv
— Nadoja Dr. Mahesh Joshi – ನಾಡೋಜ ಡಾ. ಮಹೇಶ ಜೋಶಿ (@nadojamj) November 28, 2021
ಈ ವೇಳೆ ಆನಂದ್ ಟೋಣಪಿ, ಅನಿಲ್ ಶಾಸ್ತ್ರಿ, ವೆಂಕಟೇಶ್ ದೇಶಪಾಂಡೆ ಇನ್ನಿತರರು ಉಪಸ್ಥಿತರಿದ್ದರು.
ಕನ್ನಡ ಸಾಹಿತ್ಯ ಪರಿಷತ್ತಿಗೆ 26ನೇಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಾಡೋಜ ಡಾ.ಮಹೇಶ್ ಜೋಶಿ ಹೆಸರು ಸಮಸ್ತ ಕನ್ನಡಿಗರಿಗೂ ಚಿರಪರಿಚಿತವಾಗಿದೆ. ಸಂತ ಶಿಶುನಾಳ ಶರೀಫರ ಗುರುಗಳಾದ ಗುರು ಗೋವಿಂದ ಭಟ್ಟರ ಮರಿಮೊಮ್ಮಗನಾಗಿರುವ ಜೋಶಿ ಅವರು ದೂರದರ್ಶನ ಚಂದನ ವಾಹಿನಿಯ ಮೂಲಕ ಮಧುರ ಮಧುರವೀ ಮಂಜುಳಗಾನ ಮತ್ತು ಥಟ್ಟಂತ ಹೇಳಿ ಕಾರ್ಯಕ್ರಮಗಳ ಮೂಲಕ ಮನೆಮಾತಾಗಿದ್ದರು.