ಬಿಗ್ ಬಾಸ್ ಮನೆಯಲ್ಲಿ ಒಂದು ಕಡೆ ಟ್ರ್ಯಾಜಿಡಿ ಕಥೆಗಳೇ ಓಡುತ್ತಿದ್ದರೆ, ಮತ್ತೊಂದು ಕಡೆ ಆರ್ಯವರ್ಧನ್ ಗುರೂಜಿ ತಮ್ಮ ಪಾಡಿಗೆ ತಾವು ಅನಿಸಿದನ್ನೂ ಮಾಡುತ್ತಾ ಹೋಗುತ್ತಿದ್ದಾರೆ. ರಾಕೇಶ್ ಅಡಿಗ, ಸೋನು ಶ್ರೀನಿವಾಸ್ ಗೌಡ, ಸಾನ್ಯ ಅಯ್ಯರ್ ಸೇರಿದಂತೆ ಹಲವರು ತಮ್ಮ ಮೇಲೆ ನಡೆದ ಮಾನಸಿಕ ಮತ್ತು ದೈಹಿಕ ಶೋಷಣೆಯನ್ನು ಹಂಚಿಕೊಂಡಿದ್ದಾರೆ. ಕೆಲವರು ತಮ್ಮ ಬ್ರೇಕ್ ಅಪ್ ಕಥೆಗಳನ್ನು ಹೇಳಿದ್ದರೆ ಮತ್ತಷ್ಟು ಜನ ಡಿವೋರ್ಸ್ ವಿಚಾರವನ್ನು ಬಹಿರಂಗ ಪಡಿಸಿದ್ದಾರೆ. ಈ ನಡುವೆ ಆರ್ಯವರ್ಧನ್ ಗುರೂಜಿ ಬೇರೆ ರೀತಿಯಲ್ಲೇ ಇದನ್ನು ವ್ಯಾಖ್ಯಾನಿಸಿದ್ದಾರೆ.
ತಂದೆ ತಾಯಿ ಗಲಾಟೆ, ಪ್ರೇಮ, ವಿರಹ, ಬ್ರೇಕ್ ಅಪ್ ಈ ರೀತಿಯ ವಿಷಯಗಳನ್ನು ಮನೆಯಲ್ಲಿ ಇದ್ದವರು ಹೇಳಿಕೊಂಡು ಸಿಂಪತಿ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಎಲ್ಲರ ಜೀವನದಲ್ಲೂ ಕಹಿ ಘಟನೆಗಳು ನಡೆದಿರುತ್ತವೆ. ಅವುಗಳನ್ನು ದಾಟಿಕೊಂಡು ಮುಂದೆ ಸಾಗಬೇಕು ಎಂದಿದ್ದಾರೆ. ಸಿಂಪತಿ ಪಡೆಯುವಂತಹ ವಿಷಯಗಳನ್ನು ಕಡಿಮೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ನಡುವೆ ತಾವು ಸಾವಿರಾರು ಕೋಟಿ ಒಡೆಯರು ಎಂದು ಆರ್ಯರ್ವಧನ್ ಗುರೂಜಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಮಲತಂದೆಯ ಅಸಲಿ ಮುಖವಾಡ ಬಿಚ್ಚಿಟ್ಟ ನಟಿ ಸಾನ್ಯ ಅಯ್ಯರ್: ಯುವನಟಿಯ ಬದುಕಿನಲ್ಲಿ ಇದೆಂಥ ಬಿರುಗಾಳಿ?
ತಮ್ಮದು ಮೂಲತಃ ಹಳ್ಳಿ. ತಮ್ಮ ಹಿರಿಯರ ಆಸ್ತಿಯು ಸುಮಾರು ಐದು ಸಾವಿರ ಕೋಟಿಗೂ ಅಧಿಕ ಬೆಲೆ ಬಾಳುತ್ತದೆ. ನಾನಂತೂ ಕಷ್ಟದಲ್ಲಿ ಹುಟ್ಟಿಲ್ಲ. ಒಳ್ಳೆಯ ರೀತಿಯಲ್ಲೇ ಬದುಕಿದ್ದೇನೆ. ಅನೇಕರಿಗೆ ಸಹಾಯ ಮಾಡಿದ್ದೇನೆ. ಸಿನಿಮಾ ರಂಗಕ್ಕೂ ಸಾಲ ಕೊಟ್ಟಿದ್ದೇನೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಅನೇಕ ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಆರ್ಯವರ್ಧನ್ ಗುರೂಜಿ ಸಾಲ ಕೊಟ್ಟಿರುವುದಾಗಿ ತಿಳಿಸಿದ್ದಾರೆ. ಯಾರೆಲ್ಲ ಸಾಲವನ್ನು ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿಕೊಳ್ಳಲಿಲ್ಲ.