Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ

Bengaluru City

ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದೇನೆ, ತಪ್ಪೇನು ಅಲ್ಲ: ಕೃಷ್ಣಬೈರೇಗೌಡ ಸಮರ್ಥನೆ

Public TV
Last updated: August 16, 2024 4:29 pm
Public TV
Share
2 Min Read
Krishna Byre Gowda
SHARE

ಬೆಂಗಳೂರು: ಜನಪ್ರತಿನಿಧಿಯಾಗಿ ಜನರ ಸಮಸ್ಯೆ ಬಗ್ಗೆ ಟ್ವೀಟ್ (Tweet) ಮಾಡಿ ಸರಿ ಮಾಡಲು ಹೇಳಿದ್ದೇನೆ. ಇದಕ್ಕೆ ಬೇರೆ ಬಣ್ಣ ಕಟ್ಟೋದು ಬೇಡ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ತಮ್ಮ ಏರಿಯಾದ ರಸ್ತೆ ಗುಂಡಿ ಮುಚ್ಚುವ ಬಗ್ಗೆ ಟ್ವೀಟ್ ಮಾಡಿದ್ದ ವಿಚಾರಕ್ಕೆ ಸ್ಪಷ್ಟನೆ ನೀಡಿದ ಅವರು, ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ಮಾಹಿತಿ ಕೊಡುವ ಪ್ರಯತ್ನ ಮಾಡಿದ್ದೇನೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಸಾರ್ವಜನಿಕರ ಪರವಾಗಿ ಕೆಲಸ ಮಾಡಬೇಕು. ಅಧಿಕಾರಿಗಳಿಗೆ ಮಾಹಿತಿ ಕೊಡೋಕೆ ನಾನಾ ಮಾರ್ಗಗಳು ಇವೆ. ಫೋನ್ ಮಾಡಬಹುದು, ಪತ್ರ ಬರೆಯಬಹುದು. ವೀಡಿಯೋ ಕಳುಹಿಸಬಹುದು. ನಾವು ಅದನ್ನು ಅವರ ಗಮನಕ್ಕೆ ತಂದಿದ್ದೇನೆ. ನನ್ನ ಕ್ಷೇತ್ರದಲ್ಲಿ ಜನ ಸಮಸ್ಯೆ ತಂದಿದ್ದರು. ಅದನ್ನು ಸರಿ ಮಾಡಲು ಹೇಳಿದ್ದೇನೆ. ಅದಕ್ಕೆ ನೀವು ಬಣ್ಣ ಕಟ್ಟಿ ಏನೇನೋ ಹೇಳಿದರೆ ಅದು ಅವರಿಗೆ ಬಿಟ್ಟದ್ದು. ನಮಗೆ ಜನರ ಕೆಲಸ ಸರ್ಕಾರದಿಂದ ಆಗಬೇಕು. ಆ ಒಂದು ಪ್ರಯತ್ನ ನಾನು ಮಾಡುತ್ತಿದ್ದೇನೆ ಎಂದರು. ಇದನ್ನೂ ಓದಿ: ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ

ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ವಿಡಿಯೋವನ್ನು ಸಾರ್ವಜನಿಕರು ನನಗೆ ಕಳಿಸಿದ್ದಾರೆ. @bbmpcommr ಅಥವಾ @BMRCL MD ಯಾರಾದ್ರೂ ಆಗಲಿ ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಿ. pic.twitter.com/qRDqy5NEzZ

— Krishna Byre Gowda (@krishnabgowda) August 14, 2024

ಸಚಿವರ ಟ್ವೀಟ್‌ಗೆ ಬಿಜೆಪಿ ಟೀಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲಸ ಆಗೋದು ಮುಖ್ಯನಾ? ಹೇಗೆ ಆಯ್ತು ಅನ್ನೋದು ಮುಖ್ಯನಾ? ಜನಕ್ಕೆ ಸಮಸ್ಯೆ ಪರಿಹಾರ ಆಗಬೇಕು. ಯಾವ ಮೂಲದಿಂದ ಆಗುತ್ತೆ ಅನ್ನೋದು ಎರಡನೇ ವಿಚಾರ. ಜನ ಪ್ರತಿನಿಧಿಯಾಗಿ ಜನರ ಸಮಸ್ಯೆ ಪರಿಹಾರ ಮಾಡೋದು ನನ್ನ ಕೆಲಸ. ಜನರ ಪರವಾಗಿ ನಾನು ಕೆಲಸ ಮಾಡಿದ್ದೇನೆ. ನಾನು ಆಯುಕ್ತರಿಗೆ ಅನೇಕ ಬಾರಿ ಈ ವಿಷಯ ಹೇಳಿದ್ದೆ. ಅವರಿಗೆ ಚಿತ್ರಣ ಕಳುಹಿಸಿಕೊಡೋಣ ಅಂತ ವೀಡಿಯೋ ಕಳುಹಿಸಿದೆ. ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಕೆಲಸ ಆಗಬೇಕು ಅನ್ನೋದು ಮುಖ್ಯ ಎಂದು ಹೇಳಿದರು. ಇದನ್ನೂ ಓದಿ: Assembly elections 2024: ಜಮ್ಮು-ಕಾಶ್ಮೀರದಲ್ಲಿ 3 ಹಂತ, ಹರಿಯಾಣದಲ್ಲಿ ಅ.1ಕ್ಕೆ ಮತದಾನ

ಸರಿಯಾಗಿ ಕೆಲಸ ಆಗಬೇಕು ಎಂಬುದು ನಮ್ಮ ಉದ್ದೇಶ. ಡಿಸಿಎಂ ಸೂಚನೆ ಕೊಟ್ಟಿದ್ದಾರೆ. ಸಿಎಂ ಕೂಡ ಸೂಚನೆ ಕೊಟ್ಟಿದ್ದಾರೆ. ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಈ ಬಾರಿ ಜಾಸ್ತಿ ಮಳೆ ಆಗುತ್ತದೆ ಎಂದು ನಾನು ಬಿಬಿಎಂಪಿಗೆ ಪತ್ರ ಬರೆದಿದ್ದೆ. ಅದಕ್ಕೆ ರೆಡಿಯಾಗಬೇಕು ಎಂದು ಪತ್ರ ಬರೆದಿದ್ದೆ. ಸರ್ಕಾರ ನಮ್ಮದು. ಆದರೆ ನಮ್ಮ ಸರ್ಕಾರದಲ್ಲಿ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕೆಲಸ ಮಾಡಿ ಸರ್ಕಾರಕ್ಕೆ ತೊಂದರೆ ಆಗಬಾರದು. ನನ್ನ ಮೊದಲ ಆದ್ಯತೆ ಜನರಿಗೆ, ಆಮೇಲೆ ಸರ್ಕಾರ. ಜನರಿಗೆ ನಾವು ಜನಪ್ರತಿನಿಧಿಯಾಗಿ ನಮ್ಮ ಮೊದಲ ಆದ್ಯತೆ ಇರಬೇಕು. ಅ ಪ್ರಜ್ಞೆ ನನಗೆ ಇದೆ. ಸರ್ಕಾರಕ್ಕೆ ಹೆಸರು ಬರಬೇಕಾದರೆ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದೇನೆ ಎಂದು ತಾವು ಮಾಡಿದ ಟ್ವೀಟ್ ಸಮರ್ಥಿಸಿಕೊಂಡರು. ಇದನ್ನೂ ಓದಿ: ರಾಜ್ಯದ ಸರ್ಕಾರಿ ನೌಕರರು ಇನ್ಮುಂದೆ ಕೆಂಪು-ಹಳದಿ ಬಣ್ಣದ ಐಡಿ ಕಾರ್ಡ್ ಟ್ಯಾಗ್ ಧರಿಸಬೇಕು!

TAGGED:bbmpbengalurucongresskrishna byre gowdaroadtweetಕಾಂಗ್ರೆಸ್ಕೃಷ್ಣಬೈರೇಗೌಡಟ್ವೀಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

all party meeting
Latest

ಪಾಕ್‌ನಂತೆ ದಲ್ಲಾಳಿ ಕೆಲಸ ಮಾಡುವ ದೇಶ ನಮ್ಮದಲ್ಲ – ವಿಪಕ್ಷಗಳಿಗೆ ಜೈಶಂಕ‌ರ್ ತಿರುಗೇಟು

Public TV
By Public TV
7 hours ago
Money Zeize
Davanagere

ಉಪ ಚುನಾವಣೆ ಹೊತ್ತಿನಲ್ಲೇ ದಾಖಲೆಗಳಿಲ್ಲದೇ ಸಾಗಿಸ್ತಿದ್ದ 6.17 ಲಕ್ಷ ರೂ. ಜಪ್ತಿ

Public TV
By Public TV
8 hours ago
Ashwini Vaishnaw HD Kumaraswamy
Districts

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಕೇಂದ್ರ ಅಸ್ತು

Public TV
By Public TV
8 hours ago
Car Drifting Case
Bengaluru City

ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಕೇಸಲ್ಲಿ ಟ್ವಿಸ್ಟ್ – ಚಾಲಕನ ಹೇಳಿಕೆಯಲ್ಲಿ ಸಂದೇಹ

Public TV
By Public TV
9 hours ago
NAMMA METRO 2
Bengaluru City

ಬೆಂಗಳೂರಲ್ಲಿ IPL 2026 ಉದ್ಘಾಟನೆ – ಮಾ.28 ರಂದು ಮಧ್ಯರಾತ್ರಿವರೆಗೂ ಮೆಟ್ರೋ ಸೇವೆ ವಿಸ್ತರಣೆ

Public TV
By Public TV
10 hours ago
LPG 1
Bagalkot

ರಾಜ್ಯದಲ್ಲಿ ಪೆಟ್ರೋಲ್, ಎಲ್‌ಪಿಜಿ ಸಿಲಿಂಡರ್‌ಗೆ ತೀವ್ರ ಅಭಾವನಾ? – ಕಲಬುರಗಿಯಲ್ಲಿ ರಾತ್ರಿಯಿಡೀ ಕ್ಯೂ ಕೂತ ಜನ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?