Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ಲಾಂ ಇರೋವರೆಗೂ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಇಸ್ಲಾಂ ಇರೋವರೆಗೂ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

Districts

ಇಸ್ಲಾಂ ಇರೋವರೆಗೂ ಜಗತ್ತಿಗೆ ನೆಮ್ಮದಿಯಿಲ್ಲ: ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

Public TV
Last updated: February 16, 2024 10:17 am
Public TV
Share
2 Min Read
ananthkumar hegde
SHARE

– ಮೂಲ ಸೌಕರ್ಯವೇ ಅಭಿವೃದ್ಧಿ ಅಂದುಕೊಂಡ್ರೆ ನಮ್ಮಂತಹ ಮೂರ್ಖರು ಮತ್ತೊಬ್ಬರಿಲ್ಲ
– ಮತ್ತೆ ನಾಲಿಗೆ ಹರಿಬಿಟ್ಟ ಸಂಸದ

ಕಾರವಾರ: ಎಲ್ಲಿಯವರೆಗೆ ಇಸ್ಲಾಂ ಇರುತ್ತದೆಯೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿಯಿಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ (Ananth Kumar Hegde) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬನವಾಸಿಯಲ್ಲಿ ನಡೆದ ಬಿಜೆಪಿ (BJP) ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಕಾಲಘಟ್ಟದಲ್ಲಿ ಹಿಂದೂ ಧರ್ಮ, ದೇಶ ಉಳಿಯಲು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಆಗಬೇಕಾಗಿದೆ. ಬಿಜೆಪಿ ಮತ್ತು ಸಂಘ ಪರಿವಾರ ಇದ್ದಲ್ಲಿ ಜಗತ್ತಿಗೆ ನೆಮ್ಮದಿ ಸಿಗಲಿದೆ. ನಾವು ಇಲ್ಲದಿದ್ದರೆ ಜಗತ್ತಿನಲ್ಲಿ ನೆಮ್ಮದಿ ಇಲ್ಲ. ಹಿಂದುತ್ವವು ನಮ್ಮ ದೇಶದ ಉಸಿರಾಗಿದೆ. ಕಾಂಗ್ರೆಸ್‍ನವರು (Congress) ಲೋಕಸಭಾ ಚುನಾವಣೆಗೂ (Lok Sabha Election 2024) ಮುನ್ನ ಬಿಜೆಪಿಯ ಉತ್ಸಾಹ ನೋಡಿ ಶಸ್ತ್ರ ತ್ಯಜಿಸಿದ್ದಾರೆ. ವೈಚಾರಿಕವಾಗಿ ನಾವು ಚುನಾವಣೆ ಗೆದ್ದು ತೋರಿಸಬೇಕಿದೆ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಕೆಲವೇ ಕ್ಷಣಗಳಲ್ಲಿ ಬಜೆಟ್‌ ಮಂಡನೆ – ಕೈ ಶಾಸಕರು ಕಾಂಗ್ರೆಸ್‌ ಪಕ್ಷದ ಶಾಲು ಧರಿಸಲು ಸೂಚನೆ!

AnanthKumar HEGDE

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ನಮ್ಮವರಿಗೆ ಏಕವಚನದಲ್ಲಿ ಮಾತನಾಡಿದ್ದು ನೋಡಿ ಸುಮ್ಮನಿರಲು ಸಾಧ್ಯವಿಲ್ಲ. ಅವರಿಗೆ ಮಗನೇ ಎನ್ನದೇ ಬೇರೆನು ಹೇಳಲು ಸಾಧ್ಯ? ಅಪ್ಪ ಅಂತಲೋ, ಅಜ್ಜ ಅಂತಲೋ, ಮಾಮಾ ಅಂತಲೋ ಕರೆಯಲು ಸಾಧ್ಯವೇ? ಯುದ್ಧ ಕಾಲದಲ್ಲಿ ಯಾವ ಭಾಷೆಯಲ್ಲಿ ಮಾತನಾಡಬೇಕೋ ಅದನ್ನೇ ಬಳಸಬೇಕು. ಅಲ್ಲಿ ಶಾಸ್ತ್ರೀಯ ಸಂಗೀತ ಬಳಸಲು ಸಾಧ್ಯವಿಲ್ಲ. ಮಸೀದಿಯ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಕ್ಕೆ ಸಿಎಂಗೆ ಥ್ಯಾಂಕ್ಸ್ ಹೇಳಿದ್ದೇನೆ. ತುಂಬಾ ವರ್ಷ ಆಗಿತ್ತು, ಕೇಸ್ ಇರದೆ ಒಂದು ರೀತಿಯ ಮುಜುಗುರ ಉಂಟಾಗಿತ್ತು. ಏನೋ ಕಳೆದುಕೊಂಡಂತೆ ಅನಿಸುತ್ತಿತ್ತು. ಈಗ ಪುನಃ ಮತ್ತೆ ಬಂದ ಅನುಭವ ಆಗುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನನ್ನ ಅಧಿಕಾರವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಪ್ರಚಾರಕ್ಕಾಗಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ. ಸಾಮಾಜಿಕ, ಸಾಂಸ್ಕೃತಿಕವಾಗಿ ಎಲ್ಲಾ ದೃಷ್ಠಿಯಿಂದ ಅಭಿವೃದ್ಧಿ ಹೊಂದಿದಾಗ ಮಾತ್ರ ಸಂಪೂರ್ಣ ಅಭಿವೃದ್ಧಿ ಹೊಂದಿದಂತೆ. ಕೇವಲ ಮೂಲ ಸೌಕರ್ಯವೇ ಅಭಿವೃದ್ಧಿ ಅಂದುಕೊಂಡರೆ ನಮ್ಮಂತಹ ಮೂರ್ಖರು ಮತ್ತೊಬ್ಬರಿಲ್ಲ ಎಂದು ಲೇವಡಿ ಮಾಡಿದ್ದಾರೆ.

ರಾಜಕೀಯ ಅಂದ್ಮೇಲೆ ವಲಸೆ ಪ್ರಕ್ರಿಯೆ ಸಹಜವಾಗಿರುವ ಸಂಗತಿ. ಇತ್ತೀಚಿನ ದಿನಗಳಲ್ಲಿ ಯಾವ ರೀತಿಯಲ್ಲಿ ರಾಜಕೀಯ ದೊಂಬರಾಟ ನಡೆಯುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಅದೆಲ್ಲವನ್ನೂ ಬದಿಗಿಟ್ಟು ಸಂಘಟನೆಯ ಕಡೆಗೆ ಗಮನಹರಿಸೋಣ. ಮುಂಬರುವ ಲೋಕಸಭಾ ಮಹಾ ಸಂಘರ್ಷದಲ್ಲಿ ನಾವೆಲ್ಲರೂ ಒಟ್ಟಾಗಿ ದುಡಿಯೋಣ ಎಂದು ಕಾರ್ಯಕರ್ತರಿಗೆ ಕರೆಕೊಟ್ಟಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಸಂಸತ್ತಿನಲ್ಲಿ ಒಂದೇ ಒಂದು ಪ್ರಶ್ನೆ ಕೇಳಿಲ್ಲ ಎಂಬ ವಿಚಾರವಾಗಿ, ಪತ್ರಿಕಾ ಪ್ರಕಟಣೆ ಹೊರಡಿಸಿ ಸ್ಪಷ್ಟನೆ ನೀಡಿದ್ದಾರೆ. 17ನೇ ಲೋಕಸಭಾ ಅಧಿವೇಶನದಲ್ಲಿ ಒಟ್ಟು 18 ಪ್ರಶ್ನೆಗಳನ್ನು ಕೇಳಿದ್ದಾಗಿ ಅದರಲ್ಲಿ ಉಲ್ಲೇಖಿಸಲಾಗಿದೆ. ಅದರಲ್ಲಿ ಮುಖ್ಯವಾಗಿ ಉದ್ಯೋಗಾವಕಾಶಗಳು, ವಿದ್ಯಾರ್ಥಿಗಳ ಪಠ್ಯಕ್ರಮ, ವಾಯು ಮಾಲಿನ್ಯ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ನ್ಯುಮೋನಿಯಾ, ಕ್ಯಾನ್ಸರ್ ಹಾಗೂ ಉಡಾನ ಯೋಜನೆಯ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದೇನೆ. ಲೋಕಸಭಾ ವೆಬ್‍ಸೈಟ್‍ನಲ್ಲಿ ಈ ಕುರಿತು ವಿಸ್ತ್ರತ ಮಾಹಿತಿ ಲಭ್ಯವಿದೆ. ಕೇಳಿದ ಪ್ರಶ್ನೆಗಳು ಹಾಗೂ ಅದಕ್ಕೆ ಸಚಿವರು ನೀಡಿದ ಉತ್ತರವನ್ನು ದಾಖಲೆ ಸಹಿತ ಸಾರ್ವಜನಿಕರು ವೀಕ್ಷಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ ಮ್ಯಾರೇಜ್ ಸರ್ಟಿಫಿಕೇಟ್ – ಪಡೆಯೋದು ಹೇಗೆ?

TAGGED:ananth kumar hegdebjpcongressLok Sabha Election 2024politicsಅನಂತಕುಮಾರ್ ಹೆಗಡೆಕಾಂಗ್ರೆಸ್ಕಾರವಾರಬಿಜೆಪಿರಾಜಕೀಯಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi
Bigg Boss
6 ಮಂದಿಯಲ್ಲಿ ಕಪ್ ಗೆಲ್ಲೋರು ಯಾರು? ಯಾರ ಪರ ಅಭಿಮಾನಿಗಳ ಬಹುಪರಾಕ್?
Cinema Latest Main Post TV Shows

You Might Also Like

Bheemanna Khandre DK Shivakumar
Bengaluru City

ದೆಹಲಿಯಿಂದ ಆಗಮಿಸಿ ಭೀಮಣ್ಣ ಖಂಡ್ರೆ ಅಂತಿಮ ಸಂಸ್ಕಾರದಲ್ಲಿ ಭಾಗಿಯಾದ ಡಿಕೆಶಿ

Public TV
By Public TV
18 minutes ago
Zameer Ahmed Khan 1
Dharwad

ಜ.24 ರಂದು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ 42,345 ಮನೆಗಳ ಹಂಚಿಕೆ: ಸಚಿವ ಜಮೀರ್

Public TV
By Public TV
52 minutes ago
Excise DC Lokayukta Raid
Bengaluru City

ಬಾರ್ ಲೈಸೆನ್ಸ್ ನೀಡಲು 2.25 ಕೋಟಿಗೆ ಬೇಡಿಕೆ – ಲೋಕಾಯುಕ್ತ ಬಲೆಗೆ ಬಿದ್ದ ಅಬಕಾರಿ ಡಿಸಿ

Public TV
By Public TV
53 minutes ago
Siddaramaiah 7
Latest

ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಹೊಸ ಕಾನೂನು, ಸೈಬರ್‌ ಕ್ರೈಂ ನಿಯಂತ್ರಣಕ್ಕೆ ಕಠಿಣ ಕ್ರಮ: ಸಿಎಂ ಭರವಸೆ

Public TV
By Public TV
1 hour ago
Madikeri 2 1
Crime

ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ ಇಬ್ಬರು ಬಾಲಕರು ಜಲ ಸಮಾಧಿ!

Public TV
By Public TV
2 hours ago
Shubam gill
Cricket

Indore Crisis | 3 ಲಕ್ಷ ರೂ. ಮೌಲ್ಯದ ನೀರು ಶುದ್ಧೀಕರಣ ಯಂತ್ರ ತಂದ ಕ್ಯಾಪ್ಟನ್‌ ಗಿಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?