ಹೈದರಾಬಾದ್: ಬಿಜೆಪಿಗೆ (BJP) ತಾಕತ್ತಿದ್ದರೆ ಚೀನಾದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸುವಂತೆ ಎಐಎಂಐಎಂ (AIMIM) ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಸವಾಲು ಹಾಕಿದ್ದಾರೆ. ಬಿಜೆಪಿ ಮುಖಂಡ ಬಂಡಿ ಸಂಜಯ್ ಕುಮಾರ್ ಅವರ ಸರ್ಜಿಕಲ್ ಸ್ಟ್ರೈಕ್ (Surgical Strike) ಹೇಳಿಕೆಗೆ ಓವೈಸಿ ಟಾಂಗ್ ಕೊಟ್ಟಿದ್ದಾರೆ.
ಸಂಗಾರೆಡ್ಡಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡನ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ತಮ್ಮದೇ ದೇಶದ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ಮಾಡುವುದಾಗಿ ಅವರು ಹೇಳುತ್ತಾರೆ. ಧೈರ್ಯವಿದ್ದರೆ ಚೀನಾದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲಿ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಮೊಬೈಲ್ ನೀರಿಗೆ ಬಿದ್ದಿದ್ದಕ್ಕೆ ಡ್ಯಾಂ ಖಾಲಿ ಮಾಡಿಸಿದ್ದ ಅಧಿಕಾರಿಗೆ ಬಿತ್ತು 53 ಸಾವಿರ ದಂಡ!
2020ರ ಹೈದರಾಬಾದ್ (Hyderabad) ಮುನ್ಸಿಪಲ್ ಚುನಾವಣೆಯ (Municipal Election) ವೇಳೆ ಬಂಡಿ ಸಂಜಯ್ ಕುಮಾರ್ ಅವರು, ಚುನಾವಣೆಯಲ್ಲಿ ಪಾಕಿಸ್ತಾನ (Pakistan), ಅಫ್ಘಾನಿಸ್ತಾನ ಅಥವಾ ರೋಹಿಂಗ್ಯಾ (Rohingya) ಸಮುದಾಯದ ಮತದಾರರನ್ನು ಒಳಗೊಂಡಿರಬಾರದು. ಒಮ್ಮೆ ನಾವು ಗೆದ್ದರೆ ನಗರದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸುತ್ತೇವೆ ಎಂದಿದ್ದರು. ಇದಕ್ಕೆ ಓವೈಸಿ ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧವೂ ವಾಗ್ದಾಳಿ ನಡೆಸಿದ ಓವೈಸಿ, ರಾಜ್ಯದ ದೇವಸ್ಥಾನಗಳಿಗೆ ಕೋಟ್ಯಂತರ ರೂ. ಮಂಜೂರಾಗಿದೆ. ಅದರ ಸ್ಟೇರಿಂಗ್ ನನ್ನ ಕೈಯಲ್ಲಿದೆ ಎಂದು ಅಮಿತ್ ಶಾ ಹೇಳುತ್ತಾರೆ. ಮತ್ಯಾಕೆ ಈ ಬಗ್ಗೆ ಅವರು ಚಿಂತಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ನಿರ್ಗತಿಕರನ್ನು ಕೆಲಸಕ್ಕೆಂದು ಕರೆದುಕೊಂಡು ಬಂದು ಕೂಡಿಹಾಕಿದ್ದ ದುರುಳ ಅರೆಸ್ಟ್ – 18 ಕಾರ್ಮಿಕರ ರಕ್ಷಣೆ