ಹೈದರಾಬಾದ್: ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುವ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಈ ಬಾರೀ ಕಣ್ಣೀರು ಹಾಕುವ ಮೂಲಕ ಸುದ್ದಿಯಾಗಿದ್ದಾರೆ.
ಹೌದು. ತಮ್ಮ ಭಾಷಣದ ವೇಳೆ ಓವೈಸಿ ಭಾವುಕರಾಗಿ ಕಣ್ಣೀರಾಕಿದ್ದಾರೆ. ಓವೈಸಿ ಕಣ್ಣೀರಾಕುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಕಣ್ಣೀರು ಯಾಕೆ..?
ಹೈದರಾಬಾದ್ನಲ್ಲಿ ಇಂದು ನಮಾಜ್ ಮುಗಿಸಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದಾಗ ಓವೈಸಿ ಭಾವುಕರಾಗಿದ್ದಾರೆ. ಮಾತನಾಡುತ್ತಿದ್ದ ಸಂದರ್ಭದಲ್ಲಿ ಓವೈಸಿ ಎರಡು ಘಟನೆಗಳನ್ನು ನೆನಪಿಸಿಕೊಂಡಿದ್ದಾರೆ. ಮಧ್ಯಪ್ರದೇಶದ ಖಾರ್ಗೋನ್ ಹಿಂಸಾಚಾರ ಹಾಗೂ ದೆಹಲಿಯ ಜಹಂಗೀರ್ ಪುರಿ ಘಟನೆಯನ್ನು ಓವೈಸಿ ಮೆಲುಕು ಹಾಕಿಕೊಂಡಿದ್ದಾರೆ. ಈ ಘಟನೆಗಳನ್ನು ನೆನಪು ಮಾಡುತ್ತಾ ಓವೈಸಿ ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ
ಖಾರ್ಗೋನ್ ಮತ್ತು ಜಹಂಗೀರ್ ಪುರಿಯಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡಲಾಗಿದೆ. ಅವರ ಮನೆಗಳನ್ನು ಕೆಡವಲಾಗಿದೆ ಎಂದು ಓವೈಸಿ ತಮ್ಮ ಭಾಷಣದಲ್ಲಿ ಹೇಳಿದರು. ಆದರೂ ಭರವಸೆ ಮತ್ತು ಧೈರ್ಯವನ್ನು ಕಳೆದುಕೊಳ್ಳಬೇಡಿ ಎಂದು ಅವರು ಇದೇ ವೇಳೆ ಮುಸ್ಲಿಮರಲ್ಲಿ ಮನವಿ ಮಾಡಿಕೊಂಡರು. ಇದನ್ನೂ ಓದಿ: ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ: ಅಸಾದುದ್ದೀನ್ ಓವೈಸಿ
Jumu'atul-Wida ke mauqe per Jalsa Youm-Ul-Quran mein Barrister @asadowaisi Sahab ka khusoosi khitab. https://t.co/57aJlp79xY
— AIMIM (@aimim_national) April 29, 2022