ಜಿನ್ನಾಗೂ ಭಾರತೀಯ ಮುಸ್ಲಿಮರಿಗೂ ಸಂಬಂಧವಿಲ್ಲ : ಓವೈಸಿ

Public TV
1 Min Read
Asaduddin Owaisi

ಲಕ್ನೋ: ಮುಹಮ್ಮದ್ ಅಲಿ ಜಿನ್ನಾ ಭಾರತದ ಸ್ವಾತಂತ್ರ್ಯ ಹೋರಾಟದ ನಾಯಕ ಎಂದು ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರಿಗೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಓವೈಸಿ, ಮುಹಮ್ಮದ್ ಅಲಿ ಜಿನ್ನಾಗೂ ಭಾರತೀಯ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ಅಖಿಲೇಶ್ ಯಾವದ್ ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ನಮ್ಮ ಹಿರಿಯರು ಎರಡು ರಾಷ್ಟ್ರಗಳ ಸಿದ್ಧಾಂತವನ್ನು ತಿರಸ್ಕರಿಸಿ ಭಾರತವನ್ನು ತಮ್ಮ ದೇಶವನ್ನಾಗಿ ಆರಿಸಿಕೊಂಡಿದ್ದರು ಎಂದಿದ್ದಾರೆ.

ಅಖಿಲೇಶ್ ತಕ್ಷಣ ದೇಶದ ಜನರಲ್ಲಿ ಕ್ಷಮೆಯಾಚನೆ ಮಾಡಬೇಕು. ಉಕ್ಕಿನ ಮನುಷ್ಯ ಸರ್ದಾರ ಪಟೇಲ್ ಅವರಿಗೆ ಜಿನ್ನಾ ಹೋಲಿಕೆ ಯಾವ ಅರ್ಥದಲ್ಲಿ ಸರಿ ಎಂದು ಉತ್ತರ ಪ್ರದೇಶ ಮುಖ್ಯಂತ್ರಿ ಯೋಗಿ ಆದಿತ್ಯನಾಥ್ ಅವರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’

Akhilesh Yadav

ಅಖಿಲೇಶ್ ಯಾದವ್ ಅವರು ಸಮಾಜವಾದಿ ಪಕ್ಷದ ಸಮಾವೇಶದಲ್ಲಿ ಸರ್ದಾರ್ ಪಟೇಲ್, ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು, ಜಿನ್ನಾ ಸೇರಿದಂತೆ ಬಹುತೇಕರು ಒಂದೇ ಸಂಸ್ಥೆಯಿಂದ ಹೊರಬಂದವರು. ಅವರೆಲ್ಲಾ ಒಂದೇ ಶಿಕ್ಷಣ ಸಂಸ್ಥೆಯಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಸ್ವಾತಂತ್ರ್ಯ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಚಿನ್ನಾ ಭಾರತದ ಸ್ವಾತಂತ್ರ್ಯ ಚಳವಳಿಯ ನಾಯಕ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

Share This Article
Leave a Comment

Leave a Reply

Your email address will not be published. Required fields are marked *