ನವದೆಹಲಿ: ಪಾಕಿಸ್ತಾನದಿಂದ (Pakistan) ಬಂದ ಭಯೋತ್ಪಾದಕರು ನಮ್ಮ ದೇಶದ ಸೈನಿಕರನ್ನು ಹತ್ಯೆ ಮಾಡಿದ್ದಾರೆ ಎಂದು ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಕಿಡಿಕಾರಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ (Jammu Kashmir) ಆರ್ಟಿಕಲ್ 370 ರದ್ದು ಮಾಡಿ ಇಲ್ಲಿಗೆ ನಾಲ್ಕು ವರ್ಷಗಳಾಗಿವೆ. ಈ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಓವೈಸಿ, ಪಾಕಿಸ್ತಾನದಿಂದ (Pakistan) ಬಂದ ಭಯೋತ್ಪಾದಕರು (Terrorists) ಕಾಶ್ಮೀರದಲ್ಲಿ ನಮ್ಮ ದೇಶದ ಸೈನಿಕರನ್ನು ಹತ್ಯೆ ಮಾಡಿದ್ದಾರೆ. ಅಂತಹ ದೇಶದ ಜೊತೆ ನೀವು ವಿಶ್ವಕಪ್ ಪಂದ್ಯ ಆಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ
ಜ್ಞಾನವಾಪಿ ಮಸೀದಿಯಲ್ಲಿ ಎಎಸ್ಐ ಸಮೀಕ್ಷೆ ಕುರಿತು ಮಾತನಾಡಿ, ಎಎಸ್ಐ ವರದಿ ಬಂದಾಗ ಬಿಜೆಪಿ-ಆರ್ಎಸ್ಎಸ್ ಏನು ಮಾತನಾಡುತ್ತೋ ಎಂಬ ಆತಂಕ ನಮಗಿದೆ. ಅದು ಆಗುವುದಿಲ್ಲ ಎಂದು ನಾನು ಭಾವಿಸುತ್ತೇನೆ. ಆದರೆ ಡಿಸೆಂಬರ್ 23 ಅಥವಾ ಡಿಸೆಂಬರ್ 6 (ಬಾಬರಿ ಮಸೀದಿ ಧ್ವಂಸ) ರಂತಹ ಘಟನೆಯ ಬಗ್ಗೆ ನನಗೆ ಆತಂಕವಿದೆ. ಬಾಬರಿ ಮಸೀದಿಯಂತಹ ಸಮಸ್ಯೆಗಳು ಉದ್ಭವಿಸುವುದನ್ನು ನಾವು ಬಯಸುವುದಿಲ್ಲ ಎಂದು ಹೇಳಿದ್ದಾರೆ.
ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಎಎಸ್ಐ ಸಮೀಕ್ಷೆ ನಡೆಸಲು ಅನುಮತಿ ನೀಡಿ ಅಲಹಾಬಾದ್ ಹೈಕೋರ್ಟ್ ಆದೇಶ ಹೊರಡಿಸಿದೆ. ಅದರಂತೆ ಎಎಸ್ಐ ಅಧಿಕಾರಿಗಳು ನಿನ್ನೆಯಿಂದ ಸರ್ವೆ ಕಾರ್ಯವನ್ನು ಆರಂಭಿಸಿದ್ದಾರೆ. ಇಂದು ಕೂಡ ಬಿಗಿ ಭದ್ರತೆಯೊಂದಿಗೆ ಸಮೀಕ್ಷೆ ನಡೆಸಲಾಯಿತು. ಇದನ್ನೂ ಓದಿ: ಹಿಜಬ್ ಹಾಕದೇ ಶಾಲೆಗೆ ಬಂದ ಬಾಲಕಿಯರನ್ನು ತಡೆದ 10 ನೇ ತರಗತಿ ಮುಸ್ಲಿಂ ವಿದ್ಯಾರ್ಥಿ – ಗುಂಪಿನಿಂದ ಹಲ್ಲೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]