ಬೀದರ್: ನಾವು ಹೆಚ್ಚು ಮಕ್ಕಳನ್ನು ಹುಟ್ಟಿಸುತ್ತೇವೆ ಎಂದು ಆರ್ಎಸ್ಎಸ್ನವರು (RSS) ಹೇಳುತ್ತಾರೆ ಆದ್ರೆ ನಾವು ಹೆಚ್ಚು ಮಕ್ಕಳನ್ನು ಹುಟ್ಟಿಸಲ್ಲ ಎಂದು ಎಐಎಂಐಎಂ (AIMIM) ಪಕ್ಷದ ಸಂಸ್ಥಾಪಕ ಅಸಾದುದ್ದೀನ್ ಓವೈಸಿ (Asaduddin Owaisi) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೀದರ್ನ (Bidar) ಹುಮ್ನಾಬಾದ್ ಪಟ್ಟಣದಲ್ಲಿ ನಡೆದ ಜಲಸಾ ರಹಮತುಲ್ ಅಲ್ ಅಮೀನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳು ಹೇಳುತ್ತಾರೆ. ಮುಸ್ಲಿಂ ಸಮುದಾಯದ ಮೀಸಲಾತಿ ತೆಗೆದು ಹಾಕುತ್ತೇವೆ ಎಂದು, ಅದು ಬಿಡಿ ಮೊದಲು ನಿಮ್ಮ ಪಕ್ಷದಲ್ಲಿರುವ 40% ಕಮಿಷನ್ ತೆಗೆದು ಕೊಳ್ಳುವುದು ನಿಲ್ಲಿಸಿ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ನಿಧನ
ಕುತ್ತಿಗೆಗೆ ಬರುವ ತನಕ ತಿನ್ನುವುದು ಬಿಡಿ. ಇನ್ನೂ ತಾ, ಇನ್ನೂ ತಾ ಎಂದು ಹೇಳತ್ತಾರೆ. ಮೊತ್ತೊಂದು ಕಡೆ ನಾ ತಿನ್ನುವುದಿಲ್ಲ. ಇನ್ನೊಬ್ಬರಿಗೂ ತಿನ್ನಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ಮೋದಿ ದೀಪಾವಳಿ- ರಾಮ ಮಂದಿರ ಕಾಮಗಾರಿ ಪರಿಶೀಲನೆ
Live Tv
[brid partner=56869869 player=32851 video=960834 autoplay=true]