ಜೈಪುರ: ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬಳಿ ಶಾಶ್ವತವಾಗಿ ಇರಿಸಲಾಗಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜೀನಾಮೆ ಶಾಶ್ವತವಾಗಿ ಸೋನಿಯಾ ಗಾಂಧಿಯವರ ಬಳಿ ಇದೆ. ಹೈಕಮಾಂಡ್ ಮುಖ್ಯಮಂತ್ರಿಯನ್ನು ಬದಲಾಯಿಸಲು ನಿರ್ಧರಿಸಿದಾಗ ಯಾರಿಗೂ ಸುಳಿವು ಸಿಗುವುದಿಲ್ಲ. ಜೊತೆಗೆ ಈ ಬಗ್ಗೆ ಯಾವುದೇ ಚರ್ಚೆ ನಡೆಸುವುದಿಲ್ಲ ಎಂದರು.
ಕಾಂಗ್ರೆಸ್ ಹೈಕಮಾಂಡ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಸ್ವತಂತ್ರವಾಗಿದೆ. ಮುಂದಿನ ವರ್ಷ ನಡೆಯಲಿರುವ ಚುನಾವಣೆಗೂ ಮುನ್ನ ಕಾಂಗ್ರೆಸ್ ಹಿನ್ನಡೆಯಾಗುವ ಸಾಧ್ಯತೆಯಿದೆ ಎಂಬ ವದಂತಿಗಳಿಗೆ ಗಮನ ಕೊಡಬೇಡಿ. ಇದರಿಂದ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ ಎಂದು ಮನವಿ ಮಾಡಿದರು.
ಕಳೆದ 2-3 ದಿನಗಳಿಂದ ರಾಜಸ್ಥಾನದ ಮುಖ್ಯಮಂತ್ರಿಯನ್ನು ಬದಲಾಯಿಸುವ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಈ ರೀತಿ ಊಹಾಪೋಹಗಳು ಹರಿದಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಗಲಭೆಯನ್ನು ನಿಯಂತ್ರಿಸುವಲ್ಲಿ ಅಮಿತ್ ಶಾ ಸಂಪೂರ್ಣ ವಿಫಲ: ಶರದ್ ಪವಾರ್
ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು. ಈ ಭೇಟಿಯ ನಂತರ ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕತ್ವದ ಬದಲಾವಣೆ ಆಗಲಿದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇದನ್ನೂ ಓದಿ: ಮುಸ್ಲಿಮರನ್ನು ಕಂಡಾಕ್ಷಣ ಪಾಕಿಸ್ತಾನದವರು, ಉಗ್ರಗಾಮಿಗಳು ಎನ್ನುವುದು ಸರಿಯಲ್ಲ: ಮಾಜಿ ಸಚಿವ ಈಶ್ವರಪ್ಪ