Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿರೋದು ತಾಲಿಬಾನ್ ಸರ್ಕಾರ- ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಿದ್ದಕ್ಕೆ ಅಶೋಕ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯದಲ್ಲಿರೋದು ತಾಲಿಬಾನ್ ಸರ್ಕಾರ- ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಿದ್ದಕ್ಕೆ ಅಶೋಕ್ ಕಿಡಿ

Latest

ರಾಜ್ಯದಲ್ಲಿರೋದು ತಾಲಿಬಾನ್ ಸರ್ಕಾರ- ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಿದ್ದಕ್ಕೆ ಅಶೋಕ್ ಕಿಡಿ

Public TV
Last updated: September 13, 2024 4:17 pm
Public TV
Share
3 Min Read
R Ashoka 1
SHARE

ಬೆಂಗಳೂರು: ನಾಗಮಂಗಲ ಗಲಭೆ ಪ್ರಕರಣದಲ್ಲಿ ಹಿಂದೂ ಯುವಕರ ಮೇಲೆ ಕೇಸ್ ದಾಖಲಿಸಿದ್ದಕ್ಕೆ, ರಾಜ್ಯದಲ್ಲಿರೋದು ತಾಲಿಬಾನ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಅಶೋಕ್ (R. Ashok) ಕಿಡಿಕಾರಿದ್ದಾರೆ.

ಎಕ್ಸ್‌ನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅಶೋಕ್, ಕಾಂಗ್ರೆಸ್ (Congress) ಸರ್ಕಾರವು ತಾಲಿಬಾನ್ ಸರ್ಕಾರ ಆಗಿದೆ. ಅಷ್ಟೇ ಅಲ್ಲ ಘಟನೆ ಸಂಬಂಧ ಸರ್ಕಾರಕ್ಕೆ ಸರಣಿ ಪ್ರಶ್ನೆಗಳನ್ನು ಕೇಳಿ ಉತ್ತರಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: ಸಿಎಂ, ತುಕಾರಾಂ ರಾಜೀನಾಮೆಗೆ ಒತ್ತಾಯಿಸಿ ಎಸ್ಟಿ ಮೋರ್ಚಾ ರಾಜ್ಯಾದ್ಯಂತ ಹೋರಾಟ- ಬಂಗಾರು ಹನುಮಂತು

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿ ಮಾತನಾಡಿದ್ದಾರೆ. ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ. ಹಿಂದೂಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ ಕಾದು, ಕಲ್ಲುಗಳ ರಾಶಿ, ಪೆಟ್ರೋಲ್ ಬಾಂಬು, ತಲ್ವಾರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಸಂಪೂರ್ಣ ಪೂರ್ವನಿಯೋಜಿತವಾಗಿ ಈ ದುಷ್ಕೃತ್ಯ ನಡೆಸಲಾಗಿದೆ. ಸ್ಪಷ್ಟವಾಗಿ ಕಾಣುತ್ತಿದ್ದರೂ, ಇದೊಂದು ಆಕಸ್ಮಿಕ ಘಟನೆ, ಸಣ್ಣ ಘಟನೆ ಎಂದು ತಿಪ್ಪೆ ಸಾರಿಸುವಂತೆ ಮಾತನಾಡುತ್ತಿದ್ದಾರೆ. ಈ ರೀತಿ ಮಾತನಾಡಿ ಕಾಂಗ್ರೆಸ್ ಸರ್ಕಾರ, ಮುಸ್ಲಿಂ ಮತಾಂಧರನ್ನು ಓಲೈಕೆ ಮಾಡಲು, ಹಿಂದೂಗಳನ್ನು ಬಲಿಕೊಡಲೂ ಸಿದ್ಧ ಎಂದು ನಿರ್ಧಾರ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವರ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದ ಹೇಳಿಕೆಗಳನ್ನು ಗಮನಿಸಿದರೆ ರಾಜ್ಯದಲ್ಲಿರುವುದು ಮೂಲಭೂತವಾದಿಗಳಿಗೆ ಬೆಂಬಲ ಕೊಡುವ ತಾಲಿಬಾನ್ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿತ್ತದೆ.

ಹಿಂದುಗಳನ್ನೇ ಗುರಿಯಾಗಿಸಿಕೊಂಡು, ಗಣೇಶ ವಿಸರ್ಜನೆಯ ಮೆರವಣಿಗೆಗೆ…

— R. Ashoka (@RAshokaBJP) September 13, 2024

ನಾಗಮಂಗಲದ ಘಟನೆಯಿಂದ ಹೀಗಾದರೆ ನಮ್ಮ ಗತಿ ಏನು ಎಂದು ಇಡೀ ಹಿಂದೂ ಸಮಾಜ ಆತಂಕಗೊಂಡಿದೆ. ರಾಜ್ಯದ ಹಿಂದೂಗಳ ಮನಸ್ಸಿನಲ್ಲಿ ಕಾಡುತ್ತಿರುವ ಈ ಪ್ರಶ್ನೆಗಳಿಗೆ ಕಾಂಗ್ರೆಸ್ ಸರ್ಕಾರ ಉತ್ತರ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಶೋಕ್ ಪ್ರಶ್ನೆಗಳು!?

1.ಕಳೆದ ವರ್ಷ ಅದೇ ಸ್ಥಳದಲ್ಲೇ ಗಲಭೆ ಆಗಿದ್ದರೂ ಈ ವರ್ಷ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಿಲ್ಲವೇಕೆ?

2.ಇಂತಹ ಕೃತ್ಯದ ಇತಿಹಾಸವಿದ್ದರೂ ಗುಪ್ತಚರ ವಿಭಾಗದವರು ಇದರ ಬಗ್ಗೆ ಮಾಹಿತಿ ಕೊಡಲಿಲ್ಲವೇಕೆ? ಇದು ಪೊಲೀಸ್ ಇಲಾಖೆಯ ವೈಫಲ್ಯ ಅಲ್ಲವೇ? ಅಥವಾ ಗುಪ್ತಚರ ಮಾಹಿತಿ ಇದ್ದೂ ಸಹ ನಿರ್ಲಕ್ಷ್ಯ ಮಾಡಲಾಯಿತೇ?

3.ಗಣಪತಿ ಮೆರವಣಿಗೆಗೆ ರೂಟ್ ಮ್ಯಾಪ್ ಹಾಕಿಕೊಟ್ಟು ಅನುಮತಿ ನೀಡಿದ್ದರೂ, ಪೊಲೀಸರು ಮಾರ್ಗದುದ್ದಕ್ಕೂ ಯಾಕೆ ಭದ್ರತೆ ನೀಡಲಿಲ್ಲ?

4.ಪಟ್ಟಣದಲ್ಲಿ ಇದ್ದ ಡಿಎಆರ್ ವ್ಯಾನ್ ಅನ್ನು ಮೆರವಣಿಗೆ ಆರಂಭವಾದ ಬಳಿಕ ಬೇರೆಡೆ ಕಳುಹಿಸಿದ್ದು ಏಕೆ?

5.ಬುಧವಾರ ರಾತ್ರಿ ಗಲಭೆ ಆರಂಭವಾಗಿ ಎರಡು ಗಂಟೆ ಕಳೆದರೂ ಕೇವಲ 40ಕಿಮೀ ದೂರದಲ್ಲಿರುವ ಹೆಚ್ಚಿನ ಸಿಬ್ಬಂದಿಯನ್ನು ಏಕೆ ತುರ್ತಾಗಿ ಕರೆಸಿಕೊಳ್ಳಲಿಲ್ಲ?

6.ಪೊಲೀಸರ ಅನುಮತಿ ಪಡೆದು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದವರನ್ನೇ ಎಫ್‌ಐಆರ್ನಲ್ಲಿ ಎ1 ಮಾಡಿರುವುದೇಕೆ?

7.ಎ1 ನಿಂದ ಎ23 ವರೆಗೆ ಕೇವಲ ಹಿಂದೂಗಳ ಮೇಲೆ ಎಫ್‌ಐಆರ್ ಮಾಡಿ ನಂತರ ಮುಸ್ಲಿಮರ ಹೆಸರು ಸೇರಿಸಿರುವುದು ಯಾವ ಸೀಮೆ ನ್ಯಾಯ? ಗಲಭೆಕೋರರನನ್ನು ರಕ್ಷಿಸಲು ಸರ್ಕಾರ ಮುಂದಾಗಿರುವುದು ತುಷ್ಟೀಕರಣದ ಪರಮಾವಧಿ ಅಲ್ಲವೇ?

8.ಇಷ್ಟಕ್ಕೂ ಮಸೀದಿ ಅಥವಾ ದರ್ಗಾ ಮುಂದೆ ಗಣೇಶೋತ್ಸವ ಮೆರವಣಿಗೆ ಹಾದು ಹೋಗಬಾರದು ಎನ್ನುವುದಕ್ಕೆ ಕರ್ನಾಟಕವೇನು ಇಸ್ಲಾಮಿಕ್ ರಿಪಬ್ಲಿಕ್ಕಾ?

9.ಪೆಟ್ರೋಲ್ ಬಾಂಬ್, ಕಲ್ಲುಗಳ ರಾಶಿ, ತಲ್ವಾರ್ ಹಾಗೂ ಮಾರಾಕಾಸ್ತ್ರಗಳನ್ನು ಮಸೀದಿಯಲ್ಲಿ ಸಂಗ್ರಹಿಸಿ ದಾಂಧಲೆ ಆರಂಭಿಸಿದ್ದನ್ನು ಗಮನಿಸಿದರೆ ಇದು ಪೂರ್ವನಿಯೋಜಿತ ಕೃತ್ಯ ಎನ್ನುವುದು ಸ್ಪಷ್ಟ ಅಲ್ಲವೇ?

10.ಗಲಭೆಯಲ್ಲಿ ಅಪಾಯಕಾರಿ ವಸ್ತುಗಳ ಬಳಕೆಯಾದರೂ, 25 ಕೋಟಿ ರೂ. ಮೊತ್ತದ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿದ್ದರೂ, ಗೃಹ ಸಚಿವರಿಗೆ ಇದೊಂದು ಸಣ್ಣ ಘಟನೆ, ಆಕಸ್ಮಿಕ ಘಟನೆ ಅನ್ನಿಸಲು ಕಾರಣ ಏನು? ಅವರಿಗೆ ಆ ರೀತಿ ಮಾಹಿತಿ ನೀಡಿದವರು ಯಾರು? ಅಥವಾ ಈ ರೀತಿ ಹೇಳಲು ಅವರ ಮೇಲೆ ಯಾರದ್ದಾದರೂ ಒತ್ತಡವಿತ್ತೆ? ಅಥವಾ ಕಾಂಗ್ರೆಸ್ ಸರ್ಕಾರ ಯಾರನ್ನಾದರೂ ರಕ್ಷಿಸಲು ಹೊರಟಿದೆಯೇ?

11.ಇಷ್ಟೆಲ್ಲಾ ಅನಾಹುತ ಆಗಿದ್ದರೂ ಬೆಂಗಳೂರಿನಿಂದ ಕೇವಲ 130 ಕಿಮೀ ದೂರವಿರುವ ನಾಗಮಂಗಲಕ್ಕೆ ಗೃಹ ಸಚಿವರು ಇನ್ನೂ ಭೇಟಿ ನೀಡಿಲ್ಲವೇಕೆ? ಈ ರೀತಿ ತಪ್ಪು ಎಫ್‌ಐಆರ್ ದಾಖಲಿಸಲು ಕಾರಣರಾದ ಪೊಲೀಸರನ್ನು ಈ ಕೂಡಲೇ ಅಮಾನತು ಮಾಡಬೇಕು. ಎಫ್‌ಐಆರ್‌ನಲ್ಲಿ ಕೇವಲ ಹಿಂದೂಗಳನ್ನು ಟಾರ್ಗೆಟ್ ಮಾಡುವ ಈ ಹುನ್ನಾರ ಕೈಬಿಡದಿದ್ದರೆ ಬಿಜೆಪಿ ನಾಗಮಂಗಲದಲ್ಲಿ ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದಿದ್ದಾರೆ.ಇದನ್ನೂ ಓದಿ: ಬರಲಿದೆ ವಿಜಯ್ ಸೇತುಪತಿ, ತ್ರಿಷಾ ನಟನೆಯ ’96’ ಚಿತ್ರದ ಸೀಕ್ವೆಲ್

TAGGED:bengalurubjpcongressKarnataka Governmentr ashokಆರ್ ಆಶೋಕ್ಕರ್ನಾಟಕ ಸರ್ಕಾರಕಾಂಗ್ರೆಸ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
5 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
6 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
7 hours ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
7 hours ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
8 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?