Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಣ್ಣಗಿನ ನಿರೂಪಣೆಯೊಂದಿಗೆ ಹೊಸತನದ ಅಚ್ಚೊತ್ತುವ `ಅಳಿದು ಉಳಿದವರು’!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ತಣ್ಣಗಿನ ನಿರೂಪಣೆಯೊಂದಿಗೆ ಹೊಸತನದ ಅಚ್ಚೊತ್ತುವ `ಅಳಿದು ಉಳಿದವರು’!

Bengaluru City

ತಣ್ಣಗಿನ ನಿರೂಪಣೆಯೊಂದಿಗೆ ಹೊಸತನದ ಅಚ್ಚೊತ್ತುವ `ಅಳಿದು ಉಳಿದವರು’!

Public TV
Last updated: December 6, 2019 8:36 pm
Public TV
Share
3 Min Read
Alidu Ulidavaru Main
SHARE

ಅಶು ಬೆದ್ರ ನಿರ್ಮಾಣ ಮಾಡಿ ನಾಯಕನಾಗಿಯೂ ನಟಿಸಿರುವ ಅಳಿದು ಉಳಿದವರು ಚಿತ್ರ ತನ್ನ ಶೀರ್ಷಿಕೆಯ ಮೂಲಕವೇ ಹೊಸತನದ ಕಂಪು ಹೊಮ್ಮಿಸುತ್ತಾ ಪ್ರೇಕ್ಷಕರನ್ನು ಆವರಿಸಿಕೊಂಡಿತ್ತು. ಪೋಸ್ಟರ್ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆ ಪಡೆದ ಟ್ರೇಲರ್‌ಗಳ  ಹೊರತಾಗಿ ಚಿತ್ರತಂಡ ಯಾವ ಅಬ್ಬರದ ಪ್ರಚಾರದತ್ತಲೂ ಗಮನ ಹರಿಸಿರಲಿಲ್ಲ. ಅಷ್ಟಕ್ಕೂ ಅದು ತಣ್ಣಗೆ ಹೊತ್ತಿಸಿದ್ದ ನಿರೀಕ್ಷೆಗಳ ಕಾವಿನ ಮುಂದೆ ಅದೆಲ್ಲದರ ಅವಶ್ಯಕತೆಯೂ ಬಿದ್ದಿರಲಿಲ್ಲ. ಇದೆಲ್ಲದಕ್ಕೆ ತಕ್ಕುದಾದ ರೀತಿಯಲ್ಲಿಯೇ ನಿರ್ದೇಶಕ ಅರವಿಂದ್ ಶಾಸ್ತ್ರಿ ಈ ಚಿತ್ರವನ್ನು ಕಟ್ಟಿ ಕೊಡುತ್ತದೆ. ಯಾವ ಥರದಲ್ಲಿ ಈ ಸಿನಿಮಾ ಸದ್ದು ಮಾಡಿತ್ತೋ ಅದೇ ತಣ್ಣಗಿನ ಆವೇಗವನ್ನು ಆತ್ಮವಾಗಿಸಿಕೊಂಡಂತಿರುವ ಈ ಚಿತ್ರ ಎಲ್ಲರಿಗೂ ಹಿಡಿಸುವಂತೆ ಮೂಡಿ ಬಂದು ಪ್ರೇಕ್ಷಕರನ್ನು ಮುದಗೊಳಿಸಿದೆ.

Alidu Ulidavaru B

ಇಲ್ಲಿ ನಂಬಿಕೆ ಮತ್ತು ಮೂಢ ನಂಬಿಕೆಗಳನ್ನು ಮುಖಾಮುಖಿಯಾಗಿ ಡಿಕ್ಕಿ ಹೊಡೆಸಿ ಅದರ ಘರ್ಷಣೆಯಿಂದ ರೂಪುಗೊಂಡಂತಿರೋ ಕುತೂಹಲಕರವಾದ ಕಥೆಯನ್ನು ಹೇಳಲಾಗಿದೆ. ಒಂದು ಸಿನಿಮಾವನ್ನು ಮಾಮೂಲಿ ಜಾಡಿಗಿಂತ ಭಿನ್ನವಾಗಿ ರೂಪಿಸಬೇಕೆಂಬ ತುಡಿತ ಇದ್ದರೆ ಅಂಥಾ ಚಿತ್ರಗಳು ಎಲ್ಲ ರೀತಿಯಿಂದಲೂ ಡಿಫರೆಂಟೆಂಬಂತೆ ಮೂಡಿ ಬರುತ್ತವೆ. ಇಲ್ಲಿ ಪ್ರೀತಿ ಸೇರಿದಂತೆ ನಾನಾ ಛಾಯೆಯ ಕಥೆಯಿದೆ. ಆದರೆ ಎಲ್ಲಿಯೂ ಕೂಡಾ ಥ್ರಿಲ್ಲರ್ ಅಂಶಗಳನ್ನು ಬಿಟ್ಟುಕೊಡದಂಥಾ ಕಲೆಗಾರಿಕೆಯನ್ನು ನಿರ್ದೇಶಕ ಅರವಿಂದ ಶಾಸ್ತ್ರಿ ಪ್ರದರ್ಶಿಸಿದ್ದಾರೆ. ಹಾಗಂತ ಇಲ್ಲಿ ಬಿಲ್ಡಪ್ಪುಗಳಿಲ್ಲ. ಅದಿಲ್ಲದೆಯೂ ಒಂದು ದೃಷ್ಯವನ್ನು ಕಳೆಗಟ್ಟಿಸೋದು, ನೋಡುಗರನ್ನು ಕುತೂಹಲದ ಶಿಖರವೇರಿಕೊಳ್ಳುವಂತೆ ಮಾಡುವುದೆಲ್ಲ ಒಂದು ಕಲೆ. ನಿರ್ದೇಶಕರಿಲ್ಲಿ ಅದನ್ನು ಧಾರಾಳವಾಗಿಯೇ ಪ್ರದರ್ಶಿಸಿದ್ದಾರೆ. ಅಳಿದು ಉಳಿದವರ ಅಸಲಿ ಹೆಚ್ಚುಗಾರಿಕೆಯೇ ಅದು!

Alidu Ulidavaru A

ಈ ಚಿತ್ರದ ನಾಯಕನಾಗಿ ಅಶು ಬೆದ್ರ ಶೀಲಂ ಎಂಬ ನಿರೂಪಕನ ಪಾತ್ರದಲ್ಲಿ ನಟಿಸಿದ್ದಾರೆ. ಈತ ಎಲ್ಲರಿಗಿಂತಲೂ ತುಸು ಭಿನ್ನವಾದ ನಿರೂಪಕ. ಶೀಲಂ ನಂಬಿಕೆ ಮತ್ತು ಮೂಢನಂಬಿಕೆಗಳನ್ನೇ ಬೇಸ್ ಆಗಿಸಿಕೊಂಡಿರೋ ಕಾರಣ..? ಎಂಬೊಂದು ಕಾರ್ಯಕ್ರಮವನ್ನು ನಡೆಸುತ್ತಿರುತ್ತಾನೆ. ಪ್ರತೀ ಎಪಿಸೋಡಿನಲ್ಲಿಯೂ ವಿಷಯವೊಂದರ ಪಾತಾಳಗರಡಿಯಂಥಾ ವಿವರಗಳನ್ನು ಕಲೆ ಹಾಕುತ್ತಾ ಪ್ರತೀ ಎಪಿಸೋಡುಗಳಲ್ಲಿಯೂ ಆತ ದೆವ್ವ ಎಂಬುದಿಲ್ಲ ಎಂಬುದನ್ನೇ ಸಾಬೀತುಪಡಿಸುತ್ತಾ ಸಾಗುತ್ತಾನೆ. ಇದೇ ಥರದಲ್ಲಿ ತೊಬತ್ತೊಂಬತ್ತು ಎಪಿಸೋಡುಗಳನ್ನು ಪೈರೈಸಿಕೊಳ್ಳುವ ಆತನ ಮುಂದೆ ನೂರನೇ ಎಪಿಸೋಡನ್ನು ಎಲ್ಲಕ್ಕಿಂತ ವಿಶೇಷವಾಗಿ ರೂಪಿಸಬೇಕೆಂಬ ಸವಾಲು ಮೂಡಿಕೊಳ್ಳುತ್ತದೆ.

Alidu Ulidavaru 1

ಹಾಗೆ ಹುಡುಕಿ ಹೊರಡೋ ಶೀಲಂಗೆ ಪವನ್ ಕುಮಾರ್ ನಿರ್ವಹಿಸಿರುವ ಪಾತ್ರ ಎದುರಾಗುತ್ತೆ. ಆ ಪಾತ್ರ ತನ್ನ ಸೇಲಾಗದೇ ಉಳಿದ ಮನೆಯಲ್ಲಿ ದೆವ್ವವಿಲ್ಲ ಅಂತ ನಿರೂಪಿಸುವಂತೆ ಶೀಲಂಗೆ ಸವಾಲೊಡ್ಡುತ್ತೆ. ಅದನ್ನು ಸ್ವೀಕರಿಸಿ ಆ ಮನೆಗೆ ಶೀಲಂ ಕಾಲಿಡುತ್ತಲೇ ಕಥೆ ಮತ್ತಷ್ಟು ರೋಚಕ ಆಯಾಮ ಪಡೆದುಕೊಳ್ಳುತ್ತದೆ. ಅಲ್ಲಿ ಶೀಲಂಗೆ ನಿಜವಾಗಿಯೂ ದೆವ್ವದ ದರ್ಶನವಾಗುತ್ತದಾ ಎಂಬುದರಿಂದ ಹಿಡಿದು ಎಲ್ಲರನ್ನು ಕಾಡ ಬಹುದಾದ ಪ್ರತೀ ಪ್ರಶ್ನೆಇಗಳಿಗೂ ಇಲ್ಲಿ ರೋಚಕ ಉತ್ತರವಿದೆ. ವಿಶೇಷವೆಂದರೆ ಇಲ್ಲಿ ಮೂಢ ನಂಬಿಕೆಯ ವಿರುದ್ಧದ ಅಂಶಗಳನ್ನೇ ನಿರ್ದೇಶಕರು ಪ್ರಧಾನವಾಗಿಸಿಕೊಂಡಿದ್ದಾರೆ. ಇದರೊಂದಿಗೆ ನಾನಾ ಛಾಯೆಗಳಿರೋ ಗಟ್ಟಿ ಕಥೆಯನ್ನೇ ಕಟ್ಟಿ ಕೊಟ್ಟಿದ್ದಾರೆ.

Alidu Ulidavaru 2

ಸಾಮಾನ್ಯವಾಗಿ ಮನುಷ್ಯನಿಗೆ ಕಾಣಿಸೋದರ ಮೇಲಿರೋ ಕುತೂಹಲಕ್ಕಿಂತ ಕಾಣಿಸದಿರುವುದರ ಬಗ್ಗೆಯೇ ಆಸಕ್ತಿ ಹೆಚ್ಚು. ಅದುವೇ ಭ್ರಮೆಯ ರೂಪ ಧರಿಸಿ ಅದರ ಚಿಪ್ಪೊಳಗೆ ದೆವ್ವ ಭೂತಗಳಂಥವುಗಳು ನರ್ತನ ಶುರುವಿಟ್ಟುಕೊಳ್ಳುತ್ತವೆ. ಈ ಭೂಮಿಕೆಯಲ್ಲಿ ಸಿದ್ಧಗೊಂಡಿರೋ ಅಳಿದು ಉಳಿದವರು ಭರ್ಜರಿ ಎಂಟರ್‍ಟೈನ್ಮೆಂಟ್ ಪ್ಯಾಕೇಜಿನಂತೆ ಮೂಡಿ ಬಂದಿದೆ. ಇಲ್ಲಿ ಹಾಡುಗಳ ಆಡಂಬರವಿಲ್ಲ, ಸಂತದ ಅಬ್ಬರವೂ ಇಲ್ಲ. ಆದರೆ ಕಥೆಯೇ ಅದೆಲ್ಲದರ ಸ್ಥಾನವನ್ನು ಆಕ್ರಮಿಸಿಕೊಂಡು ತಣ್ಣಗೆ ವಿಜೃಂಭಿಸುತ್ತದೆ. ಅಶು ಬೆದ್ರ ನಾಯಕನಾಗಿ ಮೊದಲ ಪ್ರಯತ್ನದಲ್ಲಿಯೇ ಮೆಚ್ಚಿಕೊಳ್ಳುವಂತೆ ನಟಿಸಿದ್ದಾರೆ. ಸಂಗೀತಾ ಭಟ್ ಕೂಡಾ ಅದಕ್ಕೆ ಸರಿಯಾಗಿಯೇ ಸಾಥ್ ನೀಡಿದ್ದಾರೆ. ಅತುಲ್ ಕುಲಕರ್ಣಿ, ಪವನ್ ಕುಮಾರ್, ಬಿ ಸುರೇಶ್ ಅವರ ಪಾತ್ರಗಳೂ ಕಾಡುವಂತಿವೆ. ಅಂತೂ ಅತ್ಯಂತ ವಿಶಿಷ್ಟವಾದ ಚಿತ್ರವಾಗಿ ದಾಖಲಾಗುವಂತೆ ಅಳಿದು ಉಳಿದವರು ಚಿತ್ರ ಮೂಡಿ ಬಂದಿದೆ.

ರೇಟಿಂಗ್: 3.5/5

TAGGED:Alidu UlidavaruArvind SastryAshu BedraAtul KulkarniKannada moviePawan KumarPublic TVreviewಅರವಿಂದ್ ಶಾಸ್ತ್ರಿಅಶು ಬೆದ್ರಅಳಿದು ಉಳಿದವರುರೇಟಿಂಗ್
Share This Article
Facebook Whatsapp Whatsapp Telegram

Cinema news

Rashmika mandanna
IMDB ಟಾಪ್-10 ಲಿಸ್ಟ್‌ನಲ್ಲಿ ಕನ್ನಡದ ʻRRRʼ ತಾರೆಯರಿಗೆ ಸ್ಥಾನ
Cinema Latest Sandalwood Top Stories
gilli bigg boss
‘ಗಿಲ್ಲಿ’ ಈ ವಾರದ ಕಳಪೆ
Cinema Latest Top Stories TV Shows
Pushpa 2
ʻಪುಷ್ಪ-2ʼಗೆ ವರ್ಷದ ಸಂಭ್ರಮ – ಫ್ಯಾನ್ಸ್‌ಗೆ ಧನ್ಯವಾದ ಹೇಳಿದ ಅಲ್ಲು ಅರ್ಜುನ್‌
Cinema Latest South cinema
Kangana Ranaut
Fashion Trends | ನಯಾ ಲುಕ್‌ನಲ್ಲಿ ಕ್ವೀನ್‌ ಕಂಗನಾ
Bollywood Cinema Latest

You Might Also Like

Huttari Festival 7
Districts

ಮೈನಡುಗಿಸುವ ಚಳಿಯಲ್ಲೂ ಬೆಚ್ಚನೆಯ ಸಂಭ್ರಮ – ʻಹುತ್ತರಿʼ ಹಬ್ಬದ ಸಡಗರ; ಕೊಡಗಿನ ವಿವಿಧೆಡೆ ಜನಪದ ಲೋಕ ಸೃಷ್ಟಿ

Public TV
By Public TV
30 minutes ago
H D Kumaraswamy 4
Latest

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಹೆಚ್‌ಡಿಕೆ ಪತ್ರ

Public TV
By Public TV
45 minutes ago
Bengaluru Airport 2
Bengaluru City

ಇಂಡಿಗೋ ಸಮಸ್ಯೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆಯ ಅಸ್ಥಿ ಹಿಡಿದು ಮಗಳ ಪರದಾಟ

Public TV
By Public TV
1 hour ago
IndiGo flight cancellations Bengaluru Techie couple attends their own wedding reception virtually
Dharwad

ಇಂಡಿಗೋ ವಿಮಾನ ಹಾರಾಟ ವ್ಯತ್ಯಯ – ವೀಡಿಯೋ ಕಾನ್ಫರೆನ್ಸ್‌ನಲ್ಲಿ ಆರತಕ್ಷತೆಗೆ ಭಾಗಿಯಾದ ಟೆಕ್ಕಿಗಳು

Public TV
By Public TV
1 hour ago
Eranna Kadadi 3
Latest

ಕಬ್ಬು ಬೆಳೆಗಾರರ ಸಮಸ್ಯೆ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಈರಣ್ಣ ಕಡಾಡಿ

Public TV
By Public TV
2 hours ago
Rottweiler Attack Death
Davanagere

ದಾವಣಗೆರೆ | ಮಹಿಳೆಯನ್ನು ಕಚ್ಚಿ ಕಚ್ಚಿ ಕೊಂದ ರಾಟ್ ವೀಲರ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?