Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ

Public TV
Last updated: September 4, 2022 11:32 pm
Public TV
Share
3 Min Read
Mohammad Rizwan
SHARE

ದುಬೈ: ಮೊಹಮ್ಮದ್ ರಿಜ್ವಾನ್ ಬ್ಯಾಟಿಂಗ್ ಬಲದಿಂದಾಗಿ ಕೊನೆಯ ವರೆಗೆ ಹೋರಾಡಿ ಪಾಕಿಸ್ತಾನ ತಂಡ ಭಾರತ ವಿರುದ್ಧ 6 ವಿಕೆಟ್‍ಗಳ ಜಯ ಸಾಧಿಸಿದೆ.

Mohammad Nawaz

ತೀವ್ರ ಪೈಪೋಟಿಯಿಂದ ಕೂಡಿದ ಪಂದ್ಯದಲ್ಲಿ ಕೊನೆಯ 2 ಓವರ್‌ನಲ್ಲಿ ಪಾಕಿಸ್ತಾನ ಗೆಲುವಿಗೆ 26 ರನ್ ಬೇಕಾಗಿತ್ತು. ಕೊನೆಯ 6 ಎಸೆತಗಳಲ್ಲಿ 7 ರನ್ ಬೇಕಾಗಿತ್ತು. ಭಾರತದ ಪರ ಕೊನೆಯ ಓವರ್ ಎಸೆಯಲು ಬಂದ ಹರ್ಷದೀಪ್ ಸಿಂಗ್ ಅವರ ಮೊದಲ ಎಸೆತದಲ್ಲಿ ಒಂದು ರನ್ ನೀಡಿದರು. ಎರಡನೇ ಎಸೆತದಲ್ಲಿ 4 ರನ್ ಬಿಟ್ಟುಕೊಟ್ಟರು. ಕೊನೆಯ 4 ಎಸೆತದಲ್ಲಿ 2 ರನ್ ಬೇಕಾಗಿತ್ತು. ಈ ವೇಳೆ ಆಸಿಫ್ ವಿಕೆಟ್ ಪಡೆಯುವಲ್ಲಿ ಹರ್ಷದೀಪ್ ಸಿಂಗ್ ಯಶಸ್ವಿಯಾದರು. ಕೊನೆಯ 2 ಎಸೆತಗಳಲ್ಲಿ ಪಾಕ್ ಗೆಲುವಿಗೆ 2 ರನ್ ಬೇಕಾಗಿತ್ತು. ಅಂತಿಮವಾಗಿ ಭಾರತ ನೀಡಿದ 182 ರನ್‍ಗಳ ಬೃಹತ್ ಮೊತ್ತವನ್ನು ಪಾಕಿಸ್ತಾನ 19.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಸಿಡಿಸಿ ಗೆಲುವು ದಾಖಲಿಸಿತು.

IND VS PAK 1

ಪಾಕಿಸ್ತಾನ ತಂಡ ಚೇಸಿಂಗ್ ವೇಳೆ ನಾಯಕ ಬಾಬರ್ ಅಜಮ್ 14 ರನ್ (10 ಎಸೆತ, 2 ಬೌಂಡರಿ) ಬಾರಿಸಿ ಔಟ್ ಆಗುವ ಮೂಲಕ ಬ್ಯಾಟಿಂಗ್ ವೈಫಲ್ಯ ಮುಂದುವರಿಸಿದರು. ಇವರ ಹಿಂದೆ ಫಖರ್ ಜಮಾನ್ 15 ರನ್ (18 ಎಸೆತ, 2 ಬೌಂಡರಿ) ಬಾರಿಸಿ ವಿಕೆಟ್ ಕೈಚೆಲ್ಲಿಕೊಂಡರು. 63 ರನ್‍ಗಳಿಗೆ ಪಾಕಿಸ್ತಾನ ತಂಡ 2 ವಿಕೆಟ್ ಕಳೆದುಕೊಂಡಿತು.

TEAM INDIA 1

ಆ ಬಳಿಕ ಒಂದಾದ ಮೊಹಮ್ಮದ್ ರಿಜ್ವಾನ್ ಮತ್ತು ಮೊಹಮ್ಮದ್ ನವಾಜ್ ಪಾಕಿಸ್ತಾನ ತಂಡಕ್ಕೆ ಚೇತರಿಕೆ ನೀಡಿದರು. ಈ ಜೋಡಿ ಮೂರನೇ ವಿಕೆಟ್‍ಗೆ 73 ರನ್ (41 ಎಸೆತ) ಬಾರಿಸಿ ಬೇರ್ಪಟ್ಟಿತು. ಉತ್ತಮವಾಗಿ ಆಡುತ್ತಿದ್ದ ಮೊಹಮ್ಮದ್ ನವಾಜ್ 42 ರನ್ (20 ಎಸೆತ, 6 ಬೌಂಡರಿ, 2 ಸಿಕ್ಸ್) ಬಾರಿಸಿ ಕ್ಯಾಚ್ ನೀಡಿ ಹೊರ ನಡೆದರು. ಆದರೆ ಇನ್ನುಂದೆಡೆ ರಿಜ್ವಾನ್ ಮಾತ್ರ ಬೌಂಡರಿ, ಸಿಕ್ಸ್ ಮೂಲಕ ಭಾರತದ ಬೌಲರ್‍ಗಳಿಗೆ ಕಾಡಿದರು. ಪಾಕ್ ಗೆಲುವಿಗಾಗಿ ಮುಂಚೂಣಿಯಲ್ಲಿ ನಿಂತು ಹೋರಾಡಿದ ರಿಜ್ವಾನ್ ಆಟ 71 ರನ್ (51 ಎಸೆತ, 6 ಬೌಂಡರಿ, 2 ಸಿಕ್ಸ್) ಕೊನೆಗೊಂಡಿತು.

ಬಳಿಕ ಪಾಕಿಸ್ತಾನಕ್ಕೆ ಖುಷ್ದಿಲ್ ಶಾ ಮತ್ತು ಆಸಿಫ್ ಒಂದಾಗಿ ಪಾಕ್ ಗೆಲುವಿಗೆ ಹೋರಾಡಿದರು. ಈ ವೇಳೆ ಹರ್ಷದೀಪ್ ಸಿಂಗ್ ಬಿಟ್ಟ ಕ್ಯಾಚ್ ಕೂಡ ಪಾಕಿಸ್ತಾನಕ್ಕೆ ನೆರವಾಯಿತು. ಅಂತಿಮವಾಗಿ ಪಾಕಿಸ್ತಾನ 1 ಎಸೆತ ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.

TEAM INDIA 2

ಟಾಸ್ ಗೆದ್ದ ಪಾಕಿಸ್ತಾನ ತಂಡ ಭಾರತ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿತು. ಈ ಅವಕಾಶವನ್ನು ಸಮರ್ಥವಾಗಿ ಬಳಸಿಕೊಂಡ ಭಾರತದ ಆರಂಭಿಕ ಆಟಗಾರರಾದ ಕೆ.ಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಹೊಡಿಬಡಿ ಆಟದ ಮೂಲಕ ಸೂಪರ್ ಡೂಪರ್ ಆರಂಭ ನೀಡಿದರು. ಮೊದಲ ವಿಕೆಟ್‍ಗೆ 54 ರನ್ (31 ಎಸೆತ) ಪೇರಿಸಿ, ಶರ್ಮಾ 28 ರನ್ (16 ಎಸೆತ, 3 ಬೌಂಡರಿ, 2 ಸಿಕ್ಸ್) ಮತ್ತು ರಾಹುಲ್ 28 ರನ್ (20 ಎಸೆತ, 1 ಬೌಂಡರಿ, 2 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿ ಹೊರನಡೆದರು.

ROHITH SHARMA AND KL RAHUL

ಬಳಿಕ ವಿರಾಟ್ ಕೊಹ್ಲಿಯ ಅಬ್ಬರ ಆರಂಭವಾಯಿತು. ಆದರೆ ಕಳೆದ ಪಂದ್ಯದ ಹೀರೋ ಸೂರ್ಯಕುಮಾರ್ ಯಾದವ್ 13 ರನ್ (10 ಎಸೆತ, 2 ಬೌಂಡರಿ) ಸಿಡಿಸಿ ಔಟ್ ಆಗಿ ನಿರಾಸೆ ಮೂಡಿಸಿದರು. ಇವರ ಹಿಂದೆ ಪಂತ್ 14 ರನ್ (12 ಎಸೆತ, 2 ಬೌಂಡರಿ) ಬಾರಿಸಿ ಪೆವಿಲಿಯನ್‌ ಸೇರಿಕೊಂಡರು. ಆ ಬಳಿಕ ಬಂದ ಪಾಂಡ್ಯ ಶೂನ್ಯ ಸುತ್ತಿದರು.

VIRAT KOHLI 3

ಕೊಹ್ಲಿ ಏಕಾಂಗಿ ಹೋರಾಟ
ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಕೊಹ್ಲಿ ಮಾತ್ರ ಪಾಕ್ ಬೌಲರ್‌ಗಳನ್ನು ಚೆಂಡಾಡಿದರು. ಉತ್ತಮ ಲಯದಲ್ಲಿ ಕಂಡುಬಂದ ಕೊಹ್ಲಿ ಪಾಕ್ ಬೌಲರ್‌ಗಳನ್ನು ಕೊನೆಯ ಓವರ್ ವರೆಗೆ ಎದುರಿಸಿ 60 ರನ್ (44 ಎಸೆತ, 4 ಬೌಂಡರಿ, 1 ಸಿಕ್ಸ್) ಬಾರಿಸಿ ಕೊನೆಯ ಓವರ್‌ನಲ್ಲಿ ರನ್ ಔಟ್ ಆಗಿ ವಿಕೆಟ್ ಕಳೆದುಕೊಂಡರು. ಕೊನೆಯಲ್ಲಿ ರವಿ ಬಿಷ್ಣೋಯಿ ಸತತ 2 ಬೌಂಡರಿ ಸಿಡಿಸಿ ತಂಡದ ಮೊತ್ತವನ್ನು 180ರ ಗಡಿದಾಟಿಸಿದರು.

VIRAT KOHLI AND DEEPAK HOODA

ಅಂತಿಮವಾಗಿ ಭಾರತ ನಿಗದಿತ ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 181 ಗಳಿಸಿತು. ಪಾಕ್ ಪರ ಶಾದಾಬ್ ಖಾನ್ 2 ವಿಕೆಟ್ ಪಡೆದರು. ನಸೀಮ್ ಶಾ, ಮೊಹಮ್ಮದ್ ಹಸನೈನ್, ಹಾರಿಸ್ ರೌಫ್ ಮತ್ತು ಮೊಹಮ್ಮದ್ ನವಾಜ್ ತಲಾ 1 ವಿಕೆಟ್ ಹಂಚಿಕೊಂಡರು.

Live Tv
[brid partner=56869869 player=32851 video=960834 autoplay=true]

TAGGED:Asia Cup T20IND vs PAKindiapakistanvirat kohliಏಷ್ಯಾಕಪ್ಟೀಂ ಇಂಡಿಯಾಪಾಕಿಸ್ತಾನ
Share This Article
Facebook Whatsapp Whatsapp Telegram

Cinema Updates

shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
13 minutes ago
Saurav Lokesh
‘ದಿಲ್‌ದಾರ್’ ಶ್ರೇಯಸ್ ಮಂಜುಗೆ ವಿಲನ್ ಆದ ‘ಭಜರಂಗಿ’ ಲೋಕಿ
48 minutes ago
darshan 1 1
ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್
2 hours ago
kamal haasan
ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!
3 hours ago

You Might Also Like

g parameshwara 2
Bengaluru City

ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

Public TV
By Public TV
18 minutes ago
HC Balakrishna
Districts

ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

Public TV
By Public TV
32 minutes ago
Hemavathi Express Canal Link 2
Districts

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

Public TV
By Public TV
1 hour ago
MB Patil
Bengaluru City

ಬೆಂಗಳೂರು – ವಿಜಯಪುರ ರೈಲು ಪ್ರಯಾಣ; ಸೋಮಣ್ಣ ಜೊತೆ ಎಂಬಿಪಿ ಮಾತುಕತೆ

Public TV
By Public TV
1 hour ago
JIO
Latest

ಮೊಬೈಲ್ ಬಳಕೆದಾರರ ಸೇರ್ಪಡೆ: ಏಪ್ರಿಲ್ ತಿಂಗಳಲ್ಲಿ ಕರ್ನಾಟಕದಲ್ಲಿ ರಿಲಯನ್ಸ್ Jio ನಂ.1

Public TV
By Public TV
2 hours ago
siddaramaiah 11
Bengaluru City

ಡಿಸಿ, ಸಿಇಓಗಳ ಸಭೆಗೆ ತಡವಾಗಿ ಬಂದ ಡಿಸಿಎಂ, ಸಚಿವರು – ಸಿಎಂ ಸಿದ್ದರಾಮಯ್ಯ ಗರಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?