ಇಸ್ಲಾಮಾಬಾದ್: ಇತ್ತೀಚೆಗಷ್ಟೇ ಭಾರತದ (India) ವಿರುದ್ಧ ಯುದ್ಧ ಗೆದ್ದಂತೆ ಪೋಸ್ ಕೊಟ್ಟು ನಗೆಪಾಟಲಿಗೀಡಾಗಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ (Asim Munir) ಮತ್ತೆ ಭಾರತದ ವಿರುದ್ಧ ವಿಷ ಕಾರಿದ್ದಾರೆ. ಸಿಂಧೂ ಜಲ ಒಪ್ಪಂದವು (Indus Waters Treaty) ನಮಗೆ ಲಕ್ಷ್ಮಣ ರೇಖೆ ಇದ್ದಂತೆ ಈ ವಿಚಾರದಲ್ಲಿ ಎಂದಿಗೂ ರಾಜಿ ಇಲ್ಲ ಅಂತ ಹೇಳಿದ್ದಾರೆ.
ಪಾಕಿಸ್ತಾನದ (Pakistan) ವಿಶ್ವವಿದ್ಯಾಲಯಗಳ ಉಪಕುಲಪತಿಗಳು, ಪ್ರಾಂಶುಪಾಲರು, ಹಿರಿಯ ಶಿಕ್ಷಕರು ಮತ್ತು ಶಿಕ್ಷಣ ತಜ್ಞರೊಂದಿಗಿನ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮುನೀರ್ ಮಾತನಾಡಿದ್ದಾರೆ. ಇದನ್ನೂ ಓದಿ: ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್!
ಭಾರತದ ಪ್ರಾಬಲ್ಯವನ್ನು ನಾವು ಎಂದಿಗೂ ಒಪ್ಪಿಕೊಳ್ಳಲ್ಲ. ಸಿಂಧೂ ಜಲ ಒಪ್ಪಂದ ಪಾಕಿಸ್ತಾನಕ್ಕೆ ಲಕ್ಷ್ಮಣ ರೇಖೆ ಇದ್ದಂತೆ. ಈ ವಿಚಾರದಲ್ಲಿ ಪಾಕಿಸ್ತಾನ ಎಂದಿಗೂ ರಾಜಿ ಮಾಡಿಕೊಳ್ಳಲ್ಲ, ಭಾರತಕ್ಕೆ ತಲೆಬಾಗುವುದಿಲ್ಲ. ಏಕೆಂದರೆ ಇದು 2.40 ಕೋಟಿ ನಾಗರಿಕರ ಮೂಲಭೂತ ಹಕ್ಕುಗಳಿಗೆ ನೇರವಾಗಿ ಸಂಬಂಧಿಸಿದ್ದಾಗಿದೆ ಅಂದಿದ್ದಾರೆ. ಅಲ್ಲದೇ ಬಲೂಚಿಸ್ತಾನದ ದಂಗೆಗೆ ಭಾರತವೇ ಕಾರಣ ಅಂತ ದೂರಿದ್ದಾರೆ. ಇದನ್ನೂ ಓದಿ: ಭಾರತದ ಬ್ರಹ್ಮೋಸ್ ನಮ್ಮ ಪ್ಲ್ಯಾನ್ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್ ಪ್ರಧಾನಿ
ಕಳೆದ ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಸಂಪುಟ ಸಮಿತಿಯು ಸಿಂಧೂ ಜಲ ಒಪ್ಪಂದವನ್ನ ಸ್ಥಗಿತಗೊಳಿಸಲು ನಿರ್ಧರಿಸಿತು. ಇದನ್ನೂ ಓದಿ: ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!