ರಾಮನಗರ: ಎಣ್ಣೆ (Alcohol) ಸಾಲ ಕೊಡಲಿಲ್ಲ ಎಂದು ಬಾರ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಕಲ್ಲು ತೂರಾಟ ಮಾಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಹೊಂಗನೂರಿನಲ್ಲಿ ನಡೆದಿದೆ.
ಹೊಂಗನೂರಿನ ರಾಘವೇಂದ್ರ ವೈನ್ಸ್ ನಲ್ಲಿ ತಡರಾತ್ರಿ ಗಲಾಟೆ ನಡೆದಿದೆ. ಬಾರ್ ಕ್ಯಾಶಿಯರ್ ರಾಜಣ್ಣ, ದೀಪು ಎಂಬವರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮತಗಳಿಂದ ಜೆಡಿಎಸ್ಗೆ ಈ ಬಾರಿ ಸೋಲಾಗಿಲ್ಲ: ಸಿಎಂ ಇಬ್ರಾಹಿಂ
ಅದೇ ಗ್ರಾಮದ ಗಿರಿ, ಕೀರ್ತಿ, ಮನು, ಕೃಷ್ಣ ಮತ್ತು ಅಭಿ ತಡರಾತ್ರಿ ಬಾರ್ಗೆ ಆಗಮಿಸಿ ಎಣ್ಣೆ ಸಾಲ ಕೊಡುವಂತೆ ಹೇಳಿದ್ದಾರೆ. ಈ ವೇಳೆ ಸಾಲ ಕೊಡಲು ಆಗಲ್ಲ ಎಂದಾಗ ಏಕಾಏಕಿ ಬಾರ್ನಲ್ಲಿದ್ದ ಸಿಬ್ಬಂದಿ ಮೇಲೆ ದೊಣ್ಣೆ ಹಾಗೂ ಬಾಟ್ಲಿಯಿಂದ ಹಲ್ಲೆ ಮಾಡಿದ್ದಾರೆ. ಬಳಿಕ ಬಾರ್ ಮೇಲೆ ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ.
ಪುಂಡರು ಬಾರ್ ಬಳಿ ದಾಂಧಲೆ ನಡೆಸಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಲ್ಲೆಗೊಳಗಾದ ಬಾರ್ ಸಿಬ್ಬಂದಿ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Web Stories