ಬಿಜೆಪಿ ಪರ ಕೆಲ್ಸ ಮಾಡಿದ್ರೆ ಕೊಲೆ ಬೆದರಿಕೆ- ಕಾರ್ಯಕರ್ತನ ಮೇಲೆ ಜೆಡಿಎಸ್ ನವರಿಂದ ಹಲ್ಲೆ

Public TV
0 Min Read
BJP JDS

ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್ ಕಾರ್ಯಕರ್ತರು ಹಲ್ಲೆ ಮಾಡಿರುವ ಆರೋಪವೊಂದು ಕೇಳಿಬಂದಿದೆ.

ಬಿಜೆಪಿ ಪರ ಕೆಲಸ ಮಾಡಿದ್ರೆ ಕೊಲೆ ಮಾಡುವುದಾಗಿ ಜೆಡಿಎಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

vlcsnap 2018 05 10 09h13m34s211

ಭಾಲ್ಕಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಿಕೆ ಸಿದ್ರಾಮ್ ಬೆಂಬಲಿಗ ಭಾಲ್ಕಿ ವೈಜನಾಥಾ ಸಗಾರೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ತಡರಾತ್ರಿ ಮನೆಗೆ ಹೋಗುವಾಗ ಕೆಲ ಜೆಡಿಎಸ್ ಅಭ್ಯರ್ಥಿ ಬೆಂಬಲಿಗರು ಹಲ್ಲೆ ಮಾಡಿರುವುದಾಗಿ ಬಿಜೆಪಿ ಕಾರ್ಯಕರ್ತ ಆರೋಪಿಸಿದ್ದಾರೆ.

ಜೆಡಿಎಸ್ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಬೆಂಬಲಿಗರು ಹಲ್ಲೆ ನಡೆಸಿರುವುದಾಗಿ ಆರೋಪ ವ್ಯಕ್ತವಾಗಿದ್ದು, ಈ ಸಂಬಂಧ ಭಾಲ್ಕಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *