ಈ ಬಾರಿಯ ಚುನಾವಣೆ (Assembly Election 2023) ಅಖಾಡಕ್ಕೆ ನಟ ಶಿವರಾಜ್ ಕುಮಾರ್ (Shivaraj Kumar) ಇಳಿದಿದ್ದರು. ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದರಿಂದ ಕಾಂಗ್ರೆಸ್ ಪಕ್ಷದ ಪರವಾಗಿ ಶಿವಣ್ಣ ಪ್ರಚಾರ ಮಾಡಿದ್ದರು. ಬೀಗರಾದ ಮಧು ಬಂಗಾರಪ್ಪ ಸೇರಿದಂತೆ ಒಟ್ಟು ಏಳು ಜನ ಅಭ್ಯರ್ಥಿಗಳ ಪರವಾಗಿ ಅವರು ಪ್ರಚಾರ ಮಾಡಿದ್ದರು. ಅದರಲ್ಲಿ ಸೋಲಿಗಿಂತ ಗೆದ್ದವರ ಸಂಖ್ಯೆಯೇ ಹೆಚ್ಚಿದೆ.
ಕಾಂಗ್ರೆಸ್ ಅಭ್ಯರ್ಥಿಗಳಾದ ಮಧು ಬಂಗಾರಪ್ಪ, ಸಿದ್ದರಾಮಯ್ಯ, ಕಿಮ್ಮನೆ ರತ್ನಾಕರ್, ಜಗದೀಶ್ ಶೆಟ್ಟರ್, ಲಕ್ಷ್ಮೀ ಹೆಬ್ಬಾಳ್ಕರ್, ಬೇಲೂರು ಗೋಪಾಲಕೃಷ್ಣ, ಭೀಮಣ್ಣ ನಾಯ್ಕ್ ಹೀಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಶಿವರಾಜ್ ಕುಮಾರ್ ರೋಡ್ ಶೋ ಮಾಡಿದರು. ಅಭ್ಯರ್ಥಿಗಳ ಪರವಾಗಿ ಮಾತನಾಡಿದರು. ಇದರಲ್ಲಿ ಇಬ್ಬರು ಮಾತ್ರ ಸೋತಿದ್ದು, ಉಳಿದವರ ಜಯಶಾಲಿಗಳಾಗಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates
ಸೊರಬ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಬಾಮೈದುನ ಮಧು ಬಂಗಾರಪ್ಪ ಗೆಲುವು ಸಾಧಿಸಿದ್ದರೆ, ಭೀಮಣ್ಣ ನಾಯ್ಕ್ ಶಿರಸಿ ಕ್ಷೇತ್ರ, ವರುಣಾದಲ್ಲಿ ಸಿದ್ಧರಾಮಯ್ಯ, ಬೆಳಗಾವಿ ಗ್ರಾಮಾಂತರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಸಾಗರ ಕ್ಷೇತ್ರದಲ್ಲಿ ಬೇಲೂರು ಗೋಪಾಲಕೃಷ್ಣ ಗೆಲುವು ಸಾಧಿಸಿದ್ದಾರೆ. ಉಳಿದಂತೆ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್, ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಗೆ ಸೋಲಾಗಿದೆ.