ಕೆಲವೊಬ್ಬರು ಸುಧಾರಿಸಲು ಸಾಧ್ಯವಿಲ್ಲ ಬಿ. ಎಲ್. ಸಂತೋಷ್ ವ್ಯಂಗ್ಯ

Public TV
2 Min Read
b. l. santosh

ನವದೆಹಲಿ: ಕೆಲವೊಬ್ಬರು ಸುಧಾರಿಸುವುದು ಸಾಧ್ಯವಿಲ್ಲ ಎಂದು ಎಸ್‍ಪಿ ಅಧ್ಯಕ್ಷನಿಗೆ ಪರೋಕ್ಷವಾಗಿ ವ್ಯಂಗ್ಯವಾಡಿದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವ್ಯಂಗ್ಯವಾಡಿದ್ದಾರೆ.

ಪಂಚ ರಾಜ್ಯಗಳ ವಿಧಾನಸಭೆಯ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಬಿ. ಎಲ್. ಸಂತೋಷ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ಗೆ ಸೋಲು

web bjp logo 1538503012658

ಈ ವೇಳೆ ಬಿಜೆಪಿಯ ಗೆಲುವಿನ ಬಗ್ಗೆ ಯಾವಾಗಲೂ ಟೀಕೆ ಮಾಡುವ ಪ್ರತಿಪಕ್ಷಗಳ ವಿರುದ್ಧ ಸಿಡಿದ ಅವರು, ದೇವ ಭೂಮಿಯಲ್ಲಿ ಬಿಜೆಪಿಯು ಗೆಲುವಿನ ನಾಗಾಲೋಟದತ್ತ ಸಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳು ಕುಸಿಯುತ್ತಿದ್ದು, ಗಣರಾಜ್ಯವನ್ನು ಕಿತ್ತೊಗೆಯಲಾಗುತ್ತಿದೆ. ಗಡಿನಾಡು ಪಂಜಾಬ್‍ನಲ್ಲಿ ಆಮ್ ಆದ್ಮಿಯು ಗೆಲುವಿನತ್ತ ಸಾಗುತ್ತಿದೆ. ಪರ್ಯಾಯ ಆಡಳಿತದ ಭರವಸೆ, ಆಶಾವಾದ ಮೂಡಿದೆ. ಕೆಲವೊಬ್ಬರು ಸುಧಾರಿಸುವುದೇ ಇಲ್ಲ ಎಂದು ಟ್ವೀಟ್ ಮೂಲಕ ಕುಹಕವಾಡಿದ್ದಾರೆ. ಇದನ್ನೂ ಓದಿ: ಹುಟ್ಟೂರಿಗೆ ನೆರವಾದ ಸೋನು ಸೂದ್-1,000 ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ

ಉತ್ತರ ಪ್ರದೇಶದಲ್ಲಿ ಬಿಜೆಪಿ ಪರವಾಗಿ ಫಲಿತಾಂಶ ಬರುವಂತೆ ಮತಯಂತ್ರಗಳನ್ನು ತಿರುಚಲು ಸರ್ಕಾರದಿಂದ ಜಿಲ್ಲಾಧಿಕಾರಿಗಳಿಗೆ ಸೂಚನೆ ಬಂದಿದೆ ಅಂತ ಆಖಿಲೇಶ್ ಯಾದವ್ ಮಂಗಳವಾರ ಆರೋಪಿಸಿದ್ದರು. ವಾರಣಾಸಿಯಲ್ಲಿ ಇವಿಎಂಗಳನ್ನು ಸಾಗಿಸುತ್ತಿದ್ದು ಎರಡು ಟ್ರಕ್‍ಗಳನ್ನು ಎಸ್‍ಪಿ ಕಾರ್ಯಕರ್ತರು ತಡೆದು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ ಹರಸಾಹಸದ ನಂತರ ಟ್ರಕ್‍ಗಳು ಮುಂದೆ ಸಾಗಲು ಅನುವು ಮಡಿಕೊಟ್ಟಿದ್ದಾರೆ ಎಂದು ಆರೋಪಿಸಲಾಗಿತ್ತು.

ಆರೋಪ ಬಂದ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಬಳಸಿರುವ ಮತ ಯಂತ್ರಗಳನ್ನು ಬಲಿಷ್ಟವಾದ ಒಂದು ಕೊಠಡಿಯಲ್ಲಿ ಭದ್ರವಾಗಿ ಇರಿಸಲಾಗಿದೆ. ಅಲ್ಲಿ ಸಿ.ಸಿ.ಟಿ.ವಿ ಕಣ್ಗಾಗಾವಲು ಇದೆ. ಬಲಿಷ್ಟವಾದ ಆ ಕೊಠಡಿಯಿಂದ ಯಾವುದೇ ಮತಯಂತ್ರಗಳನ್ನು ಸಾಗಿಸಿಲ್ಲ. ಟ್ರಕ್‍ನಲ್ಲಿ ಇರುವ ಮತಯಂತ್ರಗಳನ್ನು ಚುನಾವಣೆಯಲ್ಲಿ ಬಳಿಸಿಲ್ಲ. ಮತ ಎಣಿಕೆ ಸಿಬ್ಬಂದಿಗೆ ತರಬೇತಿ ನೀಡಲು ಈ ಮತಯಂತ್ರಗಳನ್ನು ಸಾಗಿಸಲಾಗುತ್ತಿತ್ತು. ರಾಜಕೀಯ ಪಕ್ಷಗಳು ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಎಂದು ವಾರಣಾಸಿ ಜಿಲ್ಲಾಧಿಕಾರಿ ಕೌಶಲ್ ಶರ್ಮಾ ಸ್ಪಷ್ಟನೆ ನೀಡಿದ್ದರು.

Share This Article