ಅನಾರೋಗ್ಯಕ್ಕೀಡಾಗಿರೋ ಮಗುವಿನ ಚಿಕಿತ್ಸೆಗೆ ಸಿಎಂ ಎಚ್‍ಡಿಕೆ ನೆರವಿನ ಭರವಸೆ

Public TV
1 Min Read
cm neravu

ಚಿಕ್ಕಮಗಳೂರು: ಅನಾರೋಗ್ಯಕ್ಕೀಡಾಗಿರುವ ಮಗುವಿನ ಚಿಕಿತ್ಸೆ ಕೊಡಿಸಲು ಮುಖ್ಯ ಮಂತ್ರಿ ಕುಮಾರಸ್ವಾಮಿ ಅವರು ಬಡ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.

ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಶೃಂಗೇರಿಗೆ ಭೇಟಿ ನೀಡಿದ್ದಾರೆ. ಶುಕ್ರವಾರ ರಾತ್ರಿ 11 ಗಂಟೆಗೆ ಶೃಂಗೇರಿಗೆ ಬಂದಿರುವ ಕುಮಾರಸ್ವಾಮಿ, ರಾತ್ರಿ ಶೃಂಗೇರಿಯಲ್ಲೇ ವಾಸ್ತವ್ಯ ಹೂಡಿದ್ದಾರೆ. ಬೆಳಗ್ಗೆ ಶಾರದಾಂಭೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಬಡ ಕುಟುಂಬವೊಂದು ಸಿಎಂ ಅವರನ್ನು ಭೇಟಿ ಮಾಡಿದೆ.

vlcsnap 2018 09 22 10h53m23s698

ಬಾಳೆಹೊನ್ನೂರು ಸಮೀಪದ ನೆಲ್ಲಿಮಕ್ಕಿಯ ದೇವರಾಜ, ಸುನಿತಾ ದಂಪತಿಯ ಐದು ವರ್ಷದ ಅಮಂತ ಅನಿಮಿಯಾ ಕಾಯಿಲೆಯಿಂದ ಬಳಲುತ್ತಿದ್ದಾನೆ. ಅದಕ್ಕಾಗಿ ಪ್ರತಿ ತಿಂಗಳೂ ಚಿಕಿತ್ಸೆಗೆ 25 ಸಾವಿರ ಖರ್ಚು ಮಾಡಲಾಗುತ್ತಿದೆ. ಹೀಗಾಗಿ ಚಿಕಿತ್ಸೆಗೆ ನೆರವು ನೀಡುವಂತೆ ಬಡ ದಂಪತಿ ಸಿಎಂ ಬಳಿ ಮನವಿ ಮಾಡಿಕೊಂಡಿದೆ.

ಅದಕ್ಕೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬನ್ನಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಿಸುತ್ತೇನೆ ಎಂದು ಬಡ ಕುಟುಂಬಕ್ಕೆ ಭರವಸೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *