ಚಿಕ್ಕಬಳ್ಳಾಪುರ: 8,000 ರೂಪಾಯಿ ಲಂಚ (Bribe) ಪಡೆಯುವಾಗ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ (Chikkaballapur) ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಮಾಲಾ ಕಿರಣ್ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವ ಅಧಿಕಾರಿಯಾಗಿದ್ದಾರೆ. ನಗರದ ಶಿಡ್ಲಘಟ್ಟ ರಸ್ತೆಯಲ್ಲಿರುವ ಬಸವೇಶ್ವರ ಫ್ಯೂಯಲ್ ಸೆಂಟರ್ನಲ್ಲಿ ಪೆಟ್ರೋಲ್ ಬಂಕ್ ಮೀಟರ್ ನವೀಕರಣಕ್ಕೆ 8,000 ರೂಪಾಯಿ ಲಂಚಕ್ಕೆ ಮಾಲೀಕ ಜಯಸೂರ್ಯ ಬಳಿ ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: ಮೋದಿ ಭೇಟಿ ಬೆನ್ನಲ್ಲೆ ಶಿರಾದಲ್ಲಿ ಟಿಕೆಟ್ ಫೈಟ್ ಜೋರು
ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸೆರೆ ಹಿಡಿದು, ಬಂಧಿತ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೂ ಮಾಲಾಕಿರಣ್ಗೆ ಸೇರಿದ ಬೆಂಗಳೂರಿನ ನಿವಾಸದ ಮೇಲೂ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿ ದೊರೆಕಿದ ದಾಖಲೆಗಳ ಪರಿಶೀಲನೆ ನಡೆಸುತ್ತಿರುವುದಾಗಿ ಎಸ್ಪಿ ಪವನ್ ನೆಜ್ಜೂರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಗ್ರಾಹಕರಿಗೆ ಮತ್ತೆ ಶಾಕ್: ರೆಪೋ ದರ ಹೆಚ್ಚಿಸಿದ RBI – ಸಾಲದ EMI ಹೆಚ್ಚಳ ಸಾಧ್ಯತೆ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k