ವೈದ್ಯಾಧಿಕಾರಿಯಿಂದ ಕಿರುಕುಳ ಆರೋಪ-ಡಿಸಿಗೆ ಪತ್ರ ಬರೆದು ಸಹಾಯಕ ಅಧೀಕ್ಷಕ ಆತ್ಮಹತ್ಯೆಗೆ ಯತ್ನ

Public TV
1 Min Read
udp suicide

ಉಡುಪಿ: ಬ್ರಹ್ಮಾವರ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಯಿಂದ ಕಿರುಕುಳ ಆರೋಪ ಮಾಡಿ ಹೆಲ್ತ್ ಇನ್ಸ್ ಪೆಕ್ಟರ್ ಆತ್ಮಹತ್ಯೆ ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಹಿರಿಯ ಅಧಿಕಾರಿಯಿಂದ ತನಗಾಗಿರುವ ಕಿರುಕುಳವನ್ನು ಜಿಲ್ಲಾಧಿಕಾರಿಗೆ ಪತ್ರದಲ್ಲಿ ಬರೆದಿಟ್ಟು ಶಿವಮೊಗ್ಗ ಮೂಲದ ನಾಗರಾಜ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭದ್ರಾವತಿ ತಾಲೂಕಿನ ಮೂಡಲ ವಿಠಲಾಪುರದವನಾಗಿರುವ ನಾಗರಾಜ್ ಬ್ರಹ್ಮಾವರ ತಾಲೂಕು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೂರು ತಿಂಗಳ ಹಿಂದೆ ನೇಮಕವಾಗಿದ್ದರು.

UDP SUICIDE ATTEMPT AV 3

UDP SUICIDE ATTEMPT AV 1

ಕರ್ತವ್ಯದ ವಿಚಾರವಾಗಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಮಹೇಶ್ ಐತಾಳ್ ಕಿರುಕುಳ ನೀಡುತ್ತಿದ್ದರು ಎಂದು ದೂರಿದ್ದಾರೆ. ಈ ಬಗ್ಗೆ ಡಿ.ಎಚ್.ಒ ಗೆ ದೂರು ನೀಡಿದ್ದರೂ ಪ್ರಯೋಜನವಾಗದೇ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಡಿಸಿಗೆ ಬರೆದಿರುವ ಪತ್ರದಲ್ಲಿ ಹೇಳಿಕೊಂಡಿದ್ದಾರೆ.

ಸದ್ಯ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ನಾಗರಾಜ್‍ಗೆ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆಗೆ ಮುನ್ನ ತನ್ನ ಕೊಠಡಿಯಲ್ಲಿ ನಾಗರಾಜ್ ಮಾತನಾಡಿದ್ದನ್ನು ಆತನ ಸ್ನೇಹಿತ ವೀಡಿಯೋ ಮಾಡಿದ್ದಾನೆ. ತನಗಾಗುತ್ತಿರುವ ಕಿರುಕುಳ ಬಗ್ಗೆ ಮಾತನಾಡಿದ್ದಾರೆ.

vlcsnap 2018 10 12 15h03m08s095

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *