ಇಸ್ಲಾಮಾಬಾದ್: ಭಾರತದ ಪಾಕ್ ರಾಯಭಾರಿ ಅಜಯ್ ಬಿಸಾರಿಯಾ ಅವರು ಪಾಕಿಸ್ತಾನದ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಪಾಕಿಸ್ತಾನ್ ತೆಹ್ರೇಕ್ ಇ ಇಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ರನ್ನು ಭೇಟಿ ಮಾಡಿ ಟೀಂ ಇಂಡಿಯಾ ಆಟಗಾರರು ಸಹಿ ಮಾಡಿದ ಕ್ರಿಕೆಟ್ ಬ್ಯಾಟನ್ನು ಕಾಣಿಕೆಯಾಗಿ ನೀಡಿದ್ದಾರೆ.
ಭಾರತದ ಹೈ ಕಮಿಷನರ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಶುಕ್ರವಾರ ಇಮ್ರಾನ್ ಖಾನ್ ರನ್ನು ಭೇಟಿ ಮಾಡಿ ಎರಡು ದೇಶಗಳ ನಡುವಿನ ಸಹಕಾರ ವೃದ್ಧಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಭೇಟಿಯ ವೇಳೆ ನೆನಪಿನ ಕಾಣಿಕೆಯಾಗಿ ಬ್ಯಾಟ್ ನೀಡಿದ್ದಾರೆ.
Indian HC Ajay Bisaria called on Mr Imran Khan, Chairperson & senior leadership of PTI. HC congratulated @ImranKhanPTI on his electoral success, discussed range of issues, prospects of India-Pak relationship. HC gifted a cricket bat autographed by the entire Indian cricket team. pic.twitter.com/xtdZ8H8ZQ5
— India in Pakistan (@IndiainPakistan) August 10, 2018
ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೇಕ್ ಇ ಇಸಾಫ್ ಪಕ್ಷ ಜುಲೈ 25 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆಗಸ್ಟ್ 18 ರಂದು ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಿಟಿಐ ಪಕ್ಷದ ಮೂಲಗಳು ಮಾಹಿತಿ ನೀಡಿದೆ. ಅಲ್ಲದೇ ಟೀಂ ಇಂಡಿಯಾ ಮಾಜಿ ಆಟಗಾರರದ ಕಪಿಲ್ ದೇವ್, ನವಜೋಥ್ ಸಿಂಗ್ ಸಿಧು ಹಾಗೂ ಸುನೀಲ್ ಗವಾಸ್ಕರ್ ಅವರಿಗೆ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ.
65 ವರ್ಷದ ಇಮ್ರಾನ್ ಖಾನ್ ಪಾಕ್ ಕ್ರಿಕೆಟ್ ತಂಡದ ನಾಯಕರಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು, ಬಳಿಕ ರಾಜಕೀಯಕ್ಕೆ ಪ್ರವೇಶ ನೀಡಿ ತಮ್ಮದೇ ಪಕ್ಷವನ್ನು ಸ್ಥಾಪಿಸಿದ್ದರು. ಹಲವು ಏಳುಬೀಳುಗಳ ಬಳಿಕ ಈ ಬಾರಿಯ ಚುನಾವಣೆಯಲ್ಲಿ ಪಕ್ಷವೂ ಬಹುದೊಡ್ಡ ಸಂಖ್ಯೆಯಲ್ಲಿ ಸ್ಥಾನ ಗಳಿಸಿತ್ತು. ಈ ವೇಳೆ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ ಇಮ್ರಾನ್ ಖಾನ್ ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಹಕಾರ ವೃದ್ಧಿ ಹೆಚ್ಚಿನಗೆ ಒತ್ತು ನೀಡಲಾಗವುದು ಎಂದು ಹೇಳಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews
Called on @ImranKhanPTI and his team today for a positive, constructive conversation.@MEAIndia @IndiainPakistan https://t.co/ZIAGXI4hfI
— Ajay Bisaria (@Ajaybis) August 10, 2018