Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

81ರ ಇಳಿ ವಯಸ್ಸಿನಲ್ಲೂ ಇಂಗ್ಲಿಷ್ ಎಂಎ ಪರೀಕ್ಷೆ ಬರೆದು ಯುವಕರಿಗೆ ಸ್ಫೂರ್ತಿಯಾದ ವೃದ್ಧ

Public TV
Last updated: June 10, 2023 10:30 am
Public TV
Share
2 Min Read
EXAM 1
SHARE

ವಿಜಯಪುರ: ಕಲಿಕೆಗೆ ವಯಸ್ಸು ಎಂಬುವುದಿಲ್ಲ. ದೇಹಕ್ಕೆ ವಯಸ್ಸಾಗಬಹುದೇ ಹೊರತು ಕಲಿಕಾಸಕ್ತಿಗೆ ಇಲ್ಲ ಎಂಬುದನ್ನು ವಿಜಯಪುರದ (Vijayapura) 81 ವರ್ಷದ ಹಿರಿಯ ನಾಗರಿಕರೊಬ್ಬರು ಪರೀಕ್ಷೆ ಬರೆಯುವ ಮೂಲಕ ತೋರಿಸಿ ಕೊಟ್ಟಿದ್ದಾರೆ.

ನಗರದ ಪ್ರತಿಷ್ಠಿತ ಬಿಎಲ್‌ಡಿಇ (BLDE) ಸಂಸ್ಥೆಯ ನರ್ಸಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಇಗ್ನೋ (ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ) ಪರೀಕ್ಷೆಯಲ್ಲಿ ಎಂಎ ಇಂಗ್ಲಿಷ್ (MA English) ಅಂತಿಮ ವರ್ಷದ ಪರೀಕ್ಷೆ ಬರೆಯುವ ಮೂಲಕ ನಿಂಗಯ್ಯ ಒಡೆಯರ ಎಲ್ಲರ ಗಮನ ಸೆಳೆದಿದ್ದಾರೆ. ನಿಂಗಯ್ಯ ಒಡೆಯರ ಅವರ 5ನೇ ಸ್ನಾತಕೋತ್ತರ ಪರೀಕ್ಷೆ ಇದಾಗಿದ್ದು, ಅವರಲ್ಲಿ ಓದಿನ ಬಗ್ಗೆ ಇರುವ ಹಂಬಲ ಮತ್ತು ಇಚ್ಛಾಶಕ್ತಿ, ವಿದ್ಯಾಭ್ಯಾಸವನ್ನು ಅರ್ಧಕ್ಕೆ ಮೊಟಕುಗೊಳಿಸುವವರಿಗೆ ಮಾದರಿಯಾಗಿದೆ. ಇದನ್ನೂ ಓದಿ: ಕರೆಂಟ್ ಬಿಲ್ ಏರಿಕೆಯ ಬೆನ್ನಲ್ಲೇ ಸದ್ದಿಲ್ಲದೆ ಮದ್ಯ ಬೆಲೆ ಏರಿಕೆ ಮಾಡಿದ ಅಬಕಾರಿ ಇಲಾಖೆ

ಬಾಗಲಕೋಟೆ (Bagalkote) ಜಿಲ್ಲೆಯ ಇಳಕಲ್ (Ilkal) ತಾಲೂಕಿನ ಗುಡೂರು ಬಳಿಯ ಎಸ್‌ಸಿ ಹಳ್ಳಿಯವರಾಗಿರುವ ನಿಂಗಯ್ಯ ಒಡೆಯರ ಅವರಿಗೆ ಇಬ್ಬರು ಗಂಡು ಮತ್ತು ಓರ್ವ ಹೆಣ್ಣು ಮಗಳಿದ್ದಾಳೆ. ಅಲ್ಲದೇ ಐದು ಜನ ಮೊಮ್ಮಕ್ಕಳಿದ್ದಾರೆ. ಆದರೆ ಇವರ ವಿದ್ಯಾರ್ಜನೆಗೆ ಯಾವುದೂ ಅಡ್ಡಿಯಾಗಿಲ್ಲ. ಇವರ ಮಗಳು ಕೂಡ ಪಿಎಚ್‌ಡಿ (PhD) ಪದವಿ ಪಡೆದಿದ್ದಾರೆ. ಇನ್ನು ಗಂಡು ಮಕ್ಕಳು ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದ ಯಾತ್ರಿಕ ಹೃದಯಾಘಾತದಿಂದ ಸಾವು

ಸರ್ಕಾರಿ ನೌಕರಿಯಲ್ಲಿದ್ದ ಇವರು ಸೇವಾ ನಿವೃತ್ತಿಯ ನಂತರ ಮತ್ತಷ್ಟು ಕಲಿಯಬೇಕು ಎಂಬ ಹಂಬಲದಿಂದ ಈಗಾಗಲೇ ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ ಇಗ್ನೋದಿಂದ (IGNOU) ಸಮಾಜಶಾಸ್ತ್ರ ಸ್ನಾತಕೋತ್ತರ ಪದವಿಯನ್ನೂ ಇವರು ಪಡೆದಿದ್ದಾರೆ. ಆದರೂ ಇವರಿಗೆ ಓದುವ ಮತ್ತು ಪರೀಕ್ಷೆ ಬರೆಯುವ ಹವ್ಯಾಸ ಮಾತ್ರ ಕಡಿಮೆಯಾಗದಿರುವುದು ಗಮನಾರ್ಹವಾಗಿದೆ. ಇದನ್ನೂ ಓದಿ: ಇಲಿ ಕೊಲ್ಲಲೆಂದು ವಿಷ ಸವರಿ ಇಟ್ಟ ಹಣ್ಣು ತಿಂದು ಯುವತಿ ಸಾವು!

ತಮ್ಮ ಈ ಸಾಧನೆಗೆ ತಮ್ಮ ಧರ್ಮ ಪತ್ನಿ ಕಾರಣ ಎಂದು ಸಂತಸದಿಂದ ಹೇಳುವ ನಿಂಗಯ್ಯ ಒಡೆಯರ, 81ರ ಇಳಿ ವಯಸ್ಸಿನಲ್ಲಿಯೂ ಯೋಗಪಟುವಾಗಿದ್ದಾರೆ. ವಿಶಿಷ್ಠವಾದ ಸಾಹಸಗಳನ್ನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಇದೀಗ ನಡೆಯುತ್ತಿರುವ ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಂಗಯ್ಯ ಒಡೆಯರ ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಗಿದ್ದು, ಪರೀಕ್ಷೆಗೆ ಹಾಜರಾಗುತ್ತಿರುವ ಇತರ ಅಭ್ಯರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಇಗ್ನೋ ಅಧ್ಯಯನ ಕೇಂದ್ರದ ಸಂಯೋಜಕ ಡಾ. ನಿಂಗನಗೌಡ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ಕರಾವಳಿಯಿಂದ 640 ಕಿ.ಮೀ ದೂರದಲ್ಲಿರೋ ಬಿಪರ್ಜೋಯ್ ಚಂಡಮಾರುತ – ಕರ್ನಾಟಕ ಸೇರಿ 3 ರಾಜ್ಯಗಳಿಗೆ ಅಲರ್ಟ್

ನಿಂಗಯ್ಯ ಒಡೆಯರ ಅವರ ಈ ಹುಮ್ಮಸ್ಸಿನ ಬಗ್ಗೆ ಇಗ್ನೋ ಪ್ರಾಂತ ನಿರ್ದೇಶಕ ಡಾ.ಎ.ವರದರಾಜನ್, ಸಹಾಯಕ ನಿರ್ದೇಶಕ ಡಾ.ಬಿ.ಎನ್.ದೇವೇಂದ್ರ, ಬಿ.ಎಲ್.ಡಿ.ಇ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ, ಇಗ್ನೋ ಸಹ ಸಂಯೋಜಕ ಡಾ. ಸತೀಶ್ ನಡಗಡ್ಡಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಆರಂಭವಾಯ್ತಾ ದ್ವೇಷ ರಾಜಕಾರಣ?- ಪರೋಕ್ಷವಾಗಿ ಶ್ರೀರಾಮುಲುಗೆ ಎಚ್ಚರಿಕೆ ಕೊಟ್ಟ ಸಚಿವ ನಾಗೇಂದ್ರ

TAGGED:bagalkoteIGNOUIlkalMA Examold manvijayapuraಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯಇಳಕಲ್ಬಾಗಲಕೋಟೆಬಿಜಾಪುರವೃದ್ಧಸ್ನಾತಕೋತ್ತರ ಪರೀಕ್ಷೆ
Share This Article
Facebook Whatsapp Whatsapp Telegram

You Might Also Like

CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
9 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
46 minutes ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
52 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
1 hour ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
1 hour ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?