ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

Public TV
4 Min Read
naya gata hoon

ಹಾರ್ ನಹೀಂ ಮಾನೂಂಗಾ, ರಾರ್ ನಯೀ ಥಾನುಂಗಾ ಅಂದವರು ವಾಜಪೇಯಿ. ಗೀತ್ ನಹೀ ಗಾತಾ ಹೂಂ ಅಂದವ್ರೂ ಅವರೇ, ಗೀತ್ ನಯಾ ಗಾತಾ ಹೂಂ ಅಂತಾ ಹೇಳಿದವರು ಅದೇ ಅಟಲ್‍ಜೀ. ಭಾಷಣಕ್ಕೆ ನಿಂತ್ರೆ ಸ್ಪಟಿಕದಂತೆ ಸಿಡಿಯುವ ಅವರ ಸಾಲುಗಳನ್ನ ಹೇಗೆ ತಾನೆ ಮರೆಯೋಕೆ ಸಾಧ್ಯ..? ರಾಜಕೀಯದಲ್ಲಿ ಅಟಲ್‍ಜೀ ಸರ್ವೋತ್ತಮ ನಾಯಕನಾಗಿ ಎಲ್ಲರಿಂದ ಮೆಚ್ಚುಗೆ ಗಳಿಸಲು ಅವರೊಳಗಿದ್ದ ಒಬ್ಬ ಸಂವೇದನಾಶೀಲ ಕವಿ ಕೂಡಾ ಕಾರಣ. ಅವರು ನಮ್ಮಿಂದ ದೂರವಾದರೂ ಅವರ ಕವಿತೆಗಳು, ಪ್ರತಿಭಟನೆಯ ಸಾಲುಗಳು ಸದಾ ಅಟಲ್‍ಜೀ ಅವರನ್ನ ನಮ್ಮ ಹತ್ತಿರದಲ್ಲೇ ಇರಿಸುತ್ತವೆ. ಕವಿಯಾಗಿ ವಾಜಪೇಯಿ ನಮ್ಮೊಂದಿಗೆ ಹೇಗಿದ್ರು ಅನ್ನೋದನ್ನು ಹೇಳುತ್ತಾ ಅವರಿಗೆ ನಮ್ಮದೊಂದು ನುಡಿ ನಮನ ಇದು.

ಇತ್‍ನಾ ಕಾಫೀ ಹೈ, ಅಂತಿಮ್ ದಸ್ತಕ್ ಪರ್
ಖುದ್ ದರ್ವಾಜಾ ಖೋಲೇ…
ಅಪ್ನೇ ಹೀ ಮನ್ ಸೇ ಕುಛ್ ಬೋಲೇ…

(ಇಷ್ಟು ಮಾತ್ರವೇ ನನ್ನ ಇಚ್ಛೆ.. ಕೊನೆಯ ಕ್ಷಣಕ್ಕೆ ಬಾಗಿಲು ಬಡಿದ ದನಿ ಕೇಳಿದಾಗ, ನಾನೇ ಹೋಗಿ ಬಾಗಿಲು ತೆರೆಯುವೆ.. ನನ್ನ ಮನದೊಂದಿಗೇ ಒಂದಿಷ್ಟು ಮಾತನಾಡುವೆ.)

p030120001

ದೇಶದ ಪ್ರಧಾನಮಂತ್ರಿ ಹುದ್ದೆವರೆಗೆ ಏರಿದ್ರೂ, ಅಟಲ್ ಜೀ ಕೊನೆಗೂ ಕೇಳಿಕೊಂಡಿದ್ದು ಇಷ್ಟೇ. ಈ ಕವಿತೆಯನ್ನ ಕೇಳ್ತಿದ್ರೆ ಕವಿ ಮತ್ತು ಓದುಗನ ನಡುವಿನ ಅಂತರವೇ ಕರಗಿ ಹೋಗುತ್ತೆ. ವಾಜಪೇಯಿ ಅಂದ್ರೆನೇ ಹಾಗೆ, ಅವರೊಬ್ಬ ಗಾಢ ಮನಸ್ಸಿನ ಅತಿ ಸೂಕ್ಷ್ಮ ಸಂವೇದನಾಶೀಲ ಕವಿ. ಸ್ಪಟಿಕದಂತೆ ಪುಟಿಯುವ ಅವರ ಸಾಲುಗಳು ಯಾರನ್ನು ಪ್ರಭಾವಗೊಳಿಸಿಲ್ಲ ಹೇಳಿ. ಈ ವ್ಯವಸ್ಥೆ, ರಾಜಕೀಯವನ್ನ ನೋಡಿ ಹೀಗೆ ಹಾಡಿದ್ರು ಅಟಲ್ ಜೀ. ಹಾಗಂತ ಅಟಲ್‍ಜೀ ಅತ್ಯಂತ ಪ್ರತಿಭಟನಾತ್ಮಕ, ನಮ್ಮನ್ನ ಡಿಪ್ರೆಷನ್‍ಗೆ ಒಯ್ಯುವ ಕವಿ ಅಂದುಕೊಳ್ಳಬೇಡಿ. ಅವರು ಎಷ್ಟೊಂದು ಆಶಾವಾದಿ ಆಗಿದ್ರು ಅಂದ್ರೆ ನಮ್ಮನ್ನು ಹತಾಶೆಯಿಂದ ಭರವಸೆಯಡೆಗೆ ಕರೆದೊಯ್ತಿದ್ರು.

h250520033

ಹೊಸ ಗೀತೆ ಹಾಡುತ್ತೇನೆ ಅಂತಾನೇ ಅದನ್ನ ಮಾಡಿ ತೋರಿಸಿದವರು ಅಟಲ್‍ಜೀ. ಬಹುಷಃ ಬರೆದಂತೆ ಬದುಕಿದ ಅತಿ ವಿರಳ ಕವಿಗಳ ಸಾಲಿನಲ್ಲಿ ವಾಜಪೇಯಿ ಕೂಡಾ ಒಬ್ಬರು.. ತಮ್ಮ ಕವಿತೆಗಳಲ್ಲೇ ರಾಷ್ಟ್ರಪ್ರೇಮವನ್ನ ಮೆರೆಯುತ್ತಿದ್ರು. ಕೊನೆವರೆಗೂ ಕಟ್ಟಾ ಹಿಂದೂ, ರಾಷ್ಟ್ರಪ್ರೇಮಿ ಆಗಿಯೇ ಇದ್ರು. ಗಗನ್ ಮೇ ಲೆಹರ್‍ತಾ ಹೈ ಭಗವಾನ್ ಹಮಾರಾ ಅಂತ ನಮ್ಮ ಸಂಸ್ಕೃತಿಯನ್ನ ಹೆಮ್ಮೆಯಿಂದ ಹೇಳಿಕೊಂಡವರು ಅಟಲ್‍ಜೀ. ಅಷ್ಟೇ ನಮ್ಮ ಜನರ ಸ್ವಾರ್ಥವನ್ನ ಕಟುವಾಗಿ ಟೀಕಿಸಿದ್ರು.

ಭಾರತ್ ಜಮೀನ್ ಕಾ ತುಕ್ಡಾ ನಹೀಂ,
ಜೀತಾ ಜಾಗ್ ತಾ ರಾಷ್ಟ್ರ್ ಪುರುಷ್ ಹೇ
ಯೇ ವಂದನ್ ಕೀ ಭೂಮಿ ಹೇ
ಅಭಿನಂದನ್ ಕಿ ಭೂಮಿ ಹೇ
ಯೇ ತರ್ಪಣ್ ಕೀ ಭೂಮಿ ಹೇ
ಯೇ ಅರ್ಪಣ್ ಕೀ ಭೂಮಿ
ಇಸ್ ಕಾ ಕಂಕರ್ ಕಂಕರ್ ಶಂಕರ್ ಹೇ
ಇಸ್ ಕಾ ಬಿಂದು ಬಿಂದು ಗಂಗಾ ಜಲ್ ಹೇ
ಹಮ್ ಜೀಯೇಂಗೇತೋ ಇಸ್ ಕೇ ಲಿಯೇ,
ಹಮ್ ಮರೇಂಗೇ ತೋ ಇಸ್ ಕೇ ಲಿಯೇ..

(ಭಾರತ ಕೇವಲ ಒಂದು ಜಮೀನಿನ ತುಂಡಲ್ಲ, ಅದು ಗೆಲ್ಲುತ್ತಾ, ಎಚ್ಚರದಿಂದಿರುವ ಜಾಗೃತ ರಾಷ್ಟ್ರ ಪುರುಷ. ಅದು ವಂದಿಸುವ ಭೂಮಿ, ಅಭಿನಂದಿಸುವ ಭೂಮಿ. ಅದು ತರ್ಪಣದ ಭೂಮಿ, ಅರ್ಪಣೆಯ ಭೂಮಿ. ಇದರ ಕಣ ಕಣದಲ್ಲಿಯೂ ಶಂಕರನಿದ್ದಾನೆ.. ಇದರ ಹನಿ ಹನಿಯಲ್ಲೂ ಗಂಗಾಜಲವಿದೆ. ನಾವು ಬದುಕುವುದಾದರೆ ಭಾರತಕ್ಕಾಗಿ, ನಾವು ಸಾಯುವುದಾದರೆ ಭಾರತಕ್ಕಾಗಿ.)

ಪಾಂಚ್ ಹಜಾರ್ ಸಾಲ್ ಕೀ ಸಂಸ್ಕೃತಿ:
ಗರ್ವ ಕರೇಂ ಯಾ ರೋಯೇ?
ಸ್ವಾರ್ಥ್ ಕೀ ದೌಡ್ ಮೇ, ಕಹೀಂ ಆಜಾದಿ ಫಿರ್ ನಾ ಖೋಯೇಂ.

(ಐದು ಸಾವಿರ ವರ್ಷಗಳ ಸಂಸ್ಕೃತಿ. ಇದರ ಮೇಲೆ ಗರ್ವ ಮಾಡಲೋ, ಇಲ್ಲಾ ಕಣ್ಣೀರು ಹಾಕಲೋ.. ಸ್ವಾರ್ಥದ ಈ ಓಟದಲ್ಲಿ ಭಾರತ ಮತ್ತೊಮ್ಮೆ ತನ್ನ ಸ್ವಾತಂತ್ರ್ಯ ಕಳೆದುಕೊಳ್ಳಲಿಕ್ಕಿಲ್ಲವೇ.?)

ಹಲವು ರಾಜಕೀಯ ಏಳು ಬೀಳುಗಳನ್ನ ಕಂಡ ವಾಜಪೇಯಿ, ಪಾಕಿಸ್ತಾನ ಭಾರತವನ್ನು ಕೆಣಕಿದಾಗ ತಮ್ಮ ಪ್ರತಿಭಟನಾತ್ಮಕ ಸಾಲುಗಳ ಮೂಲಕವೇ ಬುದ್ಧಿ ಹೇಳಿದವರು.. ಏಕ್ ನಹೀ ದೋ ನಹೀ ಕರೋ ಬೀಸೋ ಸಮ್‍ಜೋತೆ.. ಪರ್ ಸ್ವತಂತ್ರ ಭಾರತ್ ಕಾ ಮಸ್ತಕ್ ಕಭೀ ನಹೀ ಚುಕೆಗಾ ಅಂತ ಅಮೆರಿಕಾಕ್ಕೆ ಎಚ್ಚರಿಕೆ ನೀಡಿದ್ರು. ಆಜಾದಿ ಅನ್ಮೊಲ್ ನಹೀ ಇಸ್ ಕಾ ಮೋಲ್ ಲಗಾವ್ ಅಂತ ಪಾಕಿಸ್ತಾನಕ್ಕೆ ಪಾಠ ಹೇಳಿದ್ರು.

atal bihari vajpayee2 2

ಈ ಎಲ್ಲ ಸಾಲುಗಳು ವಾಜಪೇಯಿ ಅವರನ್ನ ಮತ್ತೆ ಮತ್ತೆ ನೆನಪಿಸುತ್ತವೆ. ವಾದ ಪ್ರತಿವಾದಕ್ಕೆ ಅವರ ಅರ್ಥಪೂರ್ಣ ಕವಿತೆಗಳು ಎಂಥವರನ್ನು ಎದ್ದು ನಿಲ್ಲುವಂತೆ ಮಾಡುತ್ತೆ.. ಹಾಗೆ ಅವರೊಬ್ಬ ಸಂವೇದನಾಶೀಲ ಕವಿ ಆಗಿದ್ರು.. ಅವರ ಊಂಛಾಯೀ ಅನ್ನೋ ಕವಿತೆಯಲ್ಲಿ ಒಂದು ಕಡೆ ಅವರ ಸರಳತೆಯನ್ನ ಪ್ರದರ್ಶಿದ್ದು ಹೀಗೆ..

ಮೇರೆ ಪ್ರಭು, ಮುಝೆ ಇತ್ ನೀ ಊಂಛಾಯೀ ಕಭಿ ಮತ್ ದೇನಾ,
ಗೈರೋಂ ಕೊ ಗಲೇ ಲಾ ಲಗಾ ಸಕೊಂ,
ಇತ್ ನೀ ರುಖಾಯೇ ಕಭಿ ಮತ್ ದೇನಾ.

(ಓ ಪ್ರಭು, ನನ್ನನ್ನ ಇಷ್ಟೊಂದು ಎತ್ತರದವನಾಗಿ ಎಂದೂ ಮಾಡಬೇಡ, ನನ್ನ ಜನರನ್ನ ಅಪ್ಪಿಕೊಳ್ಳಲು ಆಗದಷ್ಟು ಒಣ ಮನಸ್ಸಿನವನಾಗಿ, ಎಂದೂ ಮಾಡಬೇಡ)

dogg

ಹಲವು ಬಾರಿ ವಾಜಪೇಯಿ ಕವಿಯಾಗಿ ಹಲವು ಸಾಲುಗಳನ್ನ ಹೇಳಿದ್ದಾರೆ, ಬರೆದಿದ್ದಾರೆ. ಬಿಜೆಪಿ ಒಡೆದು ಹೋದಾಗ ಕದಮ್ ಮಿಲಾಕರ್ ಚಲ್‍ನಾ ಹೋಗಾ ಅಂತ ಹಾಡಿದವರು ವಾಜಪೇಯಿ. ಸಿಕ್ಕ ಸಮಯದಲ್ಲಿ ಮಾನವೀಯತೆ, ಮೌಲ್ಯಗಳು ಸಂವೇದನಾಶೀಲತೆಯನ್ನ ಮೆರೆದವರು ಎಲ್ಲರ ಪ್ರೀತಿಯ ಅಟಲ್‍ಜೀ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *