Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

Latest

ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

Public TV
Last updated: August 16, 2018 8:07 pm
Public TV
Share
4 Min Read
naya gata hoon
SHARE

ಹಾರ್ ನಹೀಂ ಮಾನೂಂಗಾ, ರಾರ್ ನಯೀ ಥಾನುಂಗಾ ಅಂದವರು ವಾಜಪೇಯಿ. ಗೀತ್ ನಹೀ ಗಾತಾ ಹೂಂ ಅಂದವ್ರೂ ಅವರೇ, ಗೀತ್ ನಯಾ ಗಾತಾ ಹೂಂ ಅಂತಾ ಹೇಳಿದವರು ಅದೇ ಅಟಲ್‍ಜೀ. ಭಾಷಣಕ್ಕೆ ನಿಂತ್ರೆ ಸ್ಪಟಿಕದಂತೆ ಸಿಡಿಯುವ ಅವರ ಸಾಲುಗಳನ್ನ ಹೇಗೆ ತಾನೆ ಮರೆಯೋಕೆ ಸಾಧ್ಯ..? ರಾಜಕೀಯದಲ್ಲಿ ಅಟಲ್‍ಜೀ ಸರ್ವೋತ್ತಮ ನಾಯಕನಾಗಿ ಎಲ್ಲರಿಂದ ಮೆಚ್ಚುಗೆ ಗಳಿಸಲು ಅವರೊಳಗಿದ್ದ ಒಬ್ಬ ಸಂವೇದನಾಶೀಲ ಕವಿ ಕೂಡಾ ಕಾರಣ. ಅವರು ನಮ್ಮಿಂದ ದೂರವಾದರೂ ಅವರ ಕವಿತೆಗಳು, ಪ್ರತಿಭಟನೆಯ ಸಾಲುಗಳು ಸದಾ ಅಟಲ್‍ಜೀ ಅವರನ್ನ ನಮ್ಮ ಹತ್ತಿರದಲ್ಲೇ ಇರಿಸುತ್ತವೆ. ಕವಿಯಾಗಿ ವಾಜಪೇಯಿ ನಮ್ಮೊಂದಿಗೆ ಹೇಗಿದ್ರು ಅನ್ನೋದನ್ನು ಹೇಳುತ್ತಾ ಅವರಿಗೆ ನಮ್ಮದೊಂದು ನುಡಿ ನಮನ ಇದು.

ಇತ್‍ನಾ ಕಾಫೀ ಹೈ, ಅಂತಿಮ್ ದಸ್ತಕ್ ಪರ್
ಖುದ್ ದರ್ವಾಜಾ ಖೋಲೇ…
ಅಪ್ನೇ ಹೀ ಮನ್ ಸೇ ಕುಛ್ ಬೋಲೇ…

(ಇಷ್ಟು ಮಾತ್ರವೇ ನನ್ನ ಇಚ್ಛೆ.. ಕೊನೆಯ ಕ್ಷಣಕ್ಕೆ ಬಾಗಿಲು ಬಡಿದ ದನಿ ಕೇಳಿದಾಗ, ನಾನೇ ಹೋಗಿ ಬಾಗಿಲು ತೆರೆಯುವೆ.. ನನ್ನ ಮನದೊಂದಿಗೇ ಒಂದಿಷ್ಟು ಮಾತನಾಡುವೆ.)

p030120001

ದೇಶದ ಪ್ರಧಾನಮಂತ್ರಿ ಹುದ್ದೆವರೆಗೆ ಏರಿದ್ರೂ, ಅಟಲ್ ಜೀ ಕೊನೆಗೂ ಕೇಳಿಕೊಂಡಿದ್ದು ಇಷ್ಟೇ. ಈ ಕವಿತೆಯನ್ನ ಕೇಳ್ತಿದ್ರೆ ಕವಿ ಮತ್ತು ಓದುಗನ ನಡುವಿನ ಅಂತರವೇ ಕರಗಿ ಹೋಗುತ್ತೆ. ವಾಜಪೇಯಿ ಅಂದ್ರೆನೇ ಹಾಗೆ, ಅವರೊಬ್ಬ ಗಾಢ ಮನಸ್ಸಿನ ಅತಿ ಸೂಕ್ಷ್ಮ ಸಂವೇದನಾಶೀಲ ಕವಿ. ಸ್ಪಟಿಕದಂತೆ ಪುಟಿಯುವ ಅವರ ಸಾಲುಗಳು ಯಾರನ್ನು ಪ್ರಭಾವಗೊಳಿಸಿಲ್ಲ ಹೇಳಿ. ಈ ವ್ಯವಸ್ಥೆ, ರಾಜಕೀಯವನ್ನ ನೋಡಿ ಹೀಗೆ ಹಾಡಿದ್ರು ಅಟಲ್ ಜೀ. ಹಾಗಂತ ಅಟಲ್‍ಜೀ ಅತ್ಯಂತ ಪ್ರತಿಭಟನಾತ್ಮಕ, ನಮ್ಮನ್ನ ಡಿಪ್ರೆಷನ್‍ಗೆ ಒಯ್ಯುವ ಕವಿ ಅಂದುಕೊಳ್ಳಬೇಡಿ. ಅವರು ಎಷ್ಟೊಂದು ಆಶಾವಾದಿ ಆಗಿದ್ರು ಅಂದ್ರೆ ನಮ್ಮನ್ನು ಹತಾಶೆಯಿಂದ ಭರವಸೆಯಡೆಗೆ ಕರೆದೊಯ್ತಿದ್ರು.

h250520033

ಹೊಸ ಗೀತೆ ಹಾಡುತ್ತೇನೆ ಅಂತಾನೇ ಅದನ್ನ ಮಾಡಿ ತೋರಿಸಿದವರು ಅಟಲ್‍ಜೀ. ಬಹುಷಃ ಬರೆದಂತೆ ಬದುಕಿದ ಅತಿ ವಿರಳ ಕವಿಗಳ ಸಾಲಿನಲ್ಲಿ ವಾಜಪೇಯಿ ಕೂಡಾ ಒಬ್ಬರು.. ತಮ್ಮ ಕವಿತೆಗಳಲ್ಲೇ ರಾಷ್ಟ್ರಪ್ರೇಮವನ್ನ ಮೆರೆಯುತ್ತಿದ್ರು. ಕೊನೆವರೆಗೂ ಕಟ್ಟಾ ಹಿಂದೂ, ರಾಷ್ಟ್ರಪ್ರೇಮಿ ಆಗಿಯೇ ಇದ್ರು. ಗಗನ್ ಮೇ ಲೆಹರ್‍ತಾ ಹೈ ಭಗವಾನ್ ಹಮಾರಾ ಅಂತ ನಮ್ಮ ಸಂಸ್ಕೃತಿಯನ್ನ ಹೆಮ್ಮೆಯಿಂದ ಹೇಳಿಕೊಂಡವರು ಅಟಲ್‍ಜೀ. ಅಷ್ಟೇ ನಮ್ಮ ಜನರ ಸ್ವಾರ್ಥವನ್ನ ಕಟುವಾಗಿ ಟೀಕಿಸಿದ್ರು.

ಭಾರತ್ ಜಮೀನ್ ಕಾ ತುಕ್ಡಾ ನಹೀಂ,
ಜೀತಾ ಜಾಗ್ ತಾ ರಾಷ್ಟ್ರ್ ಪುರುಷ್ ಹೇ
ಯೇ ವಂದನ್ ಕೀ ಭೂಮಿ ಹೇ
ಅಭಿನಂದನ್ ಕಿ ಭೂಮಿ ಹೇ
ಯೇ ತರ್ಪಣ್ ಕೀ ಭೂಮಿ ಹೇ
ಯೇ ಅರ್ಪಣ್ ಕೀ ಭೂಮಿ
ಇಸ್ ಕಾ ಕಂಕರ್ ಕಂಕರ್ ಶಂಕರ್ ಹೇ
ಇಸ್ ಕಾ ಬಿಂದು ಬಿಂದು ಗಂಗಾ ಜಲ್ ಹೇ
ಹಮ್ ಜೀಯೇಂಗೇತೋ ಇಸ್ ಕೇ ಲಿಯೇ,
ಹಮ್ ಮರೇಂಗೇ ತೋ ಇಸ್ ಕೇ ಲಿಯೇ..

(ಭಾರತ ಕೇವಲ ಒಂದು ಜಮೀನಿನ ತುಂಡಲ್ಲ, ಅದು ಗೆಲ್ಲುತ್ತಾ, ಎಚ್ಚರದಿಂದಿರುವ ಜಾಗೃತ ರಾಷ್ಟ್ರ ಪುರುಷ. ಅದು ವಂದಿಸುವ ಭೂಮಿ, ಅಭಿನಂದಿಸುವ ಭೂಮಿ. ಅದು ತರ್ಪಣದ ಭೂಮಿ, ಅರ್ಪಣೆಯ ಭೂಮಿ. ಇದರ ಕಣ ಕಣದಲ್ಲಿಯೂ ಶಂಕರನಿದ್ದಾನೆ.. ಇದರ ಹನಿ ಹನಿಯಲ್ಲೂ ಗಂಗಾಜಲವಿದೆ. ನಾವು ಬದುಕುವುದಾದರೆ ಭಾರತಕ್ಕಾಗಿ, ನಾವು ಸಾಯುವುದಾದರೆ ಭಾರತಕ್ಕಾಗಿ.)

ಪಾಂಚ್ ಹಜಾರ್ ಸಾಲ್ ಕೀ ಸಂಸ್ಕೃತಿ:
ಗರ್ವ ಕರೇಂ ಯಾ ರೋಯೇ?
ಸ್ವಾರ್ಥ್ ಕೀ ದೌಡ್ ಮೇ, ಕಹೀಂ ಆಜಾದಿ ಫಿರ್ ನಾ ಖೋಯೇಂ.

(ಐದು ಸಾವಿರ ವರ್ಷಗಳ ಸಂಸ್ಕೃತಿ. ಇದರ ಮೇಲೆ ಗರ್ವ ಮಾಡಲೋ, ಇಲ್ಲಾ ಕಣ್ಣೀರು ಹಾಕಲೋ.. ಸ್ವಾರ್ಥದ ಈ ಓಟದಲ್ಲಿ ಭಾರತ ಮತ್ತೊಮ್ಮೆ ತನ್ನ ಸ್ವಾತಂತ್ರ್ಯ ಕಳೆದುಕೊಳ್ಳಲಿಕ್ಕಿಲ್ಲವೇ.?)

ಹಲವು ರಾಜಕೀಯ ಏಳು ಬೀಳುಗಳನ್ನ ಕಂಡ ವಾಜಪೇಯಿ, ಪಾಕಿಸ್ತಾನ ಭಾರತವನ್ನು ಕೆಣಕಿದಾಗ ತಮ್ಮ ಪ್ರತಿಭಟನಾತ್ಮಕ ಸಾಲುಗಳ ಮೂಲಕವೇ ಬುದ್ಧಿ ಹೇಳಿದವರು.. ಏಕ್ ನಹೀ ದೋ ನಹೀ ಕರೋ ಬೀಸೋ ಸಮ್‍ಜೋತೆ.. ಪರ್ ಸ್ವತಂತ್ರ ಭಾರತ್ ಕಾ ಮಸ್ತಕ್ ಕಭೀ ನಹೀ ಚುಕೆಗಾ ಅಂತ ಅಮೆರಿಕಾಕ್ಕೆ ಎಚ್ಚರಿಕೆ ನೀಡಿದ್ರು. ಆಜಾದಿ ಅನ್ಮೊಲ್ ನಹೀ ಇಸ್ ಕಾ ಮೋಲ್ ಲಗಾವ್ ಅಂತ ಪಾಕಿಸ್ತಾನಕ್ಕೆ ಪಾಠ ಹೇಳಿದ್ರು.

atal bihari vajpayee2 2

ಈ ಎಲ್ಲ ಸಾಲುಗಳು ವಾಜಪೇಯಿ ಅವರನ್ನ ಮತ್ತೆ ಮತ್ತೆ ನೆನಪಿಸುತ್ತವೆ. ವಾದ ಪ್ರತಿವಾದಕ್ಕೆ ಅವರ ಅರ್ಥಪೂರ್ಣ ಕವಿತೆಗಳು ಎಂಥವರನ್ನು ಎದ್ದು ನಿಲ್ಲುವಂತೆ ಮಾಡುತ್ತೆ.. ಹಾಗೆ ಅವರೊಬ್ಬ ಸಂವೇದನಾಶೀಲ ಕವಿ ಆಗಿದ್ರು.. ಅವರ ಊಂಛಾಯೀ ಅನ್ನೋ ಕವಿತೆಯಲ್ಲಿ ಒಂದು ಕಡೆ ಅವರ ಸರಳತೆಯನ್ನ ಪ್ರದರ್ಶಿದ್ದು ಹೀಗೆ..

ಮೇರೆ ಪ್ರಭು, ಮುಝೆ ಇತ್ ನೀ ಊಂಛಾಯೀ ಕಭಿ ಮತ್ ದೇನಾ,
ಗೈರೋಂ ಕೊ ಗಲೇ ಲಾ ಲಗಾ ಸಕೊಂ,
ಇತ್ ನೀ ರುಖಾಯೇ ಕಭಿ ಮತ್ ದೇನಾ.

(ಓ ಪ್ರಭು, ನನ್ನನ್ನ ಇಷ್ಟೊಂದು ಎತ್ತರದವನಾಗಿ ಎಂದೂ ಮಾಡಬೇಡ, ನನ್ನ ಜನರನ್ನ ಅಪ್ಪಿಕೊಳ್ಳಲು ಆಗದಷ್ಟು ಒಣ ಮನಸ್ಸಿನವನಾಗಿ, ಎಂದೂ ಮಾಡಬೇಡ)

dogg

ಹಲವು ಬಾರಿ ವಾಜಪೇಯಿ ಕವಿಯಾಗಿ ಹಲವು ಸಾಲುಗಳನ್ನ ಹೇಳಿದ್ದಾರೆ, ಬರೆದಿದ್ದಾರೆ. ಬಿಜೆಪಿ ಒಡೆದು ಹೋದಾಗ ಕದಮ್ ಮಿಲಾಕರ್ ಚಲ್‍ನಾ ಹೋಗಾ ಅಂತ ಹಾಡಿದವರು ವಾಜಪೇಯಿ. ಸಿಕ್ಕ ಸಮಯದಲ್ಲಿ ಮಾನವೀಯತೆ, ಮೌಲ್ಯಗಳು ಸಂವೇದನಾಶೀಲತೆಯನ್ನ ಮೆರೆದವರು ಎಲ್ಲರ ಪ್ರೀತಿಯ ಅಟಲ್‍ಜೀ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari Vajpayeeformer Prime Ministernaya gata hoonpoetPublic TVSchool Daysಅಜಾತ ಶತ್ರುಅಟಲ್ ಕವಿತೆಅಟಲ್ ಬಾಲ್ಯಅಟಲ್ ಬಿಹಾರಿ ವಾಜಪೇಯಿಅಟಲ್ ಶಾಲಾ ದಿನಗೀತ್ ನಯಾ ಗಾತಾ ಹೂಂಪಬ್ಲಿಕ್ ಟಿವಿಮಾಜಿ ಪ್ರಧಾನಿವಾಜಪೇಯಿ ಕವಿವಾಜಪೇಯಿ ಕವಿತೆವಾಜಪೇಯಿ ಬಾಲ್ಯ
Share This Article
Facebook Whatsapp Whatsapp Telegram

Cinema news

prakash raj
ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Bengaluru City Cinema Districts Karnataka Latest Sandalwood Top Stories
Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood

You Might Also Like

virat kohli 4
Bengaluru City

ಬೆಂಗಳೂರಿನಲ್ಲೇ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ!

Public TV
By Public TV
12 minutes ago
rahul gandhi kn rajanna
Bengaluru City

ರಾಹುಲ್ ಗಾಂಧಿಗೆ ಕೆ.ಎನ್.ರಾಜಣ್ಣ ಪತ್ರ – ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್

Public TV
By Public TV
40 minutes ago
Chitradurga Pregnant Suicide
Chitradurga

ಕೌಟುಂಬಿಕ ಕಲಹ – 2 ತಿಂಗಳ ಗರ್ಭಿಣಿ ನೇಣಿಗೆ ಶರಣು

Public TV
By Public TV
42 minutes ago
Hassan Retired soldier Suicide
Bengaluru City

ಮಾನಸಿಕ ಖಿನ್ನತೆ – ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

Public TV
By Public TV
46 minutes ago
Kannada professor thief arrested 262 grams of gold ornaments and cash worth Rs. 32 lakh seized from the arrested woman bengaluu Police
Bengaluru City

ವೀಕ್ ಡೇಸ್‌ನಲ್ಲಿ ಕನ್ನಡ ಪ್ರೊಫೆಸರ್, ವೀಕೆಂಡ್‌ನಲ್ಲಿ ಖರ್ತನಾಕ್ ಕಳ್ಳಿ – ಮದ್ವೆ ಮನೆಯೇ ಟಾರ್ಗೆಟ್‌!

Public TV
By Public TV
1 hour ago
Chamarajanagar Leopard Cage
Chamarajanagar

ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?