Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

Latest

ವಾಜಪೇಯಿಯ ಕವಿ ಸಮಯ: ಕೇಳಿ ಆ ಮಧುರ ಕಂಠದಲಿ ಕವಿತೆ- ವಿಡಿಯೋ ನೋಡಿ

Public TV
Last updated: August 16, 2018 8:07 pm
Public TV
Share
4 Min Read
naya gata hoon
SHARE

ಹಾರ್ ನಹೀಂ ಮಾನೂಂಗಾ, ರಾರ್ ನಯೀ ಥಾನುಂಗಾ ಅಂದವರು ವಾಜಪೇಯಿ. ಗೀತ್ ನಹೀ ಗಾತಾ ಹೂಂ ಅಂದವ್ರೂ ಅವರೇ, ಗೀತ್ ನಯಾ ಗಾತಾ ಹೂಂ ಅಂತಾ ಹೇಳಿದವರು ಅದೇ ಅಟಲ್‍ಜೀ. ಭಾಷಣಕ್ಕೆ ನಿಂತ್ರೆ ಸ್ಪಟಿಕದಂತೆ ಸಿಡಿಯುವ ಅವರ ಸಾಲುಗಳನ್ನ ಹೇಗೆ ತಾನೆ ಮರೆಯೋಕೆ ಸಾಧ್ಯ..? ರಾಜಕೀಯದಲ್ಲಿ ಅಟಲ್‍ಜೀ ಸರ್ವೋತ್ತಮ ನಾಯಕನಾಗಿ ಎಲ್ಲರಿಂದ ಮೆಚ್ಚುಗೆ ಗಳಿಸಲು ಅವರೊಳಗಿದ್ದ ಒಬ್ಬ ಸಂವೇದನಾಶೀಲ ಕವಿ ಕೂಡಾ ಕಾರಣ. ಅವರು ನಮ್ಮಿಂದ ದೂರವಾದರೂ ಅವರ ಕವಿತೆಗಳು, ಪ್ರತಿಭಟನೆಯ ಸಾಲುಗಳು ಸದಾ ಅಟಲ್‍ಜೀ ಅವರನ್ನ ನಮ್ಮ ಹತ್ತಿರದಲ್ಲೇ ಇರಿಸುತ್ತವೆ. ಕವಿಯಾಗಿ ವಾಜಪೇಯಿ ನಮ್ಮೊಂದಿಗೆ ಹೇಗಿದ್ರು ಅನ್ನೋದನ್ನು ಹೇಳುತ್ತಾ ಅವರಿಗೆ ನಮ್ಮದೊಂದು ನುಡಿ ನಮನ ಇದು.

ಇತ್‍ನಾ ಕಾಫೀ ಹೈ, ಅಂತಿಮ್ ದಸ್ತಕ್ ಪರ್
ಖುದ್ ದರ್ವಾಜಾ ಖೋಲೇ…
ಅಪ್ನೇ ಹೀ ಮನ್ ಸೇ ಕುಛ್ ಬೋಲೇ…

(ಇಷ್ಟು ಮಾತ್ರವೇ ನನ್ನ ಇಚ್ಛೆ.. ಕೊನೆಯ ಕ್ಷಣಕ್ಕೆ ಬಾಗಿಲು ಬಡಿದ ದನಿ ಕೇಳಿದಾಗ, ನಾನೇ ಹೋಗಿ ಬಾಗಿಲು ತೆರೆಯುವೆ.. ನನ್ನ ಮನದೊಂದಿಗೇ ಒಂದಿಷ್ಟು ಮಾತನಾಡುವೆ.)

p030120001

ದೇಶದ ಪ್ರಧಾನಮಂತ್ರಿ ಹುದ್ದೆವರೆಗೆ ಏರಿದ್ರೂ, ಅಟಲ್ ಜೀ ಕೊನೆಗೂ ಕೇಳಿಕೊಂಡಿದ್ದು ಇಷ್ಟೇ. ಈ ಕವಿತೆಯನ್ನ ಕೇಳ್ತಿದ್ರೆ ಕವಿ ಮತ್ತು ಓದುಗನ ನಡುವಿನ ಅಂತರವೇ ಕರಗಿ ಹೋಗುತ್ತೆ. ವಾಜಪೇಯಿ ಅಂದ್ರೆನೇ ಹಾಗೆ, ಅವರೊಬ್ಬ ಗಾಢ ಮನಸ್ಸಿನ ಅತಿ ಸೂಕ್ಷ್ಮ ಸಂವೇದನಾಶೀಲ ಕವಿ. ಸ್ಪಟಿಕದಂತೆ ಪುಟಿಯುವ ಅವರ ಸಾಲುಗಳು ಯಾರನ್ನು ಪ್ರಭಾವಗೊಳಿಸಿಲ್ಲ ಹೇಳಿ. ಈ ವ್ಯವಸ್ಥೆ, ರಾಜಕೀಯವನ್ನ ನೋಡಿ ಹೀಗೆ ಹಾಡಿದ್ರು ಅಟಲ್ ಜೀ. ಹಾಗಂತ ಅಟಲ್‍ಜೀ ಅತ್ಯಂತ ಪ್ರತಿಭಟನಾತ್ಮಕ, ನಮ್ಮನ್ನ ಡಿಪ್ರೆಷನ್‍ಗೆ ಒಯ್ಯುವ ಕವಿ ಅಂದುಕೊಳ್ಳಬೇಡಿ. ಅವರು ಎಷ್ಟೊಂದು ಆಶಾವಾದಿ ಆಗಿದ್ರು ಅಂದ್ರೆ ನಮ್ಮನ್ನು ಹತಾಶೆಯಿಂದ ಭರವಸೆಯಡೆಗೆ ಕರೆದೊಯ್ತಿದ್ರು.

h250520033

ಹೊಸ ಗೀತೆ ಹಾಡುತ್ತೇನೆ ಅಂತಾನೇ ಅದನ್ನ ಮಾಡಿ ತೋರಿಸಿದವರು ಅಟಲ್‍ಜೀ. ಬಹುಷಃ ಬರೆದಂತೆ ಬದುಕಿದ ಅತಿ ವಿರಳ ಕವಿಗಳ ಸಾಲಿನಲ್ಲಿ ವಾಜಪೇಯಿ ಕೂಡಾ ಒಬ್ಬರು.. ತಮ್ಮ ಕವಿತೆಗಳಲ್ಲೇ ರಾಷ್ಟ್ರಪ್ರೇಮವನ್ನ ಮೆರೆಯುತ್ತಿದ್ರು. ಕೊನೆವರೆಗೂ ಕಟ್ಟಾ ಹಿಂದೂ, ರಾಷ್ಟ್ರಪ್ರೇಮಿ ಆಗಿಯೇ ಇದ್ರು. ಗಗನ್ ಮೇ ಲೆಹರ್‍ತಾ ಹೈ ಭಗವಾನ್ ಹಮಾರಾ ಅಂತ ನಮ್ಮ ಸಂಸ್ಕೃತಿಯನ್ನ ಹೆಮ್ಮೆಯಿಂದ ಹೇಳಿಕೊಂಡವರು ಅಟಲ್‍ಜೀ. ಅಷ್ಟೇ ನಮ್ಮ ಜನರ ಸ್ವಾರ್ಥವನ್ನ ಕಟುವಾಗಿ ಟೀಕಿಸಿದ್ರು.

ಭಾರತ್ ಜಮೀನ್ ಕಾ ತುಕ್ಡಾ ನಹೀಂ,
ಜೀತಾ ಜಾಗ್ ತಾ ರಾಷ್ಟ್ರ್ ಪುರುಷ್ ಹೇ
ಯೇ ವಂದನ್ ಕೀ ಭೂಮಿ ಹೇ
ಅಭಿನಂದನ್ ಕಿ ಭೂಮಿ ಹೇ
ಯೇ ತರ್ಪಣ್ ಕೀ ಭೂಮಿ ಹೇ
ಯೇ ಅರ್ಪಣ್ ಕೀ ಭೂಮಿ
ಇಸ್ ಕಾ ಕಂಕರ್ ಕಂಕರ್ ಶಂಕರ್ ಹೇ
ಇಸ್ ಕಾ ಬಿಂದು ಬಿಂದು ಗಂಗಾ ಜಲ್ ಹೇ
ಹಮ್ ಜೀಯೇಂಗೇತೋ ಇಸ್ ಕೇ ಲಿಯೇ,
ಹಮ್ ಮರೇಂಗೇ ತೋ ಇಸ್ ಕೇ ಲಿಯೇ..

(ಭಾರತ ಕೇವಲ ಒಂದು ಜಮೀನಿನ ತುಂಡಲ್ಲ, ಅದು ಗೆಲ್ಲುತ್ತಾ, ಎಚ್ಚರದಿಂದಿರುವ ಜಾಗೃತ ರಾಷ್ಟ್ರ ಪುರುಷ. ಅದು ವಂದಿಸುವ ಭೂಮಿ, ಅಭಿನಂದಿಸುವ ಭೂಮಿ. ಅದು ತರ್ಪಣದ ಭೂಮಿ, ಅರ್ಪಣೆಯ ಭೂಮಿ. ಇದರ ಕಣ ಕಣದಲ್ಲಿಯೂ ಶಂಕರನಿದ್ದಾನೆ.. ಇದರ ಹನಿ ಹನಿಯಲ್ಲೂ ಗಂಗಾಜಲವಿದೆ. ನಾವು ಬದುಕುವುದಾದರೆ ಭಾರತಕ್ಕಾಗಿ, ನಾವು ಸಾಯುವುದಾದರೆ ಭಾರತಕ್ಕಾಗಿ.)

ಪಾಂಚ್ ಹಜಾರ್ ಸಾಲ್ ಕೀ ಸಂಸ್ಕೃತಿ:
ಗರ್ವ ಕರೇಂ ಯಾ ರೋಯೇ?
ಸ್ವಾರ್ಥ್ ಕೀ ದೌಡ್ ಮೇ, ಕಹೀಂ ಆಜಾದಿ ಫಿರ್ ನಾ ಖೋಯೇಂ.

(ಐದು ಸಾವಿರ ವರ್ಷಗಳ ಸಂಸ್ಕೃತಿ. ಇದರ ಮೇಲೆ ಗರ್ವ ಮಾಡಲೋ, ಇಲ್ಲಾ ಕಣ್ಣೀರು ಹಾಕಲೋ.. ಸ್ವಾರ್ಥದ ಈ ಓಟದಲ್ಲಿ ಭಾರತ ಮತ್ತೊಮ್ಮೆ ತನ್ನ ಸ್ವಾತಂತ್ರ್ಯ ಕಳೆದುಕೊಳ್ಳಲಿಕ್ಕಿಲ್ಲವೇ.?)

ಹಲವು ರಾಜಕೀಯ ಏಳು ಬೀಳುಗಳನ್ನ ಕಂಡ ವಾಜಪೇಯಿ, ಪಾಕಿಸ್ತಾನ ಭಾರತವನ್ನು ಕೆಣಕಿದಾಗ ತಮ್ಮ ಪ್ರತಿಭಟನಾತ್ಮಕ ಸಾಲುಗಳ ಮೂಲಕವೇ ಬುದ್ಧಿ ಹೇಳಿದವರು.. ಏಕ್ ನಹೀ ದೋ ನಹೀ ಕರೋ ಬೀಸೋ ಸಮ್‍ಜೋತೆ.. ಪರ್ ಸ್ವತಂತ್ರ ಭಾರತ್ ಕಾ ಮಸ್ತಕ್ ಕಭೀ ನಹೀ ಚುಕೆಗಾ ಅಂತ ಅಮೆರಿಕಾಕ್ಕೆ ಎಚ್ಚರಿಕೆ ನೀಡಿದ್ರು. ಆಜಾದಿ ಅನ್ಮೊಲ್ ನಹೀ ಇಸ್ ಕಾ ಮೋಲ್ ಲಗಾವ್ ಅಂತ ಪಾಕಿಸ್ತಾನಕ್ಕೆ ಪಾಠ ಹೇಳಿದ್ರು.

atal bihari vajpayee2 2

ಈ ಎಲ್ಲ ಸಾಲುಗಳು ವಾಜಪೇಯಿ ಅವರನ್ನ ಮತ್ತೆ ಮತ್ತೆ ನೆನಪಿಸುತ್ತವೆ. ವಾದ ಪ್ರತಿವಾದಕ್ಕೆ ಅವರ ಅರ್ಥಪೂರ್ಣ ಕವಿತೆಗಳು ಎಂಥವರನ್ನು ಎದ್ದು ನಿಲ್ಲುವಂತೆ ಮಾಡುತ್ತೆ.. ಹಾಗೆ ಅವರೊಬ್ಬ ಸಂವೇದನಾಶೀಲ ಕವಿ ಆಗಿದ್ರು.. ಅವರ ಊಂಛಾಯೀ ಅನ್ನೋ ಕವಿತೆಯಲ್ಲಿ ಒಂದು ಕಡೆ ಅವರ ಸರಳತೆಯನ್ನ ಪ್ರದರ್ಶಿದ್ದು ಹೀಗೆ..

ಮೇರೆ ಪ್ರಭು, ಮುಝೆ ಇತ್ ನೀ ಊಂಛಾಯೀ ಕಭಿ ಮತ್ ದೇನಾ,
ಗೈರೋಂ ಕೊ ಗಲೇ ಲಾ ಲಗಾ ಸಕೊಂ,
ಇತ್ ನೀ ರುಖಾಯೇ ಕಭಿ ಮತ್ ದೇನಾ.

(ಓ ಪ್ರಭು, ನನ್ನನ್ನ ಇಷ್ಟೊಂದು ಎತ್ತರದವನಾಗಿ ಎಂದೂ ಮಾಡಬೇಡ, ನನ್ನ ಜನರನ್ನ ಅಪ್ಪಿಕೊಳ್ಳಲು ಆಗದಷ್ಟು ಒಣ ಮನಸ್ಸಿನವನಾಗಿ, ಎಂದೂ ಮಾಡಬೇಡ)

dogg

ಹಲವು ಬಾರಿ ವಾಜಪೇಯಿ ಕವಿಯಾಗಿ ಹಲವು ಸಾಲುಗಳನ್ನ ಹೇಳಿದ್ದಾರೆ, ಬರೆದಿದ್ದಾರೆ. ಬಿಜೆಪಿ ಒಡೆದು ಹೋದಾಗ ಕದಮ್ ಮಿಲಾಕರ್ ಚಲ್‍ನಾ ಹೋಗಾ ಅಂತ ಹಾಡಿದವರು ವಾಜಪೇಯಿ. ಸಿಕ್ಕ ಸಮಯದಲ್ಲಿ ಮಾನವೀಯತೆ, ಮೌಲ್ಯಗಳು ಸಂವೇದನಾಶೀಲತೆಯನ್ನ ಮೆರೆದವರು ಎಲ್ಲರ ಪ್ರೀತಿಯ ಅಟಲ್‍ಜೀ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari Vajpayeeformer Prime Ministernaya gata hoonpoetPublic TVSchool Daysಅಜಾತ ಶತ್ರುಅಟಲ್ ಕವಿತೆಅಟಲ್ ಬಾಲ್ಯಅಟಲ್ ಬಿಹಾರಿ ವಾಜಪೇಯಿಅಟಲ್ ಶಾಲಾ ದಿನಗೀತ್ ನಯಾ ಗಾತಾ ಹೂಂಪಬ್ಲಿಕ್ ಟಿವಿಮಾಜಿ ಪ್ರಧಾನಿವಾಜಪೇಯಿ ಕವಿವಾಜಪೇಯಿ ಕವಿತೆವಾಜಪೇಯಿ ಬಾಲ್ಯ
Share This Article
Facebook Whatsapp Whatsapp Telegram

Cinema news

vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories
Kamal R Khan
ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್
Bollywood Cinema Crime Latest Top Stories
Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood

You Might Also Like

KR Puram Hit And Run Delivery Boy Death
Bengaluru City

ಬೆಂಗಳೂರಲ್ಲಿ ಹಿಟ್ & ರನ್‌ಗೆ ಡೆಲಿವರಿ ಬಾಯ್ ಬಲಿ

Public TV
By Public TV
5 minutes ago
pm modi rozgar mela
Latest

18ನೇ ರೋಜಗಾರ್ ಮೇಳದಲ್ಲಿ 61,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಮೋದಿ

Public TV
By Public TV
6 minutes ago
Republic Day 2
Latest

Republic Day 2026 | ದೆಹಲಿ ಪರೇಡ್‌ಗೆ ಕರ್ನಾಟಕದ 12 ವಿದ್ಯಾರ್ಥಿಗಳು ಆಯ್ಕೆ

Public TV
By Public TV
16 minutes ago
Thawar Chand Gehlot Siddaramaiah
Bengaluru City

ಲೋಕಭವನಕ್ಕೆ ಭಾಷಣ ಕಳುಹಿಸಿದ್ದ ಸರ್ಕಾರ – ಗಣರಾಜ್ಯೋತ್ಸವ ಭಾಷಣಕ್ಕೆ ರಾಜ್ಯಪಾಲರ ಅಧಿಕೃತ ಮುದ್ರೆ

Public TV
By Public TV
30 minutes ago
encounter
Crime

ಭದ್ರತಾ ಪಡೆಗಳ ಗುಂಡಿಗೆ ಐವರು ಮಹಿಳೆಯರು ಸೇರಿ 17 ಮಂದಿ ನಕ್ಸಲರು ಬಲಿ

Public TV
By Public TV
37 minutes ago
revenu dept staff
Kalaburagi

ಲಂಚ ಪಡೆಯುವಾಗ ಕಂದಾಯ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?