Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಜಪೇಯಿಯವರ ಬಾಲ್ಯದ ಅಚ್ಚರಿಯ ಮಾಹಿತಿಯಿದು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಾಜಪೇಯಿಯವರ ಬಾಲ್ಯದ ಅಚ್ಚರಿಯ ಮಾಹಿತಿಯಿದು!

Latest

ವಾಜಪೇಯಿಯವರ ಬಾಲ್ಯದ ಅಚ್ಚರಿಯ ಮಾಹಿತಿಯಿದು!

Public TV
Last updated: August 16, 2018 6:25 pm
Public TV
Share
3 Min Read
h180520031
The Prime Minister Shri Atal Bihari Vajpayee speaking to the mediapersons at Manali airport before his departure for New Delhi on May 18, 2003 (Sunday).
SHARE

ಭಾರತದ ದೇಶದ ಮಹಾನ್ ರಾಜಕೀಯ ನಾಯಕರಾದ ಅಟಲ್‍ಜೀ ಅವರ ಜನನವಾದದ್ದು ಮಧ್ಯಪ್ರದೇಶದ ಗ್ವಾಲಿಯರ್ ನ ಶಿಂಧೆಯ ದಂಡು ಪ್ರದೇಶದಲ್ಲಿ. ಸುಸಂಸ್ಕೃತ ಮನೆತನದಲ್ಲಿ ಜನಿಸಿದರು. ಅವರು ಜನಿಸಿದ್ದು 1924ರ ಡಿಸೆಂಬರ್ 25 ರಂದು.

ಅಟಲ್ ಅವರ ತಂದೆ ಕೃಷ್ಣಬಿಹಾರಿ ವಾಜಪೇಯಿ, ತಾಯಿ ಕೃಷ್ಣಾದೇವಿ. ತಂದೆ-ತಾಯಿ ಚಿಂತನೆ ಮಾಡಿ ಮಗುವಿಗೆ `ಅಟಲ್ ಬಿಹಾರಿ’ ಎಂದು ನಾಮಕರಣ ಮಾಡಿದರು. ಅಟಲ್ ಎಂದರೆ `ಗಟ್ಟಿ’ (ಕಾರ್ಯಸಾಧಕ) ಎಂದರ್ಥ. ಬಿಹಾರಿ ಎಂದರೆ `ವಿಚಾರ ಮಾಡುವವ’ ಎಂದರ್ಥ. ನಿಜವಾಗಿಯೂ ಒಬ್ಬ ಮಹಾನ್ ಗಟ್ಟಿ ವಿಚಾರಶೀಲ ವ್ಯಕ್ತಿಯಾಗಿದ್ದರು ಅಟಲ್ ಬಿಹಾರಿ.

ಶಿಶುವಿನ ಚಂಚಲತೆ, ಹೊಳೆಯುವ ಕಣ್ಣುಗಳು, ದಷ್ಟ-ಪುಷ್ಟ ಶರೀರ, ಲವಲವಿಕೆಯ ಮುಖ ಸದಾ ಮುಗಳ್ನಗು ಮತ್ತು ಎಲ್ಲರೊಂದಿಗೂ ಬೆರೆಯುವ ಗುಣ ಅವರಲ್ಲಿತ್ತು. ಮಗುವನ್ನು ಒಮ್ಮೆ ನೋಡಿದರೆ ಸಾಕು ಯಾರಿಗಾದರೂ ಎತ್ತಿ ಮುದ್ದಾಡಬೇಕೆಂಬ ಆಸೆಯಾಗುತ್ತಿತ್ತು. ಹಾಗಿದ್ದರು ಅಟಲ್‍ರವರು.

h040120032

ಚಿಕ್ಕಂದಿನಿಂದಲೇ ಅಕ್ಷರದ ಜ್ಞಾನ ಬೆಳೆಸಿಕೊಳ್ಳುವ ಹಾಗೆ ಮನೆಯವರು ಪ್ರಯತ್ನಿಸುತ್ತಿದ್ದರು. ಹಾಗೇ ಬೇಗನೆ ಎಬ್ಬಿಸಿ ತಣ್ಣೀರು ಸ್ನಾನ ಮಾಡಿಸಿ ಜಪ-ತಪ, ಮಂತ್ರ ಪಠಣ, ರಾಮಾಯಣ, ಮಹಾಭಾರತ, ಗೀತೆ ಮತ್ತು ಶ್ರೀ ಮದ್ಭಾಗವತದ ಅಧ್ಯಯನದಲ್ಲಿ ತೊಡಗಿಸುತ್ತಿದ್ದರು ಮತ್ತು ಇತರೆ ಭಾಷೆಯ ಗ್ರಂಥಗಳನ್ನು ಅಭ್ಯಸಿಸಲು ಹೇಳುತ್ತಿದ್ದರು.

ಬಾಲಕ ಅಟಲ್‍ರನ್ನು ನಂತರದ ದಿನಗಳಲ್ಲಿ ಶಾಲೆಗೆ ಸೇರಿಸಿದರು. ಶಾಲೆಯಲ್ಲಿ ಮಾಡಿದ ಪಾಠ ತಿಳಿಯದೆ ಇದ್ದಾಗ ತನ್ನ ತಂದೆ ಸ್ವಂತ ಅಧ್ಯಾಪಕರಿರುವುದರಿಂದ ಅವರನ್ನು ಕೇಳಿ ತಿಳಿದುಕೊಳ್ಳುವುದಕ್ಕೆ ಅಟಲ್‍ಜೀ ಹಾತೊರೆಯುತ್ತಿದ್ದರು. ಶಾಲೆಗೆ ಚಕ್ಕರ್ ಹೊಡೆಯದೆ ಓದು ಮತ್ತು ಮನೆಪಾಠಗಳಲ್ಲಿ ನಿರತರಾಗಿದ್ದರು.

ಅಟಲ್‍ರವರು ಗ್ವಾಲಿಯರ್ ನಲ್ಲಿದ್ದ ಗೋರಖಿ ವಿದ್ಯಾಲಯದ ಮಿಡಲ್ ಪರೀಕ್ಷೆ ಪಾಸು ಮಾಡಿದರು. ಅಭ್ಯಾಸದಲ್ಲಿ ಅವರು ಯಾವತ್ತು ಹಿಂದೆ ಬೀಳದವರು. ಎಲ್ಲಾ ವಿದ್ಯಾರ್ಥಿಗಳಿಗಿಂತ ಪತ್ರಿಭಾವಂತ ವಿದ್ಯಾರ್ಥಿಯಾಗಿದ್ದರು. ಹೈಸ್ಕೂಲಿನಲ್ಲಿ ನಡೆಯುವ ಚರ್ಚಾಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಜಾಣತನದ ಮಾತು ಹಾಗೂ ನಡವಳಿಕೆಗಳಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಯಾವುದೇ ಪರೀಕ್ಷೆ ಇರಲಿ ಅದರಲ್ಲಿ ಕ್ಲಾಸಿಗೆ ಪ್ರಥಮ ರ‍್ಯಾಂಕ್ ಬರುತ್ತಿದ್ದರು. ಶಾಲಾ ಪಠ್ಯಪುಸ್ತಕಗಳಿಗಿಂತ ಆಧ್ಯಾತ್ಮಿಕ, ಪೌರಾಣಿಕ, ಭಾಗವತ, ರಾಮಾಯಣ ಮತ್ತು ಮಹಾಭಾರತ ಪುಸ್ತಕಗಳ ಓದಿನಲ್ಲೇ ಅವರಿಗೆ ಹೆಚ್ಚು ಆಸಕ್ತಿ. ಕತೆ, ಕಾದಂಬರಿ ಹಾಗೂ ವಿಚಾರ ಸಾಹಿತ್ಯ ಅವರಿಗೆ ಅಚ್ಚುಮೆಚ್ಚು, ಕಬಡ್ಡಿ ಎಂದರೆ ಅತಿ ಇಷ್ಟವಾದ ಆಟ. ಅವರೊಬ್ಬ ಉತ್ತಮ ಕಬ್ಬಡಿ ಪಟುವೂ ಹೌದು.

h010520031

ತಂದೆಯ ಕವಿತೆಗಳನ್ನು ಕೇಳಿ ಕೇಳಿ ತಾನು ಪ್ರಾಸಬದ್ಧವಾಗಿ ಹೇಳತೊಡಗಿದ, ಮಾತಿನ ಗಾದೆ, ಹೋಲಿಕೆ, ತಿಳಿಹಾಸ್ಯ, ವ್ಯಂಗ್ಯಗಳನ್ನು ಹೇಗೆ ಪ್ರಯೋಗಿಸಬೇಕೆಂಬುದನ್ನು ತಂದೆಯಿಂದ ಕಲಿತರು. ಹಾಗೇ ನಮ್ಮ ದೇಶದ ಹಬ್ಬ ಹರಿದಿನ ಸಾಂಸ್ಕೃತಿಕ ಪರಂಪರೆಯನ್ನು ಗಟ್ಟಿಯಾಗಿ ಮೈಗೂಡಿಕೊಂಡು ಬೆಳೆದರು.

ಅಟಲ್ ಜೀ ಅವರ ಬಾಲ್ಯದ ದಿನಗಳನ್ನು ಮೆಲುಕು ಹಾಕಿದಾಗ ಮನೆಯಲ್ಲಿ ಶುದ್ಧ ಭಾರತೀಯ ವಾತಾವರಣ, ಸುಸಂಸ್ಕೃತ, ಆಧ್ಯಾತ್ಮಕದ ಪರಿಸರ, ಆರ್ಯ ಸಮಾಜದ ನಾಯಕರು ಮತ್ತು ಕಾರ್ಯಕರ್ತರು ತಂದೆಯನ್ನು ಕಾಣಲು ಸದಾ ಬರುತ್ತಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರೂ ಆಗಮಿಸುತ್ತಿದ್ದರು. ವಂಶಾನುಕ್ರಮ ಮತ್ತು ಮನೆಯ ವಾತಾವರಣದ ಉಜ್ವಲ ರಾಷ್ಟ್ರಭಕ್ತಿ ಅವರಿಗೆ ದೊರೆತ ಪರಿಸರ ಅವರ ವ್ಯಕ್ತಿತ್ವದ ಮೇಲೆ ಸಾಕಷ್ಟು ಪರಿಣಾಮವನ್ನುಂಟು ಮಾಡಿತು. ಇದುವೇ ಮುಂದೆ ದೇಶ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿತು.

ಅಟಲ್ ಹೈಸ್ಕೂಲ್ ದಿನಗಳಿಂದಲೂ ಉತ್ತಮ ಭಾಷಣಕಾರರಾಗಿದ್ದರು. ಭಾಷಣಕಾರನ ಸತ್ವ, ಕತೆಗಾರಿಕೆ ಮತ್ತು ಗುಣಗಳು ಅಟಲ್‍ಗೆ ಅವರ ತಂದೆ ಮತ್ತು ತಾತನಿಂದ ಬಳುವಳಿಯಾಗಿ ಹರಿದು ಬಂದಿದೆ ಎನ್ನಬಹುದು. ಏಕೆಂದರೆ ಅವರಿಬ್ಬರೂ ಕೂಡ ಉತ್ತಮ ವಾಗ್ಮಿಗಳಾಗಿದ್ದರು.

h290520034

ಕಾವ್ಯಮಯವಾದ ಭಾಷೆ, ಪ್ರಾಸಬದ್ಧ ಮಾತು, ಚುರುಕು ಮತ್ತು ಚಾಟಿಯೇಟಿನಂತಹ ನುಡಿ ಅವರ ಮಾತುಗಾರಿಕೆಯಾಗಿತ್ತು. ಶಾಲಾ ದಿನಗಳಲ್ಲಿ ತಮ್ಮ ಸಹಪಾಠಿಗಳೊಂದಿಗೆ ಉತ್ತಮ ಸ್ಪರ್ಧೆಯನ್ನು ಮಾಡುತ್ತ ಬೆಳೆದ ಇವರಿಗೆ ಮನೆಯ ಕೌಟುಂಬಿಕ ವಾತಾವರಣ ವ್ಯಕ್ತಿತ್ವ ನಿರೂಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು.

(ಮಾಹಿತಿ ಕೃಪೆ: ಬಿ.ಎಚ್.ನಿರಗುಡಿ ಅವರ 2006ರಲ್ಲಿ ಮುದ್ರಣವಾದ ‘ಮಹಾನ್ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿ’ ಕನ್ನಡ ಕೃತಿಯ ವಿವರ)

https://www.youtube.com/watch?v=gopOVPqsjmU

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari VajpayeeAtaljiChildwood Daysformer Prime MinisterPublic TVSchool DaysvajpayeeVajpayee's nameಅಜಾತ ಶತ್ರುಅಟಲ್ ಬಾಲ್ಯಅಟಲ್ ಬಿಹಾರಿ ವಾಜಪೇಯಿಅಟಲ್ ಶಾಲಾ ದಿನಅಟಲ್‍ಜೀಮಾಜಿ ಪ್ರಧಾನಿವಾಜಪೇಯಿವಾಜಪೇಯಿ ಬಾಲ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
4 minutes ago
calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
31 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
38 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
1 hour ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
1 hour ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?