Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಾಜಪೇಯಿಯವರ ಬಾಲ್ಯದ ಅಚ್ಚರಿಯ ಮಾಹಿತಿಯಿದು!

Public TV
Last updated: August 16, 2018 6:25 pm
Public TV
Share
3 Min Read
h180520031
The Prime Minister Shri Atal Bihari Vajpayee speaking to the mediapersons at Manali airport before his departure for New Delhi on May 18, 2003 (Sunday).
SHARE

ಭಾರತದ ದೇಶದ ಮಹಾನ್ ರಾಜಕೀಯ ನಾಯಕರಾದ ಅಟಲ್‍ಜೀ ಅವರ ಜನನವಾದದ್ದು ಮಧ್ಯಪ್ರದೇಶದ ಗ್ವಾಲಿಯರ್ ನ ಶಿಂಧೆಯ ದಂಡು ಪ್ರದೇಶದಲ್ಲಿ. ಸುಸಂಸ್ಕೃತ ಮನೆತನದಲ್ಲಿ ಜನಿಸಿದರು. ಅವರು ಜನಿಸಿದ್ದು 1924ರ ಡಿಸೆಂಬರ್ 25 ರಂದು.

ಅಟಲ್ ಅವರ ತಂದೆ ಕೃಷ್ಣಬಿಹಾರಿ ವಾಜಪೇಯಿ, ತಾಯಿ ಕೃಷ್ಣಾದೇವಿ. ತಂದೆ-ತಾಯಿ ಚಿಂತನೆ ಮಾಡಿ ಮಗುವಿಗೆ `ಅಟಲ್ ಬಿಹಾರಿ’ ಎಂದು ನಾಮಕರಣ ಮಾಡಿದರು. ಅಟಲ್ ಎಂದರೆ `ಗಟ್ಟಿ’ (ಕಾರ್ಯಸಾಧಕ) ಎಂದರ್ಥ. ಬಿಹಾರಿ ಎಂದರೆ `ವಿಚಾರ ಮಾಡುವವ’ ಎಂದರ್ಥ. ನಿಜವಾಗಿಯೂ ಒಬ್ಬ ಮಹಾನ್ ಗಟ್ಟಿ ವಿಚಾರಶೀಲ ವ್ಯಕ್ತಿಯಾಗಿದ್ದರು ಅಟಲ್ ಬಿಹಾರಿ.

ಶಿಶುವಿನ ಚಂಚಲತೆ, ಹೊಳೆಯುವ ಕಣ್ಣುಗಳು, ದಷ್ಟ-ಪುಷ್ಟ ಶರೀರ, ಲವಲವಿಕೆಯ ಮುಖ ಸದಾ ಮುಗಳ್ನಗು ಮತ್ತು ಎಲ್ಲರೊಂದಿಗೂ ಬೆರೆಯುವ ಗುಣ ಅವರಲ್ಲಿತ್ತು. ಮಗುವನ್ನು ಒಮ್ಮೆ ನೋಡಿದರೆ ಸಾಕು ಯಾರಿಗಾದರೂ ಎತ್ತಿ ಮುದ್ದಾಡಬೇಕೆಂಬ ಆಸೆಯಾಗುತ್ತಿತ್ತು. ಹಾಗಿದ್ದರು ಅಟಲ್‍ರವರು.

h040120032

ಚಿಕ್ಕಂದಿನಿಂದಲೇ ಅಕ್ಷರದ ಜ್ಞಾನ ಬೆಳೆಸಿಕೊಳ್ಳುವ ಹಾಗೆ ಮನೆಯವರು ಪ್ರಯತ್ನಿಸುತ್ತಿದ್ದರು. ಹಾಗೇ ಬೇಗನೆ ಎಬ್ಬಿಸಿ ತಣ್ಣೀರು ಸ್ನಾನ ಮಾಡಿಸಿ ಜಪ-ತಪ, ಮಂತ್ರ ಪಠಣ, ರಾಮಾಯಣ, ಮಹಾಭಾರತ, ಗೀತೆ ಮತ್ತು ಶ್ರೀ ಮದ್ಭಾಗವತದ ಅಧ್ಯಯನದಲ್ಲಿ ತೊಡಗಿಸುತ್ತಿದ್ದರು ಮತ್ತು ಇತರೆ ಭಾಷೆಯ ಗ್ರಂಥಗಳನ್ನು ಅಭ್ಯಸಿಸಲು ಹೇಳುತ್ತಿದ್ದರು.

ಬಾಲಕ ಅಟಲ್‍ರನ್ನು ನಂತರದ ದಿನಗಳಲ್ಲಿ ಶಾಲೆಗೆ ಸೇರಿಸಿದರು. ಶಾಲೆಯಲ್ಲಿ ಮಾಡಿದ ಪಾಠ ತಿಳಿಯದೆ ಇದ್ದಾಗ ತನ್ನ ತಂದೆ ಸ್ವಂತ ಅಧ್ಯಾಪಕರಿರುವುದರಿಂದ ಅವರನ್ನು ಕೇಳಿ ತಿಳಿದುಕೊಳ್ಳುವುದಕ್ಕೆ ಅಟಲ್‍ಜೀ ಹಾತೊರೆಯುತ್ತಿದ್ದರು. ಶಾಲೆಗೆ ಚಕ್ಕರ್ ಹೊಡೆಯದೆ ಓದು ಮತ್ತು ಮನೆಪಾಠಗಳಲ್ಲಿ ನಿರತರಾಗಿದ್ದರು.

ಅಟಲ್‍ರವರು ಗ್ವಾಲಿಯರ್ ನಲ್ಲಿದ್ದ ಗೋರಖಿ ವಿದ್ಯಾಲಯದ ಮಿಡಲ್ ಪರೀಕ್ಷೆ ಪಾಸು ಮಾಡಿದರು. ಅಭ್ಯಾಸದಲ್ಲಿ ಅವರು ಯಾವತ್ತು ಹಿಂದೆ ಬೀಳದವರು. ಎಲ್ಲಾ ವಿದ್ಯಾರ್ಥಿಗಳಿಗಿಂತ ಪತ್ರಿಭಾವಂತ ವಿದ್ಯಾರ್ಥಿಯಾಗಿದ್ದರು. ಹೈಸ್ಕೂಲಿನಲ್ಲಿ ನಡೆಯುವ ಚರ್ಚಾಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಜಾಣತನದ ಮಾತು ಹಾಗೂ ನಡವಳಿಕೆಗಳಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಯಾವುದೇ ಪರೀಕ್ಷೆ ಇರಲಿ ಅದರಲ್ಲಿ ಕ್ಲಾಸಿಗೆ ಪ್ರಥಮ ರ‍್ಯಾಂಕ್ ಬರುತ್ತಿದ್ದರು. ಶಾಲಾ ಪಠ್ಯಪುಸ್ತಕಗಳಿಗಿಂತ ಆಧ್ಯಾತ್ಮಿಕ, ಪೌರಾಣಿಕ, ಭಾಗವತ, ರಾಮಾಯಣ ಮತ್ತು ಮಹಾಭಾರತ ಪುಸ್ತಕಗಳ ಓದಿನಲ್ಲೇ ಅವರಿಗೆ ಹೆಚ್ಚು ಆಸಕ್ತಿ. ಕತೆ, ಕಾದಂಬರಿ ಹಾಗೂ ವಿಚಾರ ಸಾಹಿತ್ಯ ಅವರಿಗೆ ಅಚ್ಚುಮೆಚ್ಚು, ಕಬಡ್ಡಿ ಎಂದರೆ ಅತಿ ಇಷ್ಟವಾದ ಆಟ. ಅವರೊಬ್ಬ ಉತ್ತಮ ಕಬ್ಬಡಿ ಪಟುವೂ ಹೌದು.

h010520031

ತಂದೆಯ ಕವಿತೆಗಳನ್ನು ಕೇಳಿ ಕೇಳಿ ತಾನು ಪ್ರಾಸಬದ್ಧವಾಗಿ ಹೇಳತೊಡಗಿದ, ಮಾತಿನ ಗಾದೆ, ಹೋಲಿಕೆ, ತಿಳಿಹಾಸ್ಯ, ವ್ಯಂಗ್ಯಗಳನ್ನು ಹೇಗೆ ಪ್ರಯೋಗಿಸಬೇಕೆಂಬುದನ್ನು ತಂದೆಯಿಂದ ಕಲಿತರು. ಹಾಗೇ ನಮ್ಮ ದೇಶದ ಹಬ್ಬ ಹರಿದಿನ ಸಾಂಸ್ಕೃತಿಕ ಪರಂಪರೆಯನ್ನು ಗಟ್ಟಿಯಾಗಿ ಮೈಗೂಡಿಕೊಂಡು ಬೆಳೆದರು.

ಅಟಲ್ ಜೀ ಅವರ ಬಾಲ್ಯದ ದಿನಗಳನ್ನು ಮೆಲುಕು ಹಾಕಿದಾಗ ಮನೆಯಲ್ಲಿ ಶುದ್ಧ ಭಾರತೀಯ ವಾತಾವರಣ, ಸುಸಂಸ್ಕೃತ, ಆಧ್ಯಾತ್ಮಕದ ಪರಿಸರ, ಆರ್ಯ ಸಮಾಜದ ನಾಯಕರು ಮತ್ತು ಕಾರ್ಯಕರ್ತರು ತಂದೆಯನ್ನು ಕಾಣಲು ಸದಾ ಬರುತ್ತಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರೂ ಆಗಮಿಸುತ್ತಿದ್ದರು. ವಂಶಾನುಕ್ರಮ ಮತ್ತು ಮನೆಯ ವಾತಾವರಣದ ಉಜ್ವಲ ರಾಷ್ಟ್ರಭಕ್ತಿ ಅವರಿಗೆ ದೊರೆತ ಪರಿಸರ ಅವರ ವ್ಯಕ್ತಿತ್ವದ ಮೇಲೆ ಸಾಕಷ್ಟು ಪರಿಣಾಮವನ್ನುಂಟು ಮಾಡಿತು. ಇದುವೇ ಮುಂದೆ ದೇಶ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿತು.

ಅಟಲ್ ಹೈಸ್ಕೂಲ್ ದಿನಗಳಿಂದಲೂ ಉತ್ತಮ ಭಾಷಣಕಾರರಾಗಿದ್ದರು. ಭಾಷಣಕಾರನ ಸತ್ವ, ಕತೆಗಾರಿಕೆ ಮತ್ತು ಗುಣಗಳು ಅಟಲ್‍ಗೆ ಅವರ ತಂದೆ ಮತ್ತು ತಾತನಿಂದ ಬಳುವಳಿಯಾಗಿ ಹರಿದು ಬಂದಿದೆ ಎನ್ನಬಹುದು. ಏಕೆಂದರೆ ಅವರಿಬ್ಬರೂ ಕೂಡ ಉತ್ತಮ ವಾಗ್ಮಿಗಳಾಗಿದ್ದರು.

h290520034

ಕಾವ್ಯಮಯವಾದ ಭಾಷೆ, ಪ್ರಾಸಬದ್ಧ ಮಾತು, ಚುರುಕು ಮತ್ತು ಚಾಟಿಯೇಟಿನಂತಹ ನುಡಿ ಅವರ ಮಾತುಗಾರಿಕೆಯಾಗಿತ್ತು. ಶಾಲಾ ದಿನಗಳಲ್ಲಿ ತಮ್ಮ ಸಹಪಾಠಿಗಳೊಂದಿಗೆ ಉತ್ತಮ ಸ್ಪರ್ಧೆಯನ್ನು ಮಾಡುತ್ತ ಬೆಳೆದ ಇವರಿಗೆ ಮನೆಯ ಕೌಟುಂಬಿಕ ವಾತಾವರಣ ವ್ಯಕ್ತಿತ್ವ ನಿರೂಪಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು.

(ಮಾಹಿತಿ ಕೃಪೆ: ಬಿ.ಎಚ್.ನಿರಗುಡಿ ಅವರ 2006ರಲ್ಲಿ ಮುದ್ರಣವಾದ ‘ಮಹಾನ್ ಮುತ್ಸದ್ಧಿ ಅಟಲ್ ಬಿಹಾರಿ ವಾಜಪೇಯಿ’ ಕನ್ನಡ ಕೃತಿಯ ವಿವರ)

https://www.youtube.com/watch?v=gopOVPqsjmU

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Atal Bihari VajpayeeAtaljiChildwood Daysformer Prime MinisterPublic TVSchool DaysvajpayeeVajpayee's nameಅಜಾತ ಶತ್ರುಅಟಲ್ ಬಾಲ್ಯಅಟಲ್ ಬಿಹಾರಿ ವಾಜಪೇಯಿಅಟಲ್ ಶಾಲಾ ದಿನಅಟಲ್‍ಜೀಮಾಜಿ ಪ್ರಧಾನಿವಾಜಪೇಯಿವಾಜಪೇಯಿ ಬಾಲ್ಯ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
6 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
7 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
7 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
9 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
3 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
3 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
3 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
4 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
4 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?