ಚಿತ್ರದುರ್ಗ: ಎಟಿಎಂ ಮಷೀನ್ ಒಡೆದು ಹಣ ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕಜಾಜೂರು ಗ್ರಾಮದ ಕೆನೆರಾ ಬ್ಯಾಂಕ್ ಪಕ್ಕದಲ್ಲೇ ಇದ್ದ ಕೆನೆರಾ ಎಟಿಎಂನಲ್ಲಿ ಹಣದ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ಗ್ರಾಮದ ಹೂವಿನ ವ್ಯಾಪಾರಿ ನಂದೀಶ(26) ಎಂಬ ವ್ಯಕ್ತಿ ಕುಡಿದ ಆಮಲಿನಲ್ಲಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ಸಿಸಿ ಕ್ಯಾಮೆರಾ ಒಡೆಯುವಾಗ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ
ಸಾರ್ವಜನಿಕರು ನೀಡಿದ ಮಾಹಿತಿಯ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯ ಕುರಿತು ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.