ಬೆಳಗಾವಿ: ರಾಮನವಮಿ (Rama Navami) ಮೆರವಣಿಗೆ ವೇಳೆ ಕನ್ನಡ ಧ್ವಜ ಹಾರಿಸಿದ ಯುವಕನ ಮೇಲೆ ಮರಾಠಿ (Marathi) ಭಾಷಿಕ ಪುಂಡರಿಂದ ಹಲ್ಲೆ ನಡೆದಿರುವ ಘಟನೆ ಬೆಳಗಾವಿ (Belagavi) ನಗರದಲ್ಲಿ ನಡೆದಿದೆ.
ನಗರದ ತಿಲಕ್ ಚೌಕ್ ಬಳಿ ಗುರುವಾರ ರಾತ್ರಿ ರಾಮನವಮಿ ಮೆರವಣಿಗೆ ವೇಳೆ ನೂರಾರು ಯುವಕರು ಭಗವಾಧ್ವಜ ಹಿಡಿದು ಭಾಗಿಯಾಗಿದ್ದರು. ಈ ವೇಳೆ ಕನ್ನಡ ಬಾವುಟ (Kannada flag) ಹಿಡಿದು ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಮಂಜುನಾಥ ಢಂಗ ಜೊತೆಗೆ ಮರಾಠಿ ಭಾಷಿಕ ಪುಂಡರು ವಾಗ್ವಾದ ನಡೆಸಿದ್ದಾರೆ. ಏಕಾಏಕಿ ಗಲಾಟೆ ಶುರುಮಾಡಿ ಮಂಜುನಾಥ ಢಂಗ ಅವರ ಮೇಲೆ ಹಲ್ಲೆ ನಡೆಸಿ, ಕನ್ನಡ ಬಾವುಟಕ್ಕೆ ಅಪಮಾನ ಮಾಡಿದ್ದಾರೆ. ಇದನ್ನೂ ಓದಿ: ಹಿಜಬ್ ತೆಗೆಸಿ ಮಹಿಳೆಗೆ ಕಿರುಕುಳ ನೀಡಿ ವೀಡಿಯೋ ಮಾಡಿದ್ದ ಆರೋಪಿಗಳ ಬಂಧನ
ಕನ್ನಡಪರ ಸಂಘಟನೆಯ ಹೋರಾಟಗಾರರು ಘಟನೆಯನ್ನು ಖಂಡಿಸಿದ್ದಾರೆ. ಈ ಸಂಬಂಧ ಕಿಡಿಗೇಡಿಗಳ ವಿರುದ್ಧ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ