ಢಾಕಾ: ದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಅತಿ ರಂಜನೆಗೊಳಿಸಲಾಗಿದೆ. ಬಾಂಗ್ಲಾದಲ್ಲಿ (Bangladesh) ಹಿಂದೂಗಳ ಮೇಲಿನ ಹಿಂಸಾತ್ಮಕ ದಾಳಿ ಕೋಮುವಾದಕ್ಕಿಂತಲೂ ಹೆಚ್ಚು ರಾಜಕೀಯ ಪ್ರೇರಿತವಾಗಿದೆ ಎಂದು ಬಾಂಗ್ಲಾ ಸರ್ಕಾರದ ಸಲಹೆಗಾರ ಮುಹಮ್ಮದ್ ಯೂನಸ್ (Muhammad Yunus) ಹೇಳಿಕೆ ನೀಡಿದ್ದಾರೆ.
ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆದ ದಾಳಿಯ ಘಟನೆಗಳನ್ನು ಭಾರತ (India) ಬಿಂಬಿಸಿದ ರೀತಿಯನ್ನು ಯೂನಸ್ ಪ್ರಶ್ನಿಸಿದ್ದಾರೆ. ಈ ಬಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಹಿಂದೂಗಳ ಮೇಲಿನ ದಾಳಿ ಒಂದು ರಾಜಕೀಯ ಪ್ರೇರಿತವಾಗಿದೆ. ಇಲ್ಲಿನ ಹಿಂದೂಗಳು ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್ ಸರ್ಕಾರವನ್ನು ಬೆಂಬಲಿಸಿದ್ದಾರೆ. ಆದ್ದರಿಂದ ಈ ದೌರ್ಜನ್ಯ ಸಂಭವಿಸುತ್ತಿದೆ ಎಂದರು. ಇದನ್ನೂ ಓದಿ: ದರ್ಶನ್ ನೋಡಲು ಬಳ್ಳಾರಿ ಜೈಲಿಗೆ ಬಂದ ವಿಜಯಲಕ್ಷ್ಮಿ
- Advertisement
ಭಾರತದ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ನಾನು ಇದನ್ನು ಮೋದಿಯವರಿಗೂ (Narendra Modi) ಹೇಳಿದ್ದೇನೆ. ಈ ಸಮಸ್ಯೆ ಹಲವಾರು ಆಯಾಮಗಳನ್ನು ಹೊಂದಿದೆ. ಹಸೀನಾ ಮತ್ತು ಅವಾಮಿ ಲೀಗ್ನ ದುಷ್ಕ್ರತ್ಯಗಳ ನಂತರ ದೇಶವು ಕ್ರಾಂತಿಯನ್ನು ಎದುರಿಸಿತು. ಈ ವೇಳೆ ಅವರೊಂದಿಗೆ ಇದ್ದವರು ಕೂಡ ದಾಳಿಗಳನ್ನು ಎದುರಿಸಿದರು ಎಂದು ಹೇಳಿದರು. ಇದನ್ನೂ ಓದಿ: ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ ಪ್ರಕರಣ; ಎಸ್ಡಿಪಿಐ ಕೇಳಿ ಈ ಸರ್ಕಾರ ನಡೀತಿದ್ಯಾ? – ಛಲವಾದಿ ಕಿಡಿ
- Advertisement
ಆಗಸ್ಟ್ 5ರ ನಂತರ ಮಾಜಿ ಪ್ರಧಾನಿ ಹಸೀನಾ ಅವರನ್ನು ಪದಚ್ಯುತಿಗೊಳಿಸಲಾಯಿತು. ನಂತರ ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಪ್ರಾರಂಭಗೊಂಡಿದೆ. ದೇವಾಲಯಗಳು ಹಾಗೂ ಅಂಗಡಿಗಳನ್ನು ಧ್ವಂಸಗೊಳಿಸಲಾಯಿತು. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯಲ್ಲಿ ಭ್ರಷ್ಟಾಚಾರ- ಸಮಗ್ರ ಅಧ್ಯಯನ ವರದಿ ಪಡೆದು ಮುಂದುವರೆಯಿರಿ: ಸಿಎಂಗೆ ಸಿ.ಟಿ.ರವಿ ಆಗ್ರಹ
ಈಗ ಅವಾಮಿ ಲೀಗ್ನ ಕಾರ್ಯಕರ್ತರನ್ನು ಹೊಡೆಯುವಾಗ ಬಾಂಗ್ಲಾದಲ್ಲಿ ಹಿಂದೂಗಳು ಎಂದರೆ ಅವಾಮಿ ಲೀಗ್ನ ಬೆಂಬಲಿಗರು ಎಂಬ ಗ್ರಹಿಕೆಯಿಂದ ಈ ದೌರ್ಜನ್ಯ ನಡೆಯುತ್ತಿದೆ. ನಡೆಯುವುದು ಸರಿ ಎಂದು ನಾನು ಹೇಳುತ್ತಿಲ್ಲ. ಆದರೆ ಅದನ್ನೇ ನೆಪವಾಗಿ ಇಟ್ಟುಕೊಂಡು ಆಸ್ತಿಯನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಈ ಎರಡು ಲೀಗ್ಗಳ ನಡುವೆ ವ್ಯತ್ಯಾಸವೇನಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಶಿಕ್ಷಕರ ಸಮಸ್ಯೆಗೆ ಶೀಘ್ರವೇ ಪರಿಹಾರ: ಸಿದ್ದರಾಮಯ್ಯ
ಇದು ರಾಜಕೀಯವೇ ಹೊರತು ಕೋಮುವಾದವಲ್ಲ. ಭಾರತ ಇದನ್ನು ದೊಡ್ಡ ರೀತಿಯಲ್ಲಿ ಪ್ರಚಾರ ಮಾಡುತ್ತಿದೆ. ನಾವು ಏನೂ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಲಿಲ್ಲ. ನಾವು ಎಲ್ಲವನ್ನೂ ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: Canada | ಅಲ್ಪ ಮತಕ್ಕೆ ಕುಸಿದ ಜಸ್ಟಿನ್ ಟ್ರುಡೊ ಸರ್ಕಾರ