ಬೀದರ್: ಎಟಿಎಂ ಕಳ್ಳತನ ಮಾಡಲು ಯತ್ನಿಸುತ್ತಿದ್ದ ಕಳ್ಳನೊಬ್ಬ ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಬಸ್ ನಿಲ್ದಾಣ ಬಳಿ ನಡೆದಿದೆ.
ಬಸವಕಲ್ಯಾಣ ಪಟ್ಟಣದ ಈಶ್ವರ ಸಿಂಗ್ ಕಾಲೋನಿಯ ರಮೇಶ್ ಕಲ್ಲಮೋಡೆ ಬಂಧಿತ ಆರೋಪಿ. ಎಟಿಎಂ ಯಂತ್ರಗಳನ್ನು ಧ್ವಂಸ ಮಾಡಿ ಹಣ ಕದಿಯಲು ಯತ್ನಿಸುತ್ತಿದ್ದ. ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರಿಗೆ ಅವನು ರೆಡ್ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಇದನ್ನೂ ಓದಿ: ಬಿಜೆಪಿಗೆ ಸೇರಿದರೆ ನನ್ನನ್ನು ಹೇಮಾ ಮಾಲಿನಿಯಾಗಿ ಮಾಡುತ್ತಿದ್ದರು: ಜಯಂತ್ ಚೌಧರಿ
ಕಳ್ಳನನ್ನು ಬಂಧಿಸಿ ಬಸವಕಲ್ಯಾಣ ನಗರ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದು, ಈ ಕುರಿತು ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.