ಹುಬ್ಬಳ್ಳಿ: ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ (Mangaluru Bank Robbery) ಹಾಗೂ ಬೀದರ್ನಲ್ಲಿ ಎಟಿಎಂ ಹಣ ದರೋಡೆ ಪ್ರಕರಣಗಳು ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಈ ಹೊತ್ತಿನಲ್ಲೇ ಹುಬ್ಬಳ್ಳಿಯಲ್ಲಿ ರಾಷ್ಟ್ರೀಕೃತ ಬ್ಯಾಂಕ್ ದರೋಡೆಗೆ ವಿಫಲ ಯತ್ನ ನಡೆದಿದೆ.
Advertisement
ಹುಬ್ಬಳ್ಳಿ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ದರೋಡೆಗೆ ವಿಫಲ ಯತ್ನ ನಡೆದಿದೆ. ಬ್ಯಾಂಕಿನ ಮುಖ್ಯದ್ವಾರದ ಬಾಗಿಲು ಮುರಿದು, ಬೀಗ ಕಟ್ ಮಾಡಿರುವ ದುಷ್ಕರ್ಮಿಗಳು ದರೋಡೆಗೆ ಯತ್ನಿಸಿದ್ದಾರೆ. ಇದಕ್ಕೆ ಬ್ಯಾಂಕ್ ಮುಖ್ಯಾಧಿಕಾರಿಯ ನಿರ್ಲಕ್ಷ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಅವಾಚ್ಯ ಶಬ್ದ ಬಳಸಿ ಸಾಲಗಾರರಿಗೆ ಬೆದರಿಕೆ ಆರೋಪ – ಮೈಕ್ರೋ ಫೈನಾನ್ಸ್ ಬ್ರಾಂಚ್ ಮ್ಯಾನೇಜರ್ ಬಂಧನ
Advertisement
ಬ್ಯಾಂಕ್ ದರೋಡೆ ಮಾಡುವ ಪ್ರಯತ್ನ ನಡೆದಿದ್ದರೂ ವ್ಯವಸ್ಥಾಪಕರು ಪೊಲೀಸರಿಗೆ ದೂರು ಕೊಡದೇ ಹಾರಿಕೆ ಉತ್ತರ ನೀಡುತ್ತಿದ್ದಾರೆ. ಅಲ್ಲದೇ ಮುರಿದ ಬಾಗಿಲು, ಗೇಟ್ಗೆ ವೆಲ್ಡಿಂಗ್ ಮಾಡಿಸಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ಮಾಡ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: PUBLiC TV Impact | ಕಾರ್ಮಿಕರಿಗೆ ಥಳಿತ ಪ್ರಕರಣ – ಮಾಲೀಕ ಸೇರಿ ಮೂವರು ಅರೆಸ್ಟ್