Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

Bengaluru City

ಅತುಲ್ ಸುಭಾಷ್ ಆತ್ಮಹತ್ಯೆ | ಹಣಕ್ಕಾಗಿ ಕೇಸ್‌ ಮೇಲೆ ಕೇಸ್‌ – ಪತ್ನಿ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್‌

Public TV
Last updated: December 11, 2024 3:05 pm
Public TV
Share
3 Min Read
Atul Subhash 1
SHARE

ಬೆಂಗಳೂರು: ಮಾರತಹಳ್ಳಿಯಲ್ಲಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ (Atul Subhash Suicide Case) ಸಂಬಂಧಿಸಿದಂತೆ ಪತ್ನಿ ನಿಕಿತಾ ಸಿಂಘಾನಿಯಾ (Nikita Singhania) ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನಡಿ ಅತುಲ್ ಮಡದಿ ನಿಕಿತಾ ಸಿಂಘಾನಿಯ, ನಿಶಾ ಸಿಂಘಾನಿಯಾ, ಅನುರಾಗ್ ಸಿಂಘಾನಿಯಾ ಹಾಗೂ ಸುಶೀಲ್ ಸಿಂಘಾನಿಯಾ ವಿರುದ್ಧ ಮಾರತಹಳ್ಳಿಯಲ್ಲಿ ಠಾಣೆಯಲ್ಲಿ (Marathahalli Police Station) ಪ್ರಕರಣ ದಾಖಲಾಗಿದೆ.

Marriage

ದೂರಿನಲ್ಲಿ ಏನಿದೆ?
ಅತುಲ್ ಸುಭಾಷ್ ಮತ್ತು ನಿಕಿತಾ ಸಿಂಘಾನಿಯ 2019ರಲ್ಲಿ ಮದುವೆಯಾಗಿದ್ದು ಗಂಡು ಮಗು ಇದೆ. ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್‌ ಸಿಂಘಾನಿಯಾ ಸಂಬಂಧಿ ಸುಶೀಲ್ ಸಿಂಘಾನಿಯಾ ಸೇರಿ ಅತುಲ್ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ಇದನ್ನೂ ಓದಿ: ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

ಪ್ರಕರಣದ ಇತ್ಯರ್ಥಕ್ಕಾಗಿ 3 ಕೋಟಿ ರೂ.ನೀಡಬೇಕೆಂದು ಒತ್ತಾಯ ಮಾಡಿದ್ದರು. ಅಷ್ಟೇ ಅಲ್ಲದೇ ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. 3 ಕೋಟಿ ಹಣ ನೀಡದಿದ್ದರೆ ನೀನು ಬದುಕಬೇಡ. ಆತ್ಮಹತ್ಯೆ ಮಾಡಿಕೋ ಎಂದು ಅಣಕಿಸುತ್ತಿದ್ದರು. ಇದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ನೊಂದು ನನ್ನ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಕಾಸ್ ಕುಮಾರ್ ದೂರು ನೀಡಿದ್ದಾರೆ.

ಮಾರತಹಳ್ಳಿ ಠಾಣೆ ಪಿಎಸ್‌ಐ ನೇತೃತ್ವದಲ್ಲಿ ತಂಡ ರಚನೆಯಾಗಿದ್ದು ಶೀಘ್ರವೇ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ.

Atul Subhash letter

ಏನಿದು ಪ್ರಕರಣ?
ಉತ್ತರ ಪ್ರದೇಶ ಮೂಲದ ಅತುಲ್ ಸುಭಾಷ್ ಖಿನ್ನತೆಗೆ ಒಳಗಾಗಿ 40ಕ್ಕೂ ಹೆಚ್ಚು ಪುಟಗಳ ಡೆತ್ ನೋಟ್ ಬರೆದಿಟ್ಟು ಡಿ.9 ರಂದು ಮಂಜುನಾಥ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಡೆಪ್ಯೂಟಿ ಮ್ಯಾನೇಜರ್‌ ಆಗಿದ್ದ ಇವರು ಸುಮಾರು 40 ಪುಟಗಳ ಡೆತ್ ನೋಟ್ ಬರೆದಿದ್ದ ಇವರು, ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿ ತಾನು ಅನುಭವಿಸಿದ್ದ ಸಂಕಷ್ಟಗಳನ್ನು ವಿವರಿಸಿದ್ದರು.

ಸುಭಾಷ್‌ ಹೇಳಿದ್ದೇನು?
ಪತ್ನಿ ನಿಖಿತಾ ಹಾಗೂ ಆಕೆಯ ಮನೆಯವರು ಚಿತ್ರಹಿಂಸೆ ನೀಡುತ್ತಿದ್ದರು. ನಾನು ಯಾವುದೇ ತಪ್ಪು ಮಾಡದೇ ಇದ್ದರೂ ನನ್ನ ಮೇಲೆ 9 ಪ್ರಕರಣ ದಾಖಲಿಸಿದ್ದರು. ಆರು ಪ್ರಕರಣ ಕೆಳ ನ್ಯಾಯಾಲಯದಲ್ಲಿದ್ದರೆ ಮೂರು ಪ್ರಕರಣಗಳು ಹೈಕೋರ್ಟ್‌ನಲ್ಲಿದೆ. ನಾನು ಬೆಂಗಳೂರಿನಲ್ಲಿದ್ದರೂ 9 ಪ್ರಕರಣಗಳ ವಿಚಾರಣೆಗಾಗಿ ಪದೇ ಪದೇ ಉತ್ತರ ಪ್ರದೇಶಕ್ಕೆ ಹೋಗಬೇಕಿತ್ತು. ಪತ್ನಿ ಕುಟುಂಬದವರ ಹಣದ ಬೇಡಿಕೆಯನ್ನು ಈಡೇರಿಸಿ ನನಗೆ ಸಾಕಾಗಿ ಹೋಗಿದೆ. ನಾನು ದುಡಿದ ಹಣವನ್ನು ಶತ್ರುಗಳಿಗೆ ನೀಡುತ್ತಿದ್ದೆ. ನನ್ನ ದುಡ್ಡಿನಿಂದ ಬಲವಾಗುತ್ತಿದ್ದ ಅವರು ಮತ್ತೆ ನನ್ನ ವಿರುದ್ಧ ಪ್ರಕರಣ ದಾಖಲಿಸುತ್ತಿದ್ದರು. ಒಂದು ಬಾರಿ ಒಂದು ಪ್ರಕರಣವನ್ನು ಪತ್ನಿ ವಾಪಸ್ ಪಡೆದಿದ್ದಳು. ವಾಪಸ್‌ ಪಡೆದ ನಂತರ ಮತ್ತೊಂದು ಪ್ರಕರಣವನ್ನು ದಾಖಲಿಸಿದ್ದಳು.

???? FULL VIDEO OF ATUL SHUBHASH: A Heart-Wrenching Tale of Injustice – Only for Those with a Strong Heart ???? “Everyone should know the truth about him. #JusticeForAtulSubhash #HumanRightsDay2024 pic.twitter.com/oPgSHMfWTK

— RATEINDIANPOLITICIAN.IN (@rateneta) December 10, 2024

ಹಣ ಪಡೆಯಲೆಂದೇ ನನ್ನ ಮೇಲೆ ಸಾಲು ಸಾಲು ಪ್ರಕರಣ ದಾಖಲಾಗುತ್ತಿದ್ದರೂ ಕೋರ್ಟ್‌ ಪತ್ನಿಯ ಪರವಾಗಿಯೇ ಇರುವಂತೆ ವರ್ತಿಸಿತ್ತು. ಉತ್ತರ ಪ್ರದೇಶದ ಕೋರ್ಟ್‌ಗಿಂತಲೂ ಬೆಂಗಳೂರಿನ ಕೋರ್ಟ್‌ಗಳು ಹೆಚ್ಚು ನ್ಯಾಯದ ಪರವಾಗಿವೆ. ನನ್ನ ಎಲ್ಲಾ ಕೇಸ್‌ಗಳನ್ನು ಕರ್ನಾಟಕದಲ್ಲಿ ನಡೆಸಬೇಕು ಎನ್ನುವುದು ನನ್ನ ಮನವಿ. ನ್ಯಾಯ ಸಿಗಬೇಕು ಎನ್ನುವ ಕಾರಣಕ್ಕೆ  ವಿಚಾರಣೆ ಮುಗಿಯುವವರೆಗೂ ಪತ್ನಿಯನ್ನು ಬೆಂಗಳೂರಿನಲ್ಲಿಯೇ ನ್ಯಾಯಾಂಗ ಬಂಧನದಲ್ಲಿ ಇಡಬೇಕು.

ಉತ್ತರಪ್ರದೇಶದ ಜೌನ್‌ಪುರದಲ್ಲಿ ಅತುತ್‌ ಸುಭಾಷ್ ಪರವಾಗಿ ವಾದಿಸಿದ್ದ ವಕೀಲ ಅವಧೇಶ್ ತಿವಾರಿ ಪ್ರತಿಕ್ರಿಯಿಸಿ, ವರದಕ್ಷಿಣೆ, ಹಲ್ಲೆ ಮತ್ತು ಜೀವನಾಂಶದ ಆರೋಪಕ್ಕೆ ಸಂಬಂಧಿಸಿದಂತೆ ಕೇಸ್‌ ದಾಖಲಾಗಿದೆ. ಜುಲೈ 2024 ರಲ್ಲಿ ನ್ಯಾಯಾಲಯದ ಮಗನ ಪೋಷಣೆಗಾಗಿ ಮಾಸಿಕ 40,000 ರೂ. ಪಾವತಿಸುವಂತೆ ಆದೇಶಿಸಿತ್ತು. ಆದರೆ ಪತ್ನಿ ಮಾಡಿದ ಹೆಚ್ಚುವರಿ ಬೇಡಿಕೆಗಳನ್ನು ತಿರಸ್ಕರಿಸಿತ್ತು ಎಂದು ಹೇಳಿದ್ದಾರೆ.

 

TAGGED:Atul Subhash Suicide CasebengaluruNikita Singhaniaಅತುಲ್‌ ಸುಭಾಷ್ನಿಕಿತಾ ಸಿಂಘಾನಿಯಾಬೆಂಗಳೂರು
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

Ajit Pawar Farewell 1
Latest

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಜಿತ್‌ ಪವಾರ್‌ ಅಂತ್ಯಕ್ರಿಯೆ

Public TV
By Public TV
8 minutes ago
Bomb Threat Call
Crime

ದೆಹಲಿ ಶಾಲೆಗಳು, ಪಂಜಾಬ್-ಹರಿಯಾಣ ಸಚಿವಾಲಯಕ್ಕೆ ಬಾಂಬ್ ಬೆದರಿಕೆ

Public TV
By Public TV
15 minutes ago
Sulwadi Prasada Poisoning Case A1 Immadi Mahadevaswamy
Chamarajanagar

ಸುಳ್ವಾಡಿ ವಿಷಪ್ರಸಾದ ದುರಂತ ಕೇಸ್‌: ಮಾದಪ್ಪನ ಬೆಟ್ಟಕ್ಕೆ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಪ್ರವೇಶ ನಿಷೇಧ

Public TV
By Public TV
18 minutes ago
Scott Bessent
Latest

ಭಾರತಕ್ಕೆ ನಾವು 25% ದಂಡ ಹಾಕಿದ ನಂತರವೂ ಯರೋಪ್‌ ಒಪ್ಪಂದ ಮಾಡಿದ್ದು ನಿರಾಸೆಯಾಗಿದೆ: ಅಮೆರಿಕ

Public TV
By Public TV
32 minutes ago
Rajeev Gowda Wife Sahana
Chikkaballapur

ಕತ್ತಲು ಹೋದ ಮೇಲೆ ಬೆಳಕು ಬಂದೇ ಬರುತ್ತೆ – ಬಂಧನಕ್ಕೊಳಗಾದ ಪತಿ ನೆನೆದು ಭಾವುಕರಾದ ರಾಜೀವ್‌ ಗೌಡ ಪತ್ನಿ

Public TV
By Public TV
38 minutes ago
KJ George
Bengaluru City

ಅಧಿಕಾರಿ ಮೇಲೆ ಸಿಎಂ ಶಿಸ್ತು ಕ್ರಮದ ಎಚ್ಚರಿಕೆ – ರಾಜೀನಾಮೆಗೆ ಮುಂದಾಗಿದ್ದ ಜಾರ್ಜ್‌?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?